2016ರಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್
ಸಂಬಳದ ಜೊತೆಗೆ ಬಡ್ಡಿಯನ್ನೂ ವಸೂಲಿ ಮಾಡುವಂತೆ ಸೂಚನೆ
ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ದೊಡ್ಡ ಹಿನ್ನೆಡೆ
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಕೋಲ್ಕತ್ತ ಹೈಕೋರ್ಟ್ ರದ್ದುಗೊಳಿಸಿ ಬಿಗ್ ಶಾಕ್ ನೀಡಿದೆ. ಈ ಮೂಲಕ ಸುಮಾರು 25,753 ಶಿಕ್ಷಕರು ಕರ್ತವ್ಯದಿಂದ ವಜಾಗೊಂಡಿದ್ದಾರೆ! ಅವರೆಲ್ಲ ಶಿಕ್ಷಕರ ಹುದ್ದೆಯನ್ನು ಕಳೆದುಕೊಂಡಿದ್ದಾರೆ.
ಮಾತ್ರವಲ್ಲ, ಕೋರ್ಟ್ ಆದೇಶದ ಪ್ರಕಾರ ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ಇಲ್ಲಿಯವರೆಗೆ ತೆಗೆದುಕೊಂಡ ಸಂಬಳವನ್ನು ಹಿಂದಿರುಗಿಸುವಂತೆ ಸೋಚಿಸಿದೆ. ನಾಲ್ಕು ವಾರಗಳ ಒಳಗಾಗಿ ಹಣವನ್ನು ನೀಡುವಂತೆ ಸೂಚನೆ ನೀಡಿದೆ. ಅನರ್ಹಗೊಂಡ ಶಿಕ್ಷಕರಿಂದ ಹಣ ವಸೂಲಿ ಮಾಡುವ ಹೊಣೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ:ವಿವಾದಾತ್ಮಕ ತೀರ್ಪು ವಿರುದ್ಧ ಕೊಹ್ಲಿ ಕಿತ್ತಾಟ; ತೆಂಡುಲ್ಕರ್ ಎಳೆದು ತಂದು ಕೊಹ್ಲಿಗೆ ಕೌಂಟರ್..!
ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಕ್ ಮತ್ತು ಎಂಡಿ ಶಬ್ಬರ್ ರಶೀದಿ ಅವರು ಈ ಆದೇಶ ನೀಡಿದ್ದಾರೆ. 2016ರಲ್ಲಿ ನೇಮಕಾತಿ ಪ್ರವೇಶ ಪರೀಕ್ಷೆಯ 23 ಲಕ್ಷ OMR ಹಾಳೆಗಳನ್ನು (ಪರೀಕ್ಷಾ ಪತ್ರಿಕೆ) ಮರು ಮೌಲ್ಯಮಾಪನ ಮಾಡುವಂತೆ ಪೀಠ ಆದೇಶ ನೀಡಿದೆ. ಖಾಲಿ OMR ಹಾಳೆಗಳನ್ನು ಸಲ್ಲಿಸಿ ಕಾನೂನು ಬಾಹಿರವಾಗಿ ಶಿಕ್ಷಕರು ನೇಮಕಾತಿ ಆಗಿದೆ. ಈ ಹಗರಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಸಿಬಿಐ ಹಗರಣದ ತನಿಖೆಯನ್ನು ನಡೆಸಿತ್ತು.
ಇದನ್ನೂ ಓದಿ: ಇಸ್ರೇಲ್ನ ಭೀಕರ ಯುದ್ಧಕ್ಕೆ ಸಾವನ್ನಪ್ಪಿದ ತಾಯಿ, ಗರ್ಭದಲ್ಲಿದ್ದ ಮಗು ರಕ್ಷಣೆ ಆಗಿದ್ದೇ ದೊಡ್ಡ ಪವಾಡ..!
ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ WBSSCಗೆ (ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ) ಕೋರ್ಟ್ ಮಾಹಿತಿ ಕೇಳಿದೆ. ಖಾಲಿ ಇರುವ 24,000 ಕ್ಕೂ ಶಿಕ್ಷಕರ ಹುದ್ದೆಗಳಿಗೆ 2016 WBSSC ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಹೈಕೋರ್ಟ್ ಆದೇಶದ ವಿರುದ್ಧ ಪಶ್ಚಿಮ ಬಂಗಾಳದ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಇದೇ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಅನೇಕ ತೃಣಮೂಲ ನಾಯಕರು ಮತ್ತು ಮಾಜಿ ಅಧಿಕಾರಿಗಳು ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಪಂದ್ಯ ಮುಗಿದ ಮೇಲೂ ಸುಮ್ಮನಾಗದ ಕೊಹ್ಲಿ, ವಿವಾದಾತ್ಮಕ ತೀರ್ಪಿನ ಬಗ್ಗೆ ಅಂಪೈರ್ ಜೊತೆ ಮತ್ತೆ ಟಾಕ್ ಫೈಟ್..!
ಇದೇ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ 2022ರಲ್ಲಿ ಅರೆಸ್ಟ್ ಆಗಿದ್ದಾರೆ. ಪ್ರಕರಣ ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ವಿಚಾರಣೆ ನಡೆಸಿದ್ದ ಕೋಲ್ಕತ್ತ ಹೈಕೋರ್ಟ್ ಮಾರ್ಚ್ 20 ರಂದು ತೀರ್ಪು ಪೂರ್ಣಗೊಳಿಸಿ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2016ರಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್
ಸಂಬಳದ ಜೊತೆಗೆ ಬಡ್ಡಿಯನ್ನೂ ವಸೂಲಿ ಮಾಡುವಂತೆ ಸೂಚನೆ
ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ದೊಡ್ಡ ಹಿನ್ನೆಡೆ
ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯನ್ನು ಕೋಲ್ಕತ್ತ ಹೈಕೋರ್ಟ್ ರದ್ದುಗೊಳಿಸಿ ಬಿಗ್ ಶಾಕ್ ನೀಡಿದೆ. ಈ ಮೂಲಕ ಸುಮಾರು 25,753 ಶಿಕ್ಷಕರು ಕರ್ತವ್ಯದಿಂದ ವಜಾಗೊಂಡಿದ್ದಾರೆ! ಅವರೆಲ್ಲ ಶಿಕ್ಷಕರ ಹುದ್ದೆಯನ್ನು ಕಳೆದುಕೊಂಡಿದ್ದಾರೆ.
ಮಾತ್ರವಲ್ಲ, ಕೋರ್ಟ್ ಆದೇಶದ ಪ್ರಕಾರ ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ಇಲ್ಲಿಯವರೆಗೆ ತೆಗೆದುಕೊಂಡ ಸಂಬಳವನ್ನು ಹಿಂದಿರುಗಿಸುವಂತೆ ಸೋಚಿಸಿದೆ. ನಾಲ್ಕು ವಾರಗಳ ಒಳಗಾಗಿ ಹಣವನ್ನು ನೀಡುವಂತೆ ಸೂಚನೆ ನೀಡಿದೆ. ಅನರ್ಹಗೊಂಡ ಶಿಕ್ಷಕರಿಂದ ಹಣ ವಸೂಲಿ ಮಾಡುವ ಹೊಣೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇದನ್ನೂ ಓದಿ:ವಿವಾದಾತ್ಮಕ ತೀರ್ಪು ವಿರುದ್ಧ ಕೊಹ್ಲಿ ಕಿತ್ತಾಟ; ತೆಂಡುಲ್ಕರ್ ಎಳೆದು ತಂದು ಕೊಹ್ಲಿಗೆ ಕೌಂಟರ್..!
ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಕ್ ಮತ್ತು ಎಂಡಿ ಶಬ್ಬರ್ ರಶೀದಿ ಅವರು ಈ ಆದೇಶ ನೀಡಿದ್ದಾರೆ. 2016ರಲ್ಲಿ ನೇಮಕಾತಿ ಪ್ರವೇಶ ಪರೀಕ್ಷೆಯ 23 ಲಕ್ಷ OMR ಹಾಳೆಗಳನ್ನು (ಪರೀಕ್ಷಾ ಪತ್ರಿಕೆ) ಮರು ಮೌಲ್ಯಮಾಪನ ಮಾಡುವಂತೆ ಪೀಠ ಆದೇಶ ನೀಡಿದೆ. ಖಾಲಿ OMR ಹಾಳೆಗಳನ್ನು ಸಲ್ಲಿಸಿ ಕಾನೂನು ಬಾಹಿರವಾಗಿ ಶಿಕ್ಷಕರು ನೇಮಕಾತಿ ಆಗಿದೆ. ಈ ಹಗರಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಸಿಬಿಐ ಹಗರಣದ ತನಿಖೆಯನ್ನು ನಡೆಸಿತ್ತು.
ಇದನ್ನೂ ಓದಿ: ಇಸ್ರೇಲ್ನ ಭೀಕರ ಯುದ್ಧಕ್ಕೆ ಸಾವನ್ನಪ್ಪಿದ ತಾಯಿ, ಗರ್ಭದಲ್ಲಿದ್ದ ಮಗು ರಕ್ಷಣೆ ಆಗಿದ್ದೇ ದೊಡ್ಡ ಪವಾಡ..!
ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುವ ಬಗ್ಗೆ WBSSCಗೆ (ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ) ಕೋರ್ಟ್ ಮಾಹಿತಿ ಕೇಳಿದೆ. ಖಾಲಿ ಇರುವ 24,000 ಕ್ಕೂ ಶಿಕ್ಷಕರ ಹುದ್ದೆಗಳಿಗೆ 2016 WBSSC ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ 23 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಹೈಕೋರ್ಟ್ ಆದೇಶದ ವಿರುದ್ಧ ಪಶ್ಚಿಮ ಬಂಗಾಳದ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಇದೇ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಅನೇಕ ತೃಣಮೂಲ ನಾಯಕರು ಮತ್ತು ಮಾಜಿ ಅಧಿಕಾರಿಗಳು ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಪಂದ್ಯ ಮುಗಿದ ಮೇಲೂ ಸುಮ್ಮನಾಗದ ಕೊಹ್ಲಿ, ವಿವಾದಾತ್ಮಕ ತೀರ್ಪಿನ ಬಗ್ಗೆ ಅಂಪೈರ್ ಜೊತೆ ಮತ್ತೆ ಟಾಕ್ ಫೈಟ್..!
ಇದೇ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ 2022ರಲ್ಲಿ ಅರೆಸ್ಟ್ ಆಗಿದ್ದಾರೆ. ಪ್ರಕರಣ ಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ವಿಚಾರಣೆ ನಡೆಸಿದ್ದ ಕೋಲ್ಕತ್ತ ಹೈಕೋರ್ಟ್ ಮಾರ್ಚ್ 20 ರಂದು ತೀರ್ಪು ಪೂರ್ಣಗೊಳಿಸಿ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ