ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ರಣಕಹಳೆ ಜೋರು
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಲಗ್ಗೆ
ಸಕ್ಕರೆ ನಾಡು, ಚಿನ್ನದ ನಾಡಲ್ಲಿ ಕಹಳೆ ಮೊಳಗಿಸಲಿರುವ ‘ರಾಗಾ’
ಮಂಡ್ಯ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ಕಾವೇರಿದೆ. ಘಟಾನುಘಟಿ ನಾಯಕರನ್ನು ಕರೆಸಿ ಅಭ್ಯರ್ಥಿಗಳು ಅಬ್ಬರ ಪ್ರಚಾರ ಮಾಡ್ತಿದ್ದಾರೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ಸಿಎಂ ತವರು ಜಿಲ್ಲೆಯಲ್ಲಿ ರಣಕಹಳೆ ಮೊಳಗಿಸಿದ್ರು. ಇದೀಗ ಕಾಂಗ್ರೆಸ್ ಕೂಡ ರಾಹುಲ್ ಗಾಂಧಿಯನ್ನು ರಾಜ್ಯ ಕರೆಸುತ್ತಿದ್ದಾರೆ. ಇಂದು ರಾಹುಲ್ ಕರ್ನಾಟಕಕ್ಕೆ ಆಗಮಿಸಲಿದ್ದು, ಜೆಡಿಎಸ್ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ಸಕ್ಕರೆ ನಾಡು, ಚಿನ್ನದ ನಾಡಲ್ಲಿ ಕಹಳೆ ಮೊಳಗಿಸಲಿರುವ ‘ರಾಗಾ’
ಗ್ಯಾರೆಂಟಿ ಅಸ್ತ್ರದಿಂದ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಪಣತೊಟ್ಟು ಭರ್ಜರಿ ಕಸರತ್ತು ಮಾಡ್ತಿದೆ. ಈಗಾಗಲೇ ಸಿಎಂ, ಡಿಸಿಎಂ ಕರ್ನಾಟಕದ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಜೋಡೆತ್ತಿನಂತೆ ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಇದೀಗ ಇವರಿಗೆ ಮತ್ತಷ್ಟು ಜೋಶ್ ತುಂಬಲು ಇಂದು ಕರ್ನಾಟಕಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲಿಡಲಿದ್ದಾರೆ.
ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್.. ನೇತ್ರದಾನ ಮಾಡಿ 8 ಜನರಿಗೆ ಬೆಳಕಾದ ‘ಪ್ರಚಂಡ ಕುಳ್ಳ’
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ‘ಕೈ’ ನಾಯಕನ ಮತಬೇಟೆ
ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಕರ್ನಾಟಕದ ಲೋಕ ಅಖಾಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಮಂಡ್ಯ ಗೆದ್ದರೆ ಇಂಡಿಯಾ ಗೆದ್ದಂತೆ ಎಂಬ ಮಾತಿದೆ. ಹೀಗಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್ ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ. ಇಂದು ಮಧ್ಯಾಹ್ನ 1.30ಕ್ಕೆ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಮಂಡ್ಯಕ್ಕೆ ತೆರಳಲಿರುವ ರಾಹುಲ್, ಅಲ್ಲಿ ಮಧ್ಯಾಹ್ನ 2ರಿಂದ 3ರವರೆಗೆ ಸಮಾವೇಶದಲ್ಲಿ ಭಾಗಿ ಮಂಡ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆಗೆ ಕೋಲಾರದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.
ರಾಹುಲ್ ಮಂಡ್ಯ ಭೇಟಿಗೆ ತಕರಾರಿಲ್ಲ ಎಂದ ದಳಪತಿ
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣ್ಣಿಟ್ಟಿದ್ದು, ರಾಹುಲ್ ಗಾಂಧಿ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹವಾ ಜೋರಾಗಿದ್ದು, ಪ್ರಚಾರದ ವೇಳೆ ಭೇಟಿ ನೀಡಿದ ಗ್ರಾಮಗಳಲ್ಲಿ ಅದ್ಧೂರಿ ಸ್ವಾಗತ ಸಿಗ್ತಿದೆ. ಇನ್ನು ರಾಹುಲ್ ಮಂಡ್ಯ ಪ್ರಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಇದಕ್ಕೆ ನಮ್ಮದೇನೂ ತಕರಾರು ಇಲ್ಲ. ರಾಜಕೀಯವಾಗಿ ಪ್ರಚಾರ ಮಾಡಲು ಯಾರು ಬೇಕಾದ್ರು ಬರಬಹುದು. ಇದರಿಂದ ನಮಗೇನು ಲಾಸ್ ಇಲ್ಲ ಎಂದು ದಳಪತಿ ಕಾಂಗ್ರೆಸ್ಗೆ ಮಾತಿನಲ್ಲೇ ಗುದ್ದು ನೀಡಿದ್ದಾರೆ. ಭಾನುವಾರವಷ್ಟೇ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿಗೆ ಪ್ರಧಾನಿ ಮೋದಿ ಬಂದು, ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಇದಕ್ಕೆ ಕೌಂಟರ್ ಎಂಬಂತೆ ಕಾಂಗ್ರೆಸ್, ದಳಪತಿಗಳ ಭದ್ರಕೋಟೆಗೆ ಮಂಡ್ಯದಲ್ಲಿ ರಾಹುಲ್ ಗಾಂಧಿ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ರಣಕಹಳೆ ಜೋರು
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಲಗ್ಗೆ
ಸಕ್ಕರೆ ನಾಡು, ಚಿನ್ನದ ನಾಡಲ್ಲಿ ಕಹಳೆ ಮೊಳಗಿಸಲಿರುವ ‘ರಾಗಾ’
ಮಂಡ್ಯ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ಕಾವೇರಿದೆ. ಘಟಾನುಘಟಿ ನಾಯಕರನ್ನು ಕರೆಸಿ ಅಭ್ಯರ್ಥಿಗಳು ಅಬ್ಬರ ಪ್ರಚಾರ ಮಾಡ್ತಿದ್ದಾರೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ಸಿಎಂ ತವರು ಜಿಲ್ಲೆಯಲ್ಲಿ ರಣಕಹಳೆ ಮೊಳಗಿಸಿದ್ರು. ಇದೀಗ ಕಾಂಗ್ರೆಸ್ ಕೂಡ ರಾಹುಲ್ ಗಾಂಧಿಯನ್ನು ರಾಜ್ಯ ಕರೆಸುತ್ತಿದ್ದಾರೆ. ಇಂದು ರಾಹುಲ್ ಕರ್ನಾಟಕಕ್ಕೆ ಆಗಮಿಸಲಿದ್ದು, ಜೆಡಿಎಸ್ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ಸಕ್ಕರೆ ನಾಡು, ಚಿನ್ನದ ನಾಡಲ್ಲಿ ಕಹಳೆ ಮೊಳಗಿಸಲಿರುವ ‘ರಾಗಾ’
ಗ್ಯಾರೆಂಟಿ ಅಸ್ತ್ರದಿಂದ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಪಣತೊಟ್ಟು ಭರ್ಜರಿ ಕಸರತ್ತು ಮಾಡ್ತಿದೆ. ಈಗಾಗಲೇ ಸಿಎಂ, ಡಿಸಿಎಂ ಕರ್ನಾಟಕದ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಜೋಡೆತ್ತಿನಂತೆ ಅಬ್ಬರದ ಪ್ರಚಾರ ಮಾಡ್ತಿದ್ದಾರೆ. ಇದೀಗ ಇವರಿಗೆ ಮತ್ತಷ್ಟು ಜೋಶ್ ತುಂಬಲು ಇಂದು ಕರ್ನಾಟಕಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲಿಡಲಿದ್ದಾರೆ.
ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್.. ನೇತ್ರದಾನ ಮಾಡಿ 8 ಜನರಿಗೆ ಬೆಳಕಾದ ‘ಪ್ರಚಂಡ ಕುಳ್ಳ’
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ‘ಕೈ’ ನಾಯಕನ ಮತಬೇಟೆ
ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಕರ್ನಾಟಕದ ಲೋಕ ಅಖಾಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಮಂಡ್ಯ ಗೆದ್ದರೆ ಇಂಡಿಯಾ ಗೆದ್ದಂತೆ ಎಂಬ ಮಾತಿದೆ. ಹೀಗಾಗಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್ ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದೆ. ಇಂದು ಮಧ್ಯಾಹ್ನ 1.30ಕ್ಕೆ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಮಂಡ್ಯಕ್ಕೆ ತೆರಳಲಿರುವ ರಾಹುಲ್, ಅಲ್ಲಿ ಮಧ್ಯಾಹ್ನ 2ರಿಂದ 3ರವರೆಗೆ ಸಮಾವೇಶದಲ್ಲಿ ಭಾಗಿ ಮಂಡ್ಯ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆಗೆ ಕೋಲಾರದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.
ರಾಹುಲ್ ಮಂಡ್ಯ ಭೇಟಿಗೆ ತಕರಾರಿಲ್ಲ ಎಂದ ದಳಪತಿ
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣ್ಣಿಟ್ಟಿದ್ದು, ರಾಹುಲ್ ಗಾಂಧಿ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹವಾ ಜೋರಾಗಿದ್ದು, ಪ್ರಚಾರದ ವೇಳೆ ಭೇಟಿ ನೀಡಿದ ಗ್ರಾಮಗಳಲ್ಲಿ ಅದ್ಧೂರಿ ಸ್ವಾಗತ ಸಿಗ್ತಿದೆ. ಇನ್ನು ರಾಹುಲ್ ಮಂಡ್ಯ ಪ್ರಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಇದಕ್ಕೆ ನಮ್ಮದೇನೂ ತಕರಾರು ಇಲ್ಲ. ರಾಜಕೀಯವಾಗಿ ಪ್ರಚಾರ ಮಾಡಲು ಯಾರು ಬೇಕಾದ್ರು ಬರಬಹುದು. ಇದರಿಂದ ನಮಗೇನು ಲಾಸ್ ಇಲ್ಲ ಎಂದು ದಳಪತಿ ಕಾಂಗ್ರೆಸ್ಗೆ ಮಾತಿನಲ್ಲೇ ಗುದ್ದು ನೀಡಿದ್ದಾರೆ. ಭಾನುವಾರವಷ್ಟೇ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿಗೆ ಪ್ರಧಾನಿ ಮೋದಿ ಬಂದು, ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದರು. ಇದಕ್ಕೆ ಕೌಂಟರ್ ಎಂಬಂತೆ ಕಾಂಗ್ರೆಸ್, ದಳಪತಿಗಳ ಭದ್ರಕೋಟೆಗೆ ಮಂಡ್ಯದಲ್ಲಿ ರಾಹುಲ್ ಗಾಂಧಿ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ