4 ಜನರನ್ನು ಕೊಲೆ ಮಾಡಿಸಲು 65 ಲಕ್ಷ ರೂಪಾಯಿ ಡೀಲ್ ಮಾಡಿದ್ದ ದೊಡ್ಡ ಮಗ
ಒಟ್ಟು 8 ಆರೋಪಿಗಳನ್ನು ಭೇದಿಸುವಲ್ಲಿ ಕೊನೆಗೂ ಯಶಸ್ವಿಯಾದ ಪೊಲೀಸರು
ಬಾಕಳೆ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲು ಹಿರಿಯ ಮಗನೇ ಮುಖ್ಯ ಆರೋಪಿ
ಗದಗ: ಒಂದೇ ಕುಟುಂಬದ ನಾಲ್ವರನ್ನು ಬರ್ಬರ ಕೊಲೆ ಕೇಸ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ನ ಮದುವೆ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಗದಗಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಕೋಣೆಯಲ್ಲಿ ಮಲಗಿಕೊಂಡಿದ್ದ ಪತಿ, ಪತ್ನಿ, ಮಗಳು ಹಾಗೂ ಪುತ್ರನನ್ನು ಬರ್ಬರವಾಗಿ ಕೊಲೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದರು. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷ (16) ಕೊಲೆಯಾದ ದುರ್ದೈವಿಗಳು.
ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್.. ತನಿಖೆಯಲ್ಲಿ ಅಸಲಿ ಕಾರಣ ಬಹಿರಂಗ; ಸತ್ಯ ಗೊತ್ತಾದ್ರೆ ಶಾಕ್ ಆಗ್ತೀರಾ!
ಆದರೆ ಈ ನಾಲ್ವರ ಕೊಲೆ ಕೇಸ್ ಸಂಬಂಧ ಪೊಲೀಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಮೃತ ಕುಟುಂಬಸ್ಥರ ಬಳಿ ಈ ಕೇಸ್ ಸಂಬಂಧ ಮಾಹಿತಿಯನ್ನು ಕಲೆ ಹಾಕಿದ್ದರು. ಆದರೆ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕರ ಬಗ್ಗೆ ಸಣ್ಣ ಸುಳಿವು ಕೂಡ ಸಿಕ್ಕಿರಲಿಲ್ಲ. ಆದರೆ ಈ ಕೊಲೆಗೆ ಸುಪಾರಿ ಡೀಲ್ ಮಾಡಿದ್ದ ಮುಖ್ಯ ಆರೋಪಿ ಪೊಲೀಸ್ ಅಧಿಕಾರಿಗಳ ಮುಂದೆಯೇ ನಿಂತುಕೊಂಡು ಅಬ್ಸರ್ವ್ ಮಾಡುತ್ತಿದ್ದ. ಇನ್ನು, ದುಷ್ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರಗಳು, ಚಿನ್ನದ ಬಳೆಗಳು ಜೊತೆಗೆ ಎರಡು ಶೂಗಳು ಪತ್ತೆಯಾಗಿದ್ದವು. ಇನ್ನು, ಈ ಬಗ್ಗೆ ತಲೆ ಕೆಡಿಸಿಕೊಂಡಿದ್ದ ಪೊಲೀಸ್ ಅಧಿಕಾರಿಗಳು ತೀವ್ರ ತನಿಖೆ ನಡೆಸಿದ ಬಳಿಕ ಆರೋಪಿಗಳನ್ನು ಸಿಕ್ಕಿಹಾಕಿಕೊಂಡಿದ್ದಾರೆ.
ಒಟ್ಟು 8 ಆರೋಪಿಗಳನ್ನು ಭೇದಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ವಲಯ ಐಜಿಪಿ ವಿಕಾಸ್ ಕುಮಾರ್ ಅವರು. 8 ಮಂದಿ ಆರೋಪಿಗಳನ್ನು 48 ಗಂಟೆಗಳ ಒಳಗಾಗಿ ಬಂಧಿಸಿದ್ದೇವೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆ (31) ಅವರು ಈ ಕೇಸ್ನಲ್ಲಿ ಪ್ರಮುಖ ಆರೋಪಿ. ಇತರ ಆರೋಪಿಗಳಾದ ಫೈರೋಜ್ ಖಾಜಿ (29) , ಜಿಶಾನ್ ಖಾಜಿ (24), ಮೀರಜ್ ಮೂಲದ ಸಾಹಿಲ್(19), ಸೋಹೆಲ್ ಖಾಜಿ (19), ಸುಲ್ತಾನ್ ಶೇಖ್ (23) , ಮಹೇಶ್ ಸಾಳೋಂಕೆ (21) , ವಾಹಿದ್ ಬೇಪಾರಿ (21) ಬಂಧಿತ ಆರೋಪಿಗಳು.
ಇದನ್ನೂ ಓದಿ: ಮನೆಯಲ್ಲಿ ಮಲಗಿದ್ದ ನಾಲ್ವರ ಹತ್ಯೆ ಕೇಸ್ಗೆ ಹೊಸ ಟ್ವಿಸ್ಟ್.. ಕಿಟಕಿಯಿಂದ ಬಂದ ಹಂತಕರು; ಆಮೇಲೇನಾಯ್ತು?
ಇನ್ನು, ಮೃತ ಪ್ರಕಾಶ್ ಬಾಕಳೆಯ ಮೊದಲ ಪತ್ನಿಯ ಮಗ ಈ ಕೇಸ್ನ ಮುಖ್ಯ ಆರೋಪಿಯಾಗಿದ್ದಾನೆ. ಆರೋಪಿ ವಿನಾಯಕ್ ಬಾಕಳೆ ಮತ್ತೊಬ್ಬ ಆರೋಪಿ ಫೈರೋಜ್ಗೆ 65 ಲಕ್ಷ ರೂಪಾಯಿ ಹಣಕ್ಕೆ ಸುಪಾರಿ ಡೀಲ್ ಕೊಟ್ಟಿದ್ದ. ಮುಂಗಡವಾಗಿ 2 ಲಕ್ಷ ರೂಪಾಯಿ ಕೊಟ್ಟಿದ್ದ ವಿನಾಯಕ್ ಬಾಕಳೆ ತಂದೆ ಪ್ರಕಾಶ್ ಬಾಕಳೆ, ಅವರ ಪತ್ನಿ ಸುನಂದಾ ಹಾಗೂ ಪುತ್ರ ಕಾರ್ತಿಕ್ ಕೊಲೆಗೆ ಸಂಚು ಹೂಡಿದ್ದ. ತಂದೆ ಪ್ರಕಾಶ್ ಜೊತೆ ವ್ಯವಹಾರಿಕ ವೈಮನಸ್ಸಿನ ಕಾರಣ ಈ ಕೊಲೆಗೆ ಆತ ಸಂಚು ಹೂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೇ, ಮಹಾರಾಷ್ಟ್ರ ಮೂಲದ ಫಯಾಜ್ ಆ್ಯಂಡ್ ಗ್ಯಾಂಗ್ಗೆ ಮುಂಗಡವಾಗಿ 2 ಲಕ್ಷ ರೂಪಾಯಿ ನೀಡಿದ್ದನಂತೆ. ಈ ಕೊಲೆಗೆ ಆಸ್ತಿ ಹಂಚಿಕೆ ವಿಷಯ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು, ಈ ಕೊಲೆ ಕೇಸ್ ಬಗ್ಗೆ ತನಿಖೆ ನಡೆಸಿದ್ದ ಸಿಬ್ಬಂದಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. ಕೊಲೆ ಪ್ರಕರಣ ಬೇದಿಸಿದ್ದಕ್ಕೆ ಡಿಜಿ, ಐಜಿಪಿ ವಿಕಾಸ್ ಕುಮಾರ್ ಶ್ಲಾಘನೆ ವ್ಯಕ್ತವಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
4 ಜನರನ್ನು ಕೊಲೆ ಮಾಡಿಸಲು 65 ಲಕ್ಷ ರೂಪಾಯಿ ಡೀಲ್ ಮಾಡಿದ್ದ ದೊಡ್ಡ ಮಗ
ಒಟ್ಟು 8 ಆರೋಪಿಗಳನ್ನು ಭೇದಿಸುವಲ್ಲಿ ಕೊನೆಗೂ ಯಶಸ್ವಿಯಾದ ಪೊಲೀಸರು
ಬಾಕಳೆ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲು ಹಿರಿಯ ಮಗನೇ ಮುಖ್ಯ ಆರೋಪಿ
ಗದಗ: ಒಂದೇ ಕುಟುಂಬದ ನಾಲ್ವರನ್ನು ಬರ್ಬರ ಕೊಲೆ ಕೇಸ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ನ ಮದುವೆ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಗದಗಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಕೋಣೆಯಲ್ಲಿ ಮಲಗಿಕೊಂಡಿದ್ದ ಪತಿ, ಪತ್ನಿ, ಮಗಳು ಹಾಗೂ ಪುತ್ರನನ್ನು ಬರ್ಬರವಾಗಿ ಕೊಲೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದರು. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷ (16) ಕೊಲೆಯಾದ ದುರ್ದೈವಿಗಳು.
ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್.. ತನಿಖೆಯಲ್ಲಿ ಅಸಲಿ ಕಾರಣ ಬಹಿರಂಗ; ಸತ್ಯ ಗೊತ್ತಾದ್ರೆ ಶಾಕ್ ಆಗ್ತೀರಾ!
ಆದರೆ ಈ ನಾಲ್ವರ ಕೊಲೆ ಕೇಸ್ ಸಂಬಂಧ ಪೊಲೀಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಮೃತ ಕುಟುಂಬಸ್ಥರ ಬಳಿ ಈ ಕೇಸ್ ಸಂಬಂಧ ಮಾಹಿತಿಯನ್ನು ಕಲೆ ಹಾಕಿದ್ದರು. ಆದರೆ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕರ ಬಗ್ಗೆ ಸಣ್ಣ ಸುಳಿವು ಕೂಡ ಸಿಕ್ಕಿರಲಿಲ್ಲ. ಆದರೆ ಈ ಕೊಲೆಗೆ ಸುಪಾರಿ ಡೀಲ್ ಮಾಡಿದ್ದ ಮುಖ್ಯ ಆರೋಪಿ ಪೊಲೀಸ್ ಅಧಿಕಾರಿಗಳ ಮುಂದೆಯೇ ನಿಂತುಕೊಂಡು ಅಬ್ಸರ್ವ್ ಮಾಡುತ್ತಿದ್ದ. ಇನ್ನು, ದುಷ್ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರಗಳು, ಚಿನ್ನದ ಬಳೆಗಳು ಜೊತೆಗೆ ಎರಡು ಶೂಗಳು ಪತ್ತೆಯಾಗಿದ್ದವು. ಇನ್ನು, ಈ ಬಗ್ಗೆ ತಲೆ ಕೆಡಿಸಿಕೊಂಡಿದ್ದ ಪೊಲೀಸ್ ಅಧಿಕಾರಿಗಳು ತೀವ್ರ ತನಿಖೆ ನಡೆಸಿದ ಬಳಿಕ ಆರೋಪಿಗಳನ್ನು ಸಿಕ್ಕಿಹಾಕಿಕೊಂಡಿದ್ದಾರೆ.
ಒಟ್ಟು 8 ಆರೋಪಿಗಳನ್ನು ಭೇದಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಘಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ವಲಯ ಐಜಿಪಿ ವಿಕಾಸ್ ಕುಮಾರ್ ಅವರು. 8 ಮಂದಿ ಆರೋಪಿಗಳನ್ನು 48 ಗಂಟೆಗಳ ಒಳಗಾಗಿ ಬಂಧಿಸಿದ್ದೇವೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆ (31) ಅವರು ಈ ಕೇಸ್ನಲ್ಲಿ ಪ್ರಮುಖ ಆರೋಪಿ. ಇತರ ಆರೋಪಿಗಳಾದ ಫೈರೋಜ್ ಖಾಜಿ (29) , ಜಿಶಾನ್ ಖಾಜಿ (24), ಮೀರಜ್ ಮೂಲದ ಸಾಹಿಲ್(19), ಸೋಹೆಲ್ ಖಾಜಿ (19), ಸುಲ್ತಾನ್ ಶೇಖ್ (23) , ಮಹೇಶ್ ಸಾಳೋಂಕೆ (21) , ವಾಹಿದ್ ಬೇಪಾರಿ (21) ಬಂಧಿತ ಆರೋಪಿಗಳು.
ಇದನ್ನೂ ಓದಿ: ಮನೆಯಲ್ಲಿ ಮಲಗಿದ್ದ ನಾಲ್ವರ ಹತ್ಯೆ ಕೇಸ್ಗೆ ಹೊಸ ಟ್ವಿಸ್ಟ್.. ಕಿಟಕಿಯಿಂದ ಬಂದ ಹಂತಕರು; ಆಮೇಲೇನಾಯ್ತು?
ಇನ್ನು, ಮೃತ ಪ್ರಕಾಶ್ ಬಾಕಳೆಯ ಮೊದಲ ಪತ್ನಿಯ ಮಗ ಈ ಕೇಸ್ನ ಮುಖ್ಯ ಆರೋಪಿಯಾಗಿದ್ದಾನೆ. ಆರೋಪಿ ವಿನಾಯಕ್ ಬಾಕಳೆ ಮತ್ತೊಬ್ಬ ಆರೋಪಿ ಫೈರೋಜ್ಗೆ 65 ಲಕ್ಷ ರೂಪಾಯಿ ಹಣಕ್ಕೆ ಸುಪಾರಿ ಡೀಲ್ ಕೊಟ್ಟಿದ್ದ. ಮುಂಗಡವಾಗಿ 2 ಲಕ್ಷ ರೂಪಾಯಿ ಕೊಟ್ಟಿದ್ದ ವಿನಾಯಕ್ ಬಾಕಳೆ ತಂದೆ ಪ್ರಕಾಶ್ ಬಾಕಳೆ, ಅವರ ಪತ್ನಿ ಸುನಂದಾ ಹಾಗೂ ಪುತ್ರ ಕಾರ್ತಿಕ್ ಕೊಲೆಗೆ ಸಂಚು ಹೂಡಿದ್ದ. ತಂದೆ ಪ್ರಕಾಶ್ ಜೊತೆ ವ್ಯವಹಾರಿಕ ವೈಮನಸ್ಸಿನ ಕಾರಣ ಈ ಕೊಲೆಗೆ ಆತ ಸಂಚು ಹೂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೇ, ಮಹಾರಾಷ್ಟ್ರ ಮೂಲದ ಫಯಾಜ್ ಆ್ಯಂಡ್ ಗ್ಯಾಂಗ್ಗೆ ಮುಂಗಡವಾಗಿ 2 ಲಕ್ಷ ರೂಪಾಯಿ ನೀಡಿದ್ದನಂತೆ. ಈ ಕೊಲೆಗೆ ಆಸ್ತಿ ಹಂಚಿಕೆ ವಿಷಯ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು, ಈ ಕೊಲೆ ಕೇಸ್ ಬಗ್ಗೆ ತನಿಖೆ ನಡೆಸಿದ್ದ ಸಿಬ್ಬಂದಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. ಕೊಲೆ ಪ್ರಕರಣ ಬೇದಿಸಿದ್ದಕ್ಕೆ ಡಿಜಿ, ಐಜಿಪಿ ವಿಕಾಸ್ ಕುಮಾರ್ ಶ್ಲಾಘನೆ ವ್ಯಕ್ತವಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ