ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್ ಚಾಲಕನಿಂದ ಭಯಾನಕ ದುರಂತ
ಟ್ರಕ್ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣ ಸಾವು
ಭೀಕರ ಅಪಘಾತದ ಬಳಿಕ ಘಟನಾ ಸ್ಥಳದಿಂದ ಓಡಿ ಹೋದ ಟ್ರಕ್ ಚಾಲಕ
ಜೈಪುರ: ರಾಜಸ್ಥಾನದಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಹೊಡೆದಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.
ವ್ಯಾನ್ನಲ್ಲಿದ್ದ 10 ಮಂದಿ ಮಧ್ಯಪ್ರದೇಶದ ಖಿಲ್ಚಿಪುರನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ತೆರಳಿದ್ದರು. ರಾಜಸ್ಥಾನದ ಜಲವಾರ್ ಬಳಿ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್, ವ್ಯಾನ್ಗೆ ಗುದ್ದಿದೆ. ಭೀಕರ ದುರಂತದಲ್ಲಿ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ನೇಹಾ ಹತ್ಯೆ ಕೇಸ್ಗೆ ಹೊಸ ಟ್ವಿಸ್ಟ್; ಫಯಾಜ್ ಹೆಸರಲ್ಲಿ ದಿಕ್ಕು ತಪ್ಪಿಸಲು ಕಿಡಿಗೇಡಿಗಳ ಯತ್ನ
ಟ್ರಕ್ ಗುದ್ದಿದ ರಭಸಕ್ಕೆ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 6 ಮಂದಿ ಕೊನೆಯುಸಿರೆಳೆದಿದ್ದಾರೆ. ವ್ಯಾನ್ಗೆ ಗುದ್ದಿದ ಟ್ರಕ್ ಚಾಲಕ ಭೀಕರ ಅಪಘಾತದ ಬಳಿಕ ಓಡಿ ಹೋಗಿದ್ದ. ಕೂಡಲೇ ತನಿಖೆ ನಡೆಸಿದ ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್ ಚಾಲಕನಿಂದ ಭಯಾನಕ ದುರಂತ
ಟ್ರಕ್ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣ ಸಾವು
ಭೀಕರ ಅಪಘಾತದ ಬಳಿಕ ಘಟನಾ ಸ್ಥಳದಿಂದ ಓಡಿ ಹೋದ ಟ್ರಕ್ ಚಾಲಕ
ಜೈಪುರ: ರಾಜಸ್ಥಾನದಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಹೊಡೆದಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.
ವ್ಯಾನ್ನಲ್ಲಿದ್ದ 10 ಮಂದಿ ಮಧ್ಯಪ್ರದೇಶದ ಖಿಲ್ಚಿಪುರನಲ್ಲಿ ನಡೆದ ವಿವಾಹ ಸಮಾರಂಭಕ್ಕೆ ತೆರಳಿದ್ದರು. ರಾಜಸ್ಥಾನದ ಜಲವಾರ್ ಬಳಿ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್, ವ್ಯಾನ್ಗೆ ಗುದ್ದಿದೆ. ಭೀಕರ ದುರಂತದಲ್ಲಿ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ನೇಹಾ ಹತ್ಯೆ ಕೇಸ್ಗೆ ಹೊಸ ಟ್ವಿಸ್ಟ್; ಫಯಾಜ್ ಹೆಸರಲ್ಲಿ ದಿಕ್ಕು ತಪ್ಪಿಸಲು ಕಿಡಿಗೇಡಿಗಳ ಯತ್ನ
ಟ್ರಕ್ ಗುದ್ದಿದ ರಭಸಕ್ಕೆ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 6 ಮಂದಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ 6 ಮಂದಿ ಕೊನೆಯುಸಿರೆಳೆದಿದ್ದಾರೆ. ವ್ಯಾನ್ಗೆ ಗುದ್ದಿದ ಟ್ರಕ್ ಚಾಲಕ ಭೀಕರ ಅಪಘಾತದ ಬಳಿಕ ಓಡಿ ಹೋಗಿದ್ದ. ಕೂಡಲೇ ತನಿಖೆ ನಡೆಸಿದ ಪೊಲೀಸರು ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ