ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್
ಐಸಿಸಿ ಮೆಗಾ ಟೂರ್ನಮೆಂಟ್ಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ
ಟಿ20 ವಿಶ್ವಕಪ್ಗೆ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್!
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ ನಡೆಯಲಿದೆ. ಈ ಐಸಿಸಿ ಮೆಗಾ ಟೂರ್ನಿಗೆ 15 ಸದಸ್ಯರನ್ನು ಒಳಗೊಂಡ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಈ ಮುನ್ನವೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ.
ಯೆಸ್, 2024ರ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಅಂತ್ಯವಾಗಲಿದೆ. ಹಾಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಮುಖ್ಯ ಕೋಚ್ಗಾಗಿ ಹುಡುಕಾಟ ಶುರು ಮಾಡಿದೆ.
ಇನ್ನು, ಈ ಬಗ್ಗೆ ಮಾತಾಡಿರೋ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅಧಿಕಾರಾವಧಿ ಜೂನ್ವರೆಗೆ ಮಾತ್ರ ಇರಲಿದೆ. ಹೀಗಾಗಿ ನಾವು ಹೊಸ ಮುಖ್ಯ ಕೋಚ್ಗಾಗಿ ಅರ್ಜಿ ಆಹ್ವಾನ ಮಾಡಲಿದ್ದೇವೆ. ರಾಹುಲ್ ದ್ರಾವಿಡ್ ಬೇಕಾದ್ರೆ ಮತ್ತೆ ಅರ್ಜಿ ಸಲ್ಲಿಕೆ ಮಾಡಬಹುದು. ಹೊಸ ಕೋಚ್ ಭಾರತೀಯ ಅಥವಾ ವಿದೇಶಿ ಎಂದು ನಾವು ನಿರ್ಧರಿಸಲು ಸಾಧ್ಯವಿಲ್ಲ. ಇದು ಸೆಲೆಕ್ಷನ್ ಕ್ರಿಕೆಟ್ ಅಡ್ವೈಸರಿ ಕಮಿಟಿಗೆ ಬಿಟ್ಟಿದ್ದು ಎಂದರು.
ಇದನ್ನೂ ಓದಿ: ಶುಭ್ಮನ್ ಗಿಲ್ ಕೈಯಲ್ಲಿ ಆರ್ಸಿಬಿ ಪ್ಲೇ ಆಫ್.. ಇಂದು ಚೆನ್ನೈ ವಿರುದ್ಧ ಗುಜರಾತ್ ಗೆಲ್ಲಲೇಬೇಕು!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ 2024ರ ಟಿ20 ವಿಶ್ವಕಪ್
ಐಸಿಸಿ ಮೆಗಾ ಟೂರ್ನಮೆಂಟ್ಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ
ಟಿ20 ವಿಶ್ವಕಪ್ಗೆ ಮುನ್ನವೇ ಟೀಮ್ ಇಂಡಿಯಾಗೆ ಬಿಗ್ ಶಾಕ್!
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ ನಡೆಯಲಿದೆ. ಈ ಐಸಿಸಿ ಮೆಗಾ ಟೂರ್ನಿಗೆ 15 ಸದಸ್ಯರನ್ನು ಒಳಗೊಂಡ ಬಲಿಷ್ಠ ಟೀಮ್ ಇಂಡಿಯಾ ಪ್ರಕಟವಾಗಿದೆ. ಜೂನ್ ತಿಂಗಳಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಈ ಮುನ್ನವೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ.
ಯೆಸ್, 2024ರ ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಅಂತ್ಯವಾಗಲಿದೆ. ಹಾಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಮುಖ್ಯ ಕೋಚ್ಗಾಗಿ ಹುಡುಕಾಟ ಶುರು ಮಾಡಿದೆ.
ಇನ್ನು, ಈ ಬಗ್ಗೆ ಮಾತಾಡಿರೋ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಅಧಿಕಾರಾವಧಿ ಜೂನ್ವರೆಗೆ ಮಾತ್ರ ಇರಲಿದೆ. ಹೀಗಾಗಿ ನಾವು ಹೊಸ ಮುಖ್ಯ ಕೋಚ್ಗಾಗಿ ಅರ್ಜಿ ಆಹ್ವಾನ ಮಾಡಲಿದ್ದೇವೆ. ರಾಹುಲ್ ದ್ರಾವಿಡ್ ಬೇಕಾದ್ರೆ ಮತ್ತೆ ಅರ್ಜಿ ಸಲ್ಲಿಕೆ ಮಾಡಬಹುದು. ಹೊಸ ಕೋಚ್ ಭಾರತೀಯ ಅಥವಾ ವಿದೇಶಿ ಎಂದು ನಾವು ನಿರ್ಧರಿಸಲು ಸಾಧ್ಯವಿಲ್ಲ. ಇದು ಸೆಲೆಕ್ಷನ್ ಕ್ರಿಕೆಟ್ ಅಡ್ವೈಸರಿ ಕಮಿಟಿಗೆ ಬಿಟ್ಟಿದ್ದು ಎಂದರು.
ಇದನ್ನೂ ಓದಿ: ಶುಭ್ಮನ್ ಗಿಲ್ ಕೈಯಲ್ಲಿ ಆರ್ಸಿಬಿ ಪ್ಲೇ ಆಫ್.. ಇಂದು ಚೆನ್ನೈ ವಿರುದ್ಧ ಗುಜರಾತ್ ಗೆಲ್ಲಲೇಬೇಕು!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್