ಹಿರಿಯ IPS ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ಟೀಂ
ಗೌರಿ ಲಂಕೇಶ್ ಕೇಸ್ನಲ್ಲಿ ದೊಡ್ಡ ಪಾತ್ರ ವಹಿಸಿದ್ದ ಬಿ.ಕೆ ಸಿಂಗ್
ಎಸ್ಪಿ, ನಾಲ್ವರು ಡಿವೈಎಸ್ಪಿ ಕೂಡ ಎಸ್ಐಟಿ ತಂಡದಲ್ಲಿದ್ದಾರೆ
ಹಾಸನದಲ್ಲಿನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ತನಿಖೆಗೆ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ನ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ವರದಿ ನೀಡುವಂತೆ ಸೂಚನೆ ನೀಡಿದೆ.
ಈ ಹಿಂದೆ ಗೌರಿ ಲಂಕೇಶ್ ಕೇಸ್ನಲ್ಲಿ ದೊಡ್ಡ ಪಾತ್ರ ವಹಿಸಿದ್ದ ಬಿ.ಕೆ ಸಿಂಗ್ ಜೊತೆ ಮೂವರು SP, 4 ಡಿವೈಎಸ್ಪಿ ಕೂಡ ಎಸ್ಐಟಿ ತಂಡದಲ್ಲಿದ್ದಾರೆ.
ಇದನ್ನೂ ಓದಿ: ಅಬ್ಬಾಬ್ಬ..! ಡೇರಿಲ್ ಮಿಚೆಲ್ ನಿನ್ನೆ ಹಿಡಿದ ಕ್ಯಾಚ್ಗಳು ಎಷ್ಟು ಗೊತ್ತಾ? Catches Win Matches ಅನ್ನೋದು ಪ್ರೂವ್..!
ಹೇಗಿರುತ್ತೆ ಎಸ್ಐಟಿ ತನಿಖೆ?
ಒಂದೆಡೆ ಪೆನ್ಡ್ರೈವ್ ಪ್ರಕರಣದ ತನಿಖೆ ಚುರುಕುಗೊಂಡಿದ್ರೆ, ಮತ್ತೊಂದೆಡೆ ಹಾಸನ ಸಂಸದನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಸಂತ್ರಸ್ಥ ಮಹಿಳೆಯರೇ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಇವತ್ತು ಹಾಸನದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.
ಇದನ್ನೂ ಓದಿ:ದುಬೈನಲ್ಲಿ ಬರೋಬ್ಬರಿ 2.9 ಲಕ್ಷ ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ, ಅದ್ಭುತ ಫೋಟೋಗಳು..!
ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆಗೆ ಡಿ.ಕೆ.ಸುರೇಶ್ ಒತ್ತಾಯ
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಆ ಕುಟುಂಬ ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ "ಆ ಕುಟುಂಬ" ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ.#Hassan #PrajwalRevanna
— DK Suresh (@DKSureshINC) April 28, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹಿರಿಯ IPS ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ಟೀಂ
ಗೌರಿ ಲಂಕೇಶ್ ಕೇಸ್ನಲ್ಲಿ ದೊಡ್ಡ ಪಾತ್ರ ವಹಿಸಿದ್ದ ಬಿ.ಕೆ ಸಿಂಗ್
ಎಸ್ಪಿ, ನಾಲ್ವರು ಡಿವೈಎಸ್ಪಿ ಕೂಡ ಎಸ್ಐಟಿ ತಂಡದಲ್ಲಿದ್ದಾರೆ
ಹಾಸನದಲ್ಲಿನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣ ಸಂಬಂಧ ತನಿಖೆಗೆ ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ನ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ವರದಿ ನೀಡುವಂತೆ ಸೂಚನೆ ನೀಡಿದೆ.
ಈ ಹಿಂದೆ ಗೌರಿ ಲಂಕೇಶ್ ಕೇಸ್ನಲ್ಲಿ ದೊಡ್ಡ ಪಾತ್ರ ವಹಿಸಿದ್ದ ಬಿ.ಕೆ ಸಿಂಗ್ ಜೊತೆ ಮೂವರು SP, 4 ಡಿವೈಎಸ್ಪಿ ಕೂಡ ಎಸ್ಐಟಿ ತಂಡದಲ್ಲಿದ್ದಾರೆ.
ಇದನ್ನೂ ಓದಿ: ಅಬ್ಬಾಬ್ಬ..! ಡೇರಿಲ್ ಮಿಚೆಲ್ ನಿನ್ನೆ ಹಿಡಿದ ಕ್ಯಾಚ್ಗಳು ಎಷ್ಟು ಗೊತ್ತಾ? Catches Win Matches ಅನ್ನೋದು ಪ್ರೂವ್..!
ಹೇಗಿರುತ್ತೆ ಎಸ್ಐಟಿ ತನಿಖೆ?
ಒಂದೆಡೆ ಪೆನ್ಡ್ರೈವ್ ಪ್ರಕರಣದ ತನಿಖೆ ಚುರುಕುಗೊಂಡಿದ್ರೆ, ಮತ್ತೊಂದೆಡೆ ಹಾಸನ ಸಂಸದನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಸಂತ್ರಸ್ಥ ಮಹಿಳೆಯರೇ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಇವತ್ತು ಹಾಸನದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.
ಇದನ್ನೂ ಓದಿ:ದುಬೈನಲ್ಲಿ ಬರೋಬ್ಬರಿ 2.9 ಲಕ್ಷ ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ, ಅದ್ಭುತ ಫೋಟೋಗಳು..!
ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆಗೆ ಡಿ.ಕೆ.ಸುರೇಶ್ ಒತ್ತಾಯ
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ ಆ ಕುಟುಂಬ ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣನಿಂದ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳಿಗೆ "ಆ ಕುಟುಂಬ" ದಿಂದ ಯಾವುದೇ ಸಮಯಕ್ಕೂ ಆಪತ್ತು ತಪ್ಪಿದ್ದಲ್ಲ. ಹೀಗಾಗಿ ಸರ್ಕಾರ ಜವಾಬ್ಧಾರಿ ತಗೆದುಕೊಂಡು ಎಲ್ಲಾ ಸಂತ್ರಸ್ತೆಯರಿಗೂ ಸೂಕ್ತ ರಕ್ಷಣೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ.#Hassan #PrajwalRevanna
— DK Suresh (@DKSureshINC) April 28, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ