ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ HDK ಹೇಳಿದ್ದೇನು?
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ಗೆ ಪ್ರಮುಖ ಅಸ್ತ್ರ
ಮಹಿಳಾ ಆಯೋಗದಿಂದ ಕುಮಾರಸ್ವಾಮಿ ವಿರುದ್ಧ ಸುಮೋಟೋ ಕೇಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಮಂಡ್ಯ ಲೋಕಸಭೆ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಕಾಂಗ್ರೆಸ್ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದೆ.
ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದರು. ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು ನಾನು ಹೇಳಿದ್ದೆ ಬೇರೆ, ನನ್ನ ಹೇಳಿಕೆಯನ್ನು ವಿರೋಧ ಪಕ್ಷದವರು ತಿರುಚಿದ್ದೇ ಬೇರೆ ಎಂದಿದ್ದಾರೆ.
ಕುಮಾರಸ್ವಾಮಿ ಹೇಳಿದ್ದೇನು..?
ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ, ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗುತ್ತದೆ ಎಂಬುವುದನ್ನು ಯೋಚನೆ ಮಾಡಬೇಕಾಗಿದೆ. ನಿಮ್ಮ ಕುಟುಂಬದ ಬದುಕು ಏನಾಗುತ್ತಿದೆ ಎಂಬುವುದನ್ನು ಯೋಚನೆ ಮಾಡಬೇಕಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದರು.
ಮಹಿಳೆಯರು ಸ್ವಾವಲಂಬಿಗಳಾಗಬೇಕು, ಎಲ್ಲದಕ್ಕೂ ಪುರುಷರ ಮುಂದೆ ಕೈಚಾಚುವಂತಾಗಬಾರದು, ತಮ್ಮ ಸಂಸಾರವನ್ನು ತಾವೇ ನಿಭಾಯಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಧ್ಯೇಯ. ಮಹಿಳೆಯರ ಬದುಕು ಸುಲಭವಾಗಿಸಲು ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿ, ರಾಜ್ಯದ ಪ್ರತೀ ಕುಟುಂಬದ ಮಹಿಳೆಯ ಜೀವನಕ್ಕೆ ಆಸರೆಯಾಗಿದೆ.. 1/2 pic.twitter.com/91stxrKMDg
— DK Suresh (@DKSureshINC) April 14, 2024
ಮಹಿಳೆಯನ್ನು ಪಕ್ಷದ ಗುರುತು ಮಾಡಿಕೊಂಡು ಅವರನ್ನೇ ಅವಮಾನಿಸುವ ಏಕೈಕ ಪಕ್ಷ ಎಂದರೆ ಜೆಡಿಎಸ್ ಎಂದು ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕಾಂಗ್ರೆಸ್ನ ದೊಡ್ಡ ದೊಡ್ಡ ನಾಯಕರೇ ಮುಗಿ ಬಿದ್ದಿದ್ದು ಈ ಹೇಳಿಕೆಯನ್ನ ಲೋಕಸಭೆ ಚುನಾವಣೆವರೆಗೆ ಜೀವಂತವಾಗಿರಿಸೋಕೆ ಮುಂದಾಗಿದ್ದಾರೆ. ಸ್ವತಹ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆಂದು ಹೋದಲ್ಲಿ, ಬಂದಲ್ಲಿ ಕಾರ್ಯಕ್ರಮಗಳಲ್ಲಿ ಹೇಳುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
ನ್ಯೂಸ್ ಫಸ್ಟ್ ಜೊತೆ ಮಾತ್ನಾಡಿದ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ, ತಮ್ಮ ರಾಜಕೀಯ ಲಾಭಕ್ಕೆ ಕಿಳುಮಟ್ಟದ ಭಾಷೆ ಬಳಸಿ, ಹೆಣ್ಣು ಮಕ್ಕಳ ವೈಯಕ್ತಿಕ ಜೀವನ, ವ್ಯಕ್ತಿತ್ವವನ್ನು ಹಾಳು ಮಾಡಲಾಗ್ತಿದೆ. ಇದು ಆಕ್ಷೇಪಾರ್ಹ ಹೇಳಿಕೆ. ಇದನ್ನ ಮಹಿಳಾ ಆಯೋಗ ಸಹಿಸಲ್ಲ. ಒಂದು ಹೆಣ್ಣನ್ನು ಗುರಿಯಾಗಿಸಿ ತೇಜೋವದೆ ಮಾಡುವ ಅವಶ್ಯಕತೆ ಇಲ್ಲ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ನೋಟಿಸ್ ಕೊಟ್ಟು ವಿವರಣೆ ಕೇಳುವುದಾಗಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ HDK ಹೇಳಿದ್ದೇನು?
ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ಗೆ ಪ್ರಮುಖ ಅಸ್ತ್ರ
ಮಹಿಳಾ ಆಯೋಗದಿಂದ ಕುಮಾರಸ್ವಾಮಿ ವಿರುದ್ಧ ಸುಮೋಟೋ ಕೇಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಮಂಡ್ಯ ಲೋಕಸಭೆ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಕಾಂಗ್ರೆಸ್ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದೆ.
ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಮಾತನಾಡಿದ್ದರು. ಗ್ಯಾರಂಟಿ ಯೋಜನೆಯಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು ನಾನು ಹೇಳಿದ್ದೆ ಬೇರೆ, ನನ್ನ ಹೇಳಿಕೆಯನ್ನು ವಿರೋಧ ಪಕ್ಷದವರು ತಿರುಚಿದ್ದೇ ಬೇರೆ ಎಂದಿದ್ದಾರೆ.
ಕುಮಾರಸ್ವಾಮಿ ಹೇಳಿದ್ದೇನು..?
ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ, ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಅವರ ಬದುಕು ಏನಾಗುತ್ತದೆ ಎಂಬುವುದನ್ನು ಯೋಚನೆ ಮಾಡಬೇಕಾಗಿದೆ. ನಿಮ್ಮ ಕುಟುಂಬದ ಬದುಕು ಏನಾಗುತ್ತಿದೆ ಎಂಬುವುದನ್ನು ಯೋಚನೆ ಮಾಡಬೇಕಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದರು.
ಮಹಿಳೆಯರು ಸ್ವಾವಲಂಬಿಗಳಾಗಬೇಕು, ಎಲ್ಲದಕ್ಕೂ ಪುರುಷರ ಮುಂದೆ ಕೈಚಾಚುವಂತಾಗಬಾರದು, ತಮ್ಮ ಸಂಸಾರವನ್ನು ತಾವೇ ನಿಭಾಯಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಧ್ಯೇಯ. ಮಹಿಳೆಯರ ಬದುಕು ಸುಲಭವಾಗಿಸಲು ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಿಸಿ, ರಾಜ್ಯದ ಪ್ರತೀ ಕುಟುಂಬದ ಮಹಿಳೆಯ ಜೀವನಕ್ಕೆ ಆಸರೆಯಾಗಿದೆ.. 1/2 pic.twitter.com/91stxrKMDg
— DK Suresh (@DKSureshINC) April 14, 2024
ಮಹಿಳೆಯನ್ನು ಪಕ್ಷದ ಗುರುತು ಮಾಡಿಕೊಂಡು ಅವರನ್ನೇ ಅವಮಾನಿಸುವ ಏಕೈಕ ಪಕ್ಷ ಎಂದರೆ ಜೆಡಿಎಸ್ ಎಂದು ಕಾಂಗ್ರೆಸ್ ನಾಯಕರು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕಾಂಗ್ರೆಸ್ನ ದೊಡ್ಡ ದೊಡ್ಡ ನಾಯಕರೇ ಮುಗಿ ಬಿದ್ದಿದ್ದು ಈ ಹೇಳಿಕೆಯನ್ನ ಲೋಕಸಭೆ ಚುನಾವಣೆವರೆಗೆ ಜೀವಂತವಾಗಿರಿಸೋಕೆ ಮುಂದಾಗಿದ್ದಾರೆ. ಸ್ವತಹ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆಂದು ಹೋದಲ್ಲಿ, ಬಂದಲ್ಲಿ ಕಾರ್ಯಕ್ರಮಗಳಲ್ಲಿ ಹೇಳುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
ನ್ಯೂಸ್ ಫಸ್ಟ್ ಜೊತೆ ಮಾತ್ನಾಡಿದ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ, ತಮ್ಮ ರಾಜಕೀಯ ಲಾಭಕ್ಕೆ ಕಿಳುಮಟ್ಟದ ಭಾಷೆ ಬಳಸಿ, ಹೆಣ್ಣು ಮಕ್ಕಳ ವೈಯಕ್ತಿಕ ಜೀವನ, ವ್ಯಕ್ತಿತ್ವವನ್ನು ಹಾಳು ಮಾಡಲಾಗ್ತಿದೆ. ಇದು ಆಕ್ಷೇಪಾರ್ಹ ಹೇಳಿಕೆ. ಇದನ್ನ ಮಹಿಳಾ ಆಯೋಗ ಸಹಿಸಲ್ಲ. ಒಂದು ಹೆಣ್ಣನ್ನು ಗುರಿಯಾಗಿಸಿ ತೇಜೋವದೆ ಮಾಡುವ ಅವಶ್ಯಕತೆ ಇಲ್ಲ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ನೋಟಿಸ್ ಕೊಟ್ಟು ವಿವರಣೆ ಕೇಳುವುದಾಗಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ