ಬ್ಯಾಟರಾಯನಪುರ ಸಂಚಾರಿ ಪೊಲೀಸರಿಂದ ಆ್ಯಂಬುಲೆನ್ಸ್ ಚಾಲಕ ಅರೆಸ್ಟ್
KR ಮಾರ್ಕೆಟ್ ಕಡೆಯಿಂದ ಸ್ಯಾಟಲೈಟ್ ಕಡೆಗೆ ಹೋಗುತ್ತಿದ್ದಾಗ ನಡೆದ ಘಟನೆ
ಆ್ಯಂಬುಲೆನ್ಸ್ ಚಾಲಕ ಯಡವಟ್ಟಿನಿಂದಾಗಿ 3 ಕಾರು ಮತ್ತು ಬೈಕ್ ನಜ್ಜು ಗುಜ್ಜು
ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಯಡವಟ್ಟಿನಿಂದಾಗಿ ತಡರಾತ್ರಿ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆ. ಆರ್ ಮಾರ್ಕೆಟ್ ಕಡೆಯಿಂದ ಸ್ಯಾಟಲೈಟ್ ಕಡೆಗೆ ಆಗಮಿಸುತ್ತಿದ್ದ ಆ್ಯಂಬುಲೆನ್ಸ್ ಏಕಾಏಕಿ ಡಿಕ್ಕಿ ಹೊಡೆದಿದೆ. ಆಮೇಲೆ ನಡೆದಿದ್ದು, ಭಯಾನಕ ಸರಣಿ ಅಪಘಾತ.
ಇದನ್ನೂ ಓದಿ: ಬ್ರೇಕ್ ಬದಲಾಗಿ ಎಕ್ಸಲೇಟರ್ ಒತ್ತಿದ ಡ್ರೈವರ್; ಬೆಂಗಳೂರಲ್ಲಿ ಸರಣಿ ಅಪಘಾತ, ಅಸಲಿಗೆ ಆಗಿದ್ದೇನು?
ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಇದೀಗ ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ್ಯಂಬುಲೆನ್ಸ್ಗೆ ಕರೆ ಬಂದ ಹಿನ್ನೆಲೆಯಲ್ಲಿ ರೋಗಿ ಕರೆದೊಯ್ಯಲು ಆಗಮಿಸ್ತಿದ್ದ ಚಾಲಕ.
ಈ ವೇಳೆ ಬ್ಯಾಲೆನ್ಸ್ ತಪ್ಪಿ ಆಪೋಸಿಟ್ ರಸ್ತೆಗೆ ನುಗ್ಗಿ ಬಿಟ್ಟಿದೆ. ಸ್ವಲ್ಪ ಯಾಮಾರಿದ್ರೂ ಹಲವು ಸಾವು ನೋವು ಸಂಭವಿಸುತ್ತಿತ್ತು. ಸದ್ಯ ಈ ಅಪಘಾತದಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬ್ಯಾಟರಾಯನಪುರ ಸಂಚಾರಿ ಪೊಲೀಸರಿಂದ ಆ್ಯಂಬುಲೆನ್ಸ್ ಚಾಲಕ ಅರೆಸ್ಟ್
KR ಮಾರ್ಕೆಟ್ ಕಡೆಯಿಂದ ಸ್ಯಾಟಲೈಟ್ ಕಡೆಗೆ ಹೋಗುತ್ತಿದ್ದಾಗ ನಡೆದ ಘಟನೆ
ಆ್ಯಂಬುಲೆನ್ಸ್ ಚಾಲಕ ಯಡವಟ್ಟಿನಿಂದಾಗಿ 3 ಕಾರು ಮತ್ತು ಬೈಕ್ ನಜ್ಜು ಗುಜ್ಜು
ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಯಡವಟ್ಟಿನಿಂದಾಗಿ ತಡರಾತ್ರಿ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೆ. ಆರ್ ಮಾರ್ಕೆಟ್ ಕಡೆಯಿಂದ ಸ್ಯಾಟಲೈಟ್ ಕಡೆಗೆ ಆಗಮಿಸುತ್ತಿದ್ದ ಆ್ಯಂಬುಲೆನ್ಸ್ ಏಕಾಏಕಿ ಡಿಕ್ಕಿ ಹೊಡೆದಿದೆ. ಆಮೇಲೆ ನಡೆದಿದ್ದು, ಭಯಾನಕ ಸರಣಿ ಅಪಘಾತ.
ಇದನ್ನೂ ಓದಿ: ಬ್ರೇಕ್ ಬದಲಾಗಿ ಎಕ್ಸಲೇಟರ್ ಒತ್ತಿದ ಡ್ರೈವರ್; ಬೆಂಗಳೂರಲ್ಲಿ ಸರಣಿ ಅಪಘಾತ, ಅಸಲಿಗೆ ಆಗಿದ್ದೇನು?
ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಇದೀಗ ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ್ಯಂಬುಲೆನ್ಸ್ಗೆ ಕರೆ ಬಂದ ಹಿನ್ನೆಲೆಯಲ್ಲಿ ರೋಗಿ ಕರೆದೊಯ್ಯಲು ಆಗಮಿಸ್ತಿದ್ದ ಚಾಲಕ.
ಈ ವೇಳೆ ಬ್ಯಾಲೆನ್ಸ್ ತಪ್ಪಿ ಆಪೋಸಿಟ್ ರಸ್ತೆಗೆ ನುಗ್ಗಿ ಬಿಟ್ಟಿದೆ. ಸ್ವಲ್ಪ ಯಾಮಾರಿದ್ರೂ ಹಲವು ಸಾವು ನೋವು ಸಂಭವಿಸುತ್ತಿತ್ತು. ಸದ್ಯ ಈ ಅಪಘಾತದಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಿ ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ