ವಿದ್ಯಾರ್ಥಿನಿಯ ನೂತನ ಕೌಶಲ್ಯಕ್ಕೆ ಮೂಕ ವಿಸ್ಮಿತರಾಗಿ ನೋಡಿದ ಸಿಎಂ ಸಿದ್ದರಾಮಯ್ಯ
ಫ್ರೀ ಬಸ್ ಟಿಕೆಟ್ಗಳಿಂದ ಹಾರ ಮಾಡಿ ಸಿಎಂ ಸಿದ್ದರಾಮಯ್ಯ ಹಾಕಿದ ವಿದ್ಯಾರ್ಥಿನಿ
ನಿಮಗೆ ಹಾಕುವುದಕ್ಕಾಗಿ ತಿಂಗಳುಗಳಿಂದ ಈ ಅವಕಾಶಕ್ಕಾಗಿ ಕಾಯುತ್ತಿದ್ದೆ- ಜಯಶ್ರೀ
ಹಾಸನ: ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಣೆ ಮಾಡಿದ್ದಾಳೆ.
ಇದನ್ನೂ ಓದಿ: BREAKING: ನೇಹಾ ಕೊಲೆ ಪ್ರಕರಣ ಸಿಐಡಿ ತನಿಖೆಗೆ; ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಶಕ್ತಿ ಯೋಜನೆ ಅಡಿಯಲ್ಲಿ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಬೆಳಸಿ ಸಂಗ್ರಹಿಸಿದ್ದ ಟಿಕೆಟ್ಗಳಿಂದ ವಿಶೇಷವಾದ ಹಾರವನ್ನು ರೆಡಿ ಮಾಡಿ ಇಟ್ಟುಕೊಂಡಿದ್ದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದರು.
ಅರಸೀಕೆರೆಯ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿದ್ದಾರೆ.ಈ ಉಚಿತ ಬಸ್ ಪ್ರಯಾಣದಿಂದ ನನ್ನ ವಿದ್ಯಾಭ್ಯಾಸ ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ ಎಂದು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.@siddaramaiah#LawStudent #Arsikere pic.twitter.com/PnkiedkRoP
— NewsFirst Kannada (@NewsFirstKan) April 22, 2024
ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸಿದ ವಿದ್ಯಾರ್ಥಿನಿ ಜಯಶ್ರೀ, ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ ಎನ್ನುತ್ತಾ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿದ್ಯಾರ್ಥಿನಿಯ ನೂತನ ಕೌಶಲ್ಯಕ್ಕೆ ಮೂಕ ವಿಸ್ಮಿತರಾಗಿ ನೋಡಿದ ಸಿಎಂ ಸಿದ್ದರಾಮಯ್ಯ
ಫ್ರೀ ಬಸ್ ಟಿಕೆಟ್ಗಳಿಂದ ಹಾರ ಮಾಡಿ ಸಿಎಂ ಸಿದ್ದರಾಮಯ್ಯ ಹಾಕಿದ ವಿದ್ಯಾರ್ಥಿನಿ
ನಿಮಗೆ ಹಾಕುವುದಕ್ಕಾಗಿ ತಿಂಗಳುಗಳಿಂದ ಈ ಅವಕಾಶಕ್ಕಾಗಿ ಕಾಯುತ್ತಿದ್ದೆ- ಜಯಶ್ರೀ
ಹಾಸನ: ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಣೆ ಮಾಡಿದ್ದಾಳೆ.
ಇದನ್ನೂ ಓದಿ: BREAKING: ನೇಹಾ ಕೊಲೆ ಪ್ರಕರಣ ಸಿಐಡಿ ತನಿಖೆಗೆ; ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಶಕ್ತಿ ಯೋಜನೆ ಅಡಿಯಲ್ಲಿ ಬಸ್ನಲ್ಲಿ ಉಚಿತವಾಗಿ ಪ್ರಯಾಣ ಬೆಳಸಿ ಸಂಗ್ರಹಿಸಿದ್ದ ಟಿಕೆಟ್ಗಳಿಂದ ವಿಶೇಷವಾದ ಹಾರವನ್ನು ರೆಡಿ ಮಾಡಿ ಇಟ್ಟುಕೊಂಡಿದ್ದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ ಟಿಕೆಟ್ ಹಾರವನ್ನು ಅರ್ಪಿಸಿದರು.
ಅರಸೀಕೆರೆಯ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿದ್ದಾರೆ.ಈ ಉಚಿತ ಬಸ್ ಪ್ರಯಾಣದಿಂದ ನನ್ನ ವಿದ್ಯಾಭ್ಯಾಸ ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ ಎಂದು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.@siddaramaiah#LawStudent #Arsikere pic.twitter.com/PnkiedkRoP
— NewsFirst Kannada (@NewsFirstKan) April 22, 2024
ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸಿದ ವಿದ್ಯಾರ್ಥಿನಿ ಜಯಶ್ರೀ, ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ ಎನ್ನುತ್ತಾ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ