ಆ್ಯಂಬುಲೆನ್ಸ್ ಡ್ರೈವರ್ನ ಯಡವಟ್ಟಿಗೆ ಅಪಘಾತ ಸಂಭವಿಸಿದೆ
ಮೂರು ಕಾರು, ಆ್ಯಂಬುಲೆನ್ಸ್ ಮತ್ತು ಬೈಕ್ ನಡುವೆ ಅಪಘಾತ
ಆ್ಯಂಬುಲೆನ್ಸ್ ಚಾಲಕನ ಬಂಧನ, ಪೊಲೀಸರಿಂದ ತೀವ್ರ ವಿಚಾರಣೆ
ಬೆಂಗಳೂರು: ಆ್ಯಂಬುಲೆನ್ಸ್ ಡ್ರೈವರ್ ಮಾಡಿದ ಯಡವಟ್ಟಿನಿಂದಾಗಿ ನಗರದಲ್ಲಿ ನಿನ್ನೆ ಸರಣಿ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.
ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ನಿನ್ನೆ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಅಪಘಾತ ಆಗಿದೆ. ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಸ್ವಂತ ಮಗನ ಕೊಲ್ಲಲು 75 ಲಕ್ಷಕ್ಕೆ ಸುಪಾರಿ ಕೊಟ್ಟ ಅಪ್ಪ, ಗುಂಡಿನ ದಾಳಿಯಲ್ಲಿ ಬಚಾವ್ ಆಗಿದ್ದೇ ದೊಡ್ಡದು
ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಆಗಿದೆ. ಈ ವೇಳೆ ಟೆಂಕ್ಷನ್ಲ್ಲಿ ಬ್ರೇಕ್ ತುಳಿಯದೇ ಎಕ್ಸಲೇಟರ್ ತುಳಿದಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.
ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಗ್ರೀನ್ ಇನ್ಸ್ಟಾ ಪೋಸ್ಟ್ಗೆ ಹಿಂದಿಯಲ್ಲಿ ಕಮೆಂಟ್ ಮಾಡಿದ ವಿಲ್ ಜಾಕ್ಸ್.. ಅಂಥದ್ದು ಏನ್ ಮಾಡಿದ್ರು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆ್ಯಂಬುಲೆನ್ಸ್ ಡ್ರೈವರ್ನ ಯಡವಟ್ಟಿಗೆ ಅಪಘಾತ ಸಂಭವಿಸಿದೆ
ಮೂರು ಕಾರು, ಆ್ಯಂಬುಲೆನ್ಸ್ ಮತ್ತು ಬೈಕ್ ನಡುವೆ ಅಪಘಾತ
ಆ್ಯಂಬುಲೆನ್ಸ್ ಚಾಲಕನ ಬಂಧನ, ಪೊಲೀಸರಿಂದ ತೀವ್ರ ವಿಚಾರಣೆ
ಬೆಂಗಳೂರು: ಆ್ಯಂಬುಲೆನ್ಸ್ ಡ್ರೈವರ್ ಮಾಡಿದ ಯಡವಟ್ಟಿನಿಂದಾಗಿ ನಗರದಲ್ಲಿ ನಿನ್ನೆ ಸರಣಿ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.
ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ನಿನ್ನೆ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಅಪಘಾತ ಆಗಿದೆ. ಮಾರ್ಕೆಟ್ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೇ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಸ್ವಂತ ಮಗನ ಕೊಲ್ಲಲು 75 ಲಕ್ಷಕ್ಕೆ ಸುಪಾರಿ ಕೊಟ್ಟ ಅಪ್ಪ, ಗುಂಡಿನ ದಾಳಿಯಲ್ಲಿ ಬಚಾವ್ ಆಗಿದ್ದೇ ದೊಡ್ಡದು
ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಆಗಿದೆ. ಈ ವೇಳೆ ಟೆಂಕ್ಷನ್ಲ್ಲಿ ಬ್ರೇಕ್ ತುಳಿಯದೇ ಎಕ್ಸಲೇಟರ್ ತುಳಿದಿದ್ದಾನೆ ಎನ್ನಲಾಗಿದೆ. ಕಾರಿನಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.
ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಗ್ರೀನ್ ಇನ್ಸ್ಟಾ ಪೋಸ್ಟ್ಗೆ ಹಿಂದಿಯಲ್ಲಿ ಕಮೆಂಟ್ ಮಾಡಿದ ವಿಲ್ ಜಾಕ್ಸ್.. ಅಂಥದ್ದು ಏನ್ ಮಾಡಿದ್ರು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ