ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್
ಇದರ ಬೆನ್ನಲ್ಲೇ ಪ್ರತಿಷ್ಠಿ ಐಸಿಸಿ 2024ರ ಟಿ20 ವಿಶ್ವಕಪ್ ನಡೆಯಲಿದೆ
ಟಿ20 ವಿಶ್ವಕಪ್ನಿಂದ ಹಾರ್ದಿಕ್ ಪಾಂಡ್ಯ ಔಟ್ ಅನ್ನೋ ಮಾಹಿತಿ!
ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ಬೆನ್ನಲ್ಲೇ ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಈ ಮೆಗಾ ಟೂರ್ನಿಗೆ ಸೂಕ್ತ ಆಟಗಾರರನ್ನು ಗುರುತಿಸಲು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಸಾಕಷ್ಟು ಹೋಮ್ ವರ್ಕ್ ನಡೆಸುತ್ತಿದೆ. ಅದಕ್ಕಾಗಿ ಸದ್ಯ ನಡೆಯುತ್ತಿರೋ 2024ರ ಐಪಿಎಲ್ ಮೇಲೆ ಕಣ್ಣಿಟ್ಟಿದೆ.
ಇನ್ನು, ಈಗಾಗಲೇ ಹಲವು ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಪಕ್ಕಾ ಆಗಿದೆ. ಇಷ್ಟಾದ್ರೂ ಮಧ್ಯಮ ಕ್ರಮಾಂಕದಲ್ಲಿ ಯಾರು ಆಡಬೇಕು, ರಿಷಭ್ ಪಂತ್ ಮತ್ತು ಯಶಸ್ವಿ ಜೈಸ್ವಾಲ್ ರೀತಿ ಆಟಗಾರರಿಗೆ ಚಾನ್ಸ್ ಕೊಡಬೇಕಾ? ಬೇಡವೋ? ಅನ್ನೋ ಚರ್ಚೆ ನಡೆಯುತ್ತಿದೆ.
ಇತ್ತೀಚೆಗೆ ಮುಂಬೈನಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ, ಹೆಡ್ ಕೋಚ್ ರಾಹುಲ್ ದ್ರಾವಿಡ್, ಚೀಫ್ ಸೆಲೆಕ್ಷರ್ ಅಜಿತ್ ಅಗರ್ಕರ್ ಮಧ್ಯೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರೋ ಶಿವಂ ದುಬೆಗೆ ಅವಕಾಶ ನೀಡಲಾಗುವುದು. ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲು ಯೋಚಿಸಬೇಕಿದೆ. ಕಾರಣ ಅವರು ಆಯ್ಕೆಯಾಗಬೇಕು ಎಂದರೆ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಬೇಕು ಎಂದಿದ್ದಾರೆ. ಹೀಗಾಗಿ ಪಾಂಡ್ಯ ಅವರಿಗೆ ಭಾರತ ತಂಡದಲ್ಲಿ ಸ್ಥಾನ ಸಿಗೋದು ಡೌಟ್ ಎನ್ನುತ್ತಿವೆ ಮೂಲಗಳು.
ಇದನ್ನೂ ಓದಿ: RCB ಫ್ಯಾನ್ಸ್ಗೆ ಗುಡ್ನ್ಯೂಸ್; ದಿನೇಶ್ ಕಾರ್ತಿಕ್ ಬಗ್ಗೆ ರೋಹಿತ್, ದ್ರಾವಿಡ್ ಮಹತ್ವದ ಸಭೆ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್
ಇದರ ಬೆನ್ನಲ್ಲೇ ಪ್ರತಿಷ್ಠಿ ಐಸಿಸಿ 2024ರ ಟಿ20 ವಿಶ್ವಕಪ್ ನಡೆಯಲಿದೆ
ಟಿ20 ವಿಶ್ವಕಪ್ನಿಂದ ಹಾರ್ದಿಕ್ ಪಾಂಡ್ಯ ಔಟ್ ಅನ್ನೋ ಮಾಹಿತಿ!
ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದ ಬೆನ್ನಲ್ಲೇ ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರೋ ಈ ಮೆಗಾ ಟೂರ್ನಿಗೆ ಸೂಕ್ತ ಆಟಗಾರರನ್ನು ಗುರುತಿಸಲು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಸಾಕಷ್ಟು ಹೋಮ್ ವರ್ಕ್ ನಡೆಸುತ್ತಿದೆ. ಅದಕ್ಕಾಗಿ ಸದ್ಯ ನಡೆಯುತ್ತಿರೋ 2024ರ ಐಪಿಎಲ್ ಮೇಲೆ ಕಣ್ಣಿಟ್ಟಿದೆ.
ಇನ್ನು, ಈಗಾಗಲೇ ಹಲವು ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಪಕ್ಕಾ ಆಗಿದೆ. ಇಷ್ಟಾದ್ರೂ ಮಧ್ಯಮ ಕ್ರಮಾಂಕದಲ್ಲಿ ಯಾರು ಆಡಬೇಕು, ರಿಷಭ್ ಪಂತ್ ಮತ್ತು ಯಶಸ್ವಿ ಜೈಸ್ವಾಲ್ ರೀತಿ ಆಟಗಾರರಿಗೆ ಚಾನ್ಸ್ ಕೊಡಬೇಕಾ? ಬೇಡವೋ? ಅನ್ನೋ ಚರ್ಚೆ ನಡೆಯುತ್ತಿದೆ.
ಇತ್ತೀಚೆಗೆ ಮುಂಬೈನಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ, ಹೆಡ್ ಕೋಚ್ ರಾಹುಲ್ ದ್ರಾವಿಡ್, ಚೀಫ್ ಸೆಲೆಕ್ಷರ್ ಅಜಿತ್ ಅಗರ್ಕರ್ ಮಧ್ಯೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರೋ ಶಿವಂ ದುಬೆಗೆ ಅವಕಾಶ ನೀಡಲಾಗುವುದು. ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡಲು ಯೋಚಿಸಬೇಕಿದೆ. ಕಾರಣ ಅವರು ಆಯ್ಕೆಯಾಗಬೇಕು ಎಂದರೆ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಬೇಕು ಎಂದಿದ್ದಾರೆ. ಹೀಗಾಗಿ ಪಾಂಡ್ಯ ಅವರಿಗೆ ಭಾರತ ತಂಡದಲ್ಲಿ ಸ್ಥಾನ ಸಿಗೋದು ಡೌಟ್ ಎನ್ನುತ್ತಿವೆ ಮೂಲಗಳು.
ಇದನ್ನೂ ಓದಿ: RCB ಫ್ಯಾನ್ಸ್ಗೆ ಗುಡ್ನ್ಯೂಸ್; ದಿನೇಶ್ ಕಾರ್ತಿಕ್ ಬಗ್ಗೆ ರೋಹಿತ್, ದ್ರಾವಿಡ್ ಮಹತ್ವದ ಸಭೆ!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್