newsfirstkannada.com

×

Breaking: ಬೆಳ್ಳಂಬೆಳಗ್ಗೆ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ

Share :

Published April 14, 2024 at 9:03am

    ನಿವಾಸದ ಬಳಿ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳಿಂದ ಪರಿಶೀಲನೆ, ತನಿಖೆ

    ಇಂದು ಬೆಳಗಿನ ಜಾವ 5ಗಂಟೆಗೆ ನಟನ ಮನೆ ಮೇಲೆ 5 ಸುತ್ತು ಗುಂಡು

    ಸಲ್ಮಾನ್ ಖಾನ್ ಮನೆಯಲ್ಲಿ ಇದ್ದರೋ, ಇಲ್ವೋ ಎಂಬುವುದು ಸ್ಪಷ್ಟವಿಲ್ಲ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ.

ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್​ ನಟ ಸಲ್ಮಾನ್​ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಇಂದು ಬೆಳಗಿನ ಜಾವಾ 5 ಗಂಟೆ ಸುಮಾರಿಗೆ 2 ಬೈಕ್​ನಲ್ಲಿ ಬಂದ ಅಪರಿಚಿತರು ಅಪಾರ್ಟ್‌ಮೆಂಟ್​ನ ಹೊರ ಭಾಗಕ್ಕೆ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಮನೆಯಲ್ಲಿದ್ದರೋ, ಇಲ್ವೋ ಎಂಬುವುದು ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಬ್ಬರು ಮಕ್ಕಳ ಹತ್ಯೆ ಮಾಡಿ ಜೈಲು ಸೇರಿದ್ದ ತಾಯಿ.. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆ**ತ್ಯೆ

ಈ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕ್ರೈಂ ಬ್ಯಾಂಚ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಇತ್ತ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಸಲ್ಮಾನ್ ಖಾನ್ ಮೇಲೆ ಕೃಷ್ಣಮೃಗ ಕೊಂದ ಆರೋಪವಿದ್ದು, ಇದೇ ಕಾರಣಕ್ಕೆ ಲಾರೆನ್ಸ್ ಬಿಷ್ಣೋಯಿ ಸಲ್ಮಾನ್ ಖಾನ್ ಅನ್ನು ಕೊಲ್ಲಲು ಹಲವಾರು ಭಾರೀ ಬೆದರಿಕೆ ಹಾಕಿದ್ದಾನೆ. ಈ ಕೃತ್ಯವನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್​​ನವರೇ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಬೆಳ್ಳಂಬೆಳಗ್ಗೆ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ

https://newsfirstlive.com/wp-content/uploads/2024/04/SALMAN_KHAN_1.jpg

    ನಿವಾಸದ ಬಳಿ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳಿಂದ ಪರಿಶೀಲನೆ, ತನಿಖೆ

    ಇಂದು ಬೆಳಗಿನ ಜಾವ 5ಗಂಟೆಗೆ ನಟನ ಮನೆ ಮೇಲೆ 5 ಸುತ್ತು ಗುಂಡು

    ಸಲ್ಮಾನ್ ಖಾನ್ ಮನೆಯಲ್ಲಿ ಇದ್ದರೋ, ಇಲ್ವೋ ಎಂಬುವುದು ಸ್ಪಷ್ಟವಿಲ್ಲ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ.

ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್​ ನಟ ಸಲ್ಮಾನ್​ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಇಂದು ಬೆಳಗಿನ ಜಾವಾ 5 ಗಂಟೆ ಸುಮಾರಿಗೆ 2 ಬೈಕ್​ನಲ್ಲಿ ಬಂದ ಅಪರಿಚಿತರು ಅಪಾರ್ಟ್‌ಮೆಂಟ್​ನ ಹೊರ ಭಾಗಕ್ಕೆ ಫೈರಿಂಗ್ ಮಾಡಿ ಪರಾರಿಯಾಗಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಮನೆಯಲ್ಲಿದ್ದರೋ, ಇಲ್ವೋ ಎಂಬುವುದು ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಬ್ಬರು ಮಕ್ಕಳ ಹತ್ಯೆ ಮಾಡಿ ಜೈಲು ಸೇರಿದ್ದ ತಾಯಿ.. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆ**ತ್ಯೆ

ಈ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕ್ರೈಂ ಬ್ಯಾಂಚ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಇತ್ತ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಸಲ್ಮಾನ್ ಖಾನ್ ಮೇಲೆ ಕೃಷ್ಣಮೃಗ ಕೊಂದ ಆರೋಪವಿದ್ದು, ಇದೇ ಕಾರಣಕ್ಕೆ ಲಾರೆನ್ಸ್ ಬಿಷ್ಣೋಯಿ ಸಲ್ಮಾನ್ ಖಾನ್ ಅನ್ನು ಕೊಲ್ಲಲು ಹಲವಾರು ಭಾರೀ ಬೆದರಿಕೆ ಹಾಕಿದ್ದಾನೆ. ಈ ಕೃತ್ಯವನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್​​ನವರೇ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More