ಇಂದು ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸಾವು
ಪವಿತ್ರ ಜಯರಾಂ ಸಂಬಂಧಿಕರು, ಚಾಲಕ, ಸಹ ನಟನಿಗೂ ಗಂಭೀರ ಗಾಯ
ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಸೀರಿಯಲ್ನಲ್ಲಿ ನಟನೆ
ಬೆಂಗಳೂರು: ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ಪವಿತ್ರ ಜಯರಾಂ ಇನ್ನಿಲ್ಲ. ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರು ಇಂದು ಬೆಳಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಪವಿತ್ರಾ ಜಯರಾಮ್ ಅವರು ಕರ್ನಾಟಕದಿಂದ ಹೈದರಾಬಾದ್ಗೆ ವಾಪಸ್ ಆಗುತ್ತಿದ್ದರು. ಮಾರ್ಗ ಮಧ್ಯೆ ಮಹೆಬೂಬ್ನಗರ ಜಿಲ್ಲೆ ಭೂತ್ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ತಂದೆ ಜೊತೆ ಕಾರು ವಾಶ್ ಮಾಡುತ್ತಿದ್ದಾಗ ಅನಾಹುತ.. ಬೆಂಗಳೂರಲ್ಲಿ 5 ವರ್ಷದ ಬಾಲಕ ದಾರುಣ ಸಾವು
ಪವಿತ್ರಾ ಜಯರಾಮ್ ಅವರು ಕುಟುಂಬ ಸಮೇತ ಕಾರಿನಲ್ಲಿ ಹೈದರಾಬಾದ್ಗೆ ಹೋಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಹೈದರಾಬಾದ್ನಿಂದ ವನಪರ್ತಿಗೆ ಬರುತ್ತಿದ್ದ RTC ಬಸ್ಗೂ ಡಿಕ್ಕಿಯಾಗಿದೆ. ರಸ್ತೆ ಅಪಘಾತದಲ್ಲಿ ಪವಿತ್ರ ಜಯರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ಸಹ ನಟರು ಮತ್ತು ಕುಟುಂಬ ಸದಸ್ಯರು ಆಕೆಯೊಂದಿಗೆ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.
ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರು ತಮ್ಮ ಹುಟ್ಟೂರಿನಿಂದ ಹೈದರಾಬಾದ್ಗೆ ತೆರಳುವಾಗ ಈ ದುರಂತ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಪವಿತ್ರ ಜಯರಾಂ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್ ಮತ್ತು ಸಹ ನಟ ಚಂದ್ರಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿ ಪವಿತ್ರ ಜಯರಾಂ ದುರಂತ ಅಂತ್ಯ
ಪವಿತ್ರ ಜಯರಾಂ ಅವರು ಮೂಲತಃ ಮಂಡ್ಯ ಜಿಲ್ಲೆಯವರು. ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ಪವಿತ್ರ ಜಯರಾಂ ಅವರು ನಂತರ ತೆಲುಗು ಕಿರುತೆರೆಯಲ್ಲಿ ಅಭಿನಯಿಸಿದ್ದರು. ಪವಿತ್ರ ಜಯರಾಂ ಸಾವಿಗೆ ತೆಲುಗು ಕಿರುತೆರೆಯ ಹಲವು ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ. ನಾಳೆ ಪವಿತ್ರಾ ಜಯರಾಂ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಗಿಚ್ಚಿ ಗಿಲಿಗಿಲಿ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಹಾಸ್ಯನಟ ಚಂದ್ರಪ್ರಭ; ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸಾವು
ಪವಿತ್ರ ಜಯರಾಂ ಸಂಬಂಧಿಕರು, ಚಾಲಕ, ಸಹ ನಟನಿಗೂ ಗಂಭೀರ ಗಾಯ
ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಸೀರಿಯಲ್ನಲ್ಲಿ ನಟನೆ
ಬೆಂಗಳೂರು: ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ಪವಿತ್ರ ಜಯರಾಂ ಇನ್ನಿಲ್ಲ. ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರು ಇಂದು ಬೆಳಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಪವಿತ್ರಾ ಜಯರಾಮ್ ಅವರು ಕರ್ನಾಟಕದಿಂದ ಹೈದರಾಬಾದ್ಗೆ ವಾಪಸ್ ಆಗುತ್ತಿದ್ದರು. ಮಾರ್ಗ ಮಧ್ಯೆ ಮಹೆಬೂಬ್ನಗರ ಜಿಲ್ಲೆ ಭೂತ್ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ತಂದೆ ಜೊತೆ ಕಾರು ವಾಶ್ ಮಾಡುತ್ತಿದ್ದಾಗ ಅನಾಹುತ.. ಬೆಂಗಳೂರಲ್ಲಿ 5 ವರ್ಷದ ಬಾಲಕ ದಾರುಣ ಸಾವು
ಪವಿತ್ರಾ ಜಯರಾಮ್ ಅವರು ಕುಟುಂಬ ಸಮೇತ ಕಾರಿನಲ್ಲಿ ಹೈದರಾಬಾದ್ಗೆ ಹೋಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಹೈದರಾಬಾದ್ನಿಂದ ವನಪರ್ತಿಗೆ ಬರುತ್ತಿದ್ದ RTC ಬಸ್ಗೂ ಡಿಕ್ಕಿಯಾಗಿದೆ. ರಸ್ತೆ ಅಪಘಾತದಲ್ಲಿ ಪವಿತ್ರ ಜಯರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ಸಹ ನಟರು ಮತ್ತು ಕುಟುಂಬ ಸದಸ್ಯರು ಆಕೆಯೊಂದಿಗೆ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.
ಕಿರುತೆರೆ ನಟಿ ಪವಿತ್ರಾ ಜಯರಾಮ್ ಅವರು ತಮ್ಮ ಹುಟ್ಟೂರಿನಿಂದ ಹೈದರಾಬಾದ್ಗೆ ತೆರಳುವಾಗ ಈ ದುರಂತ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಪವಿತ್ರ ಜಯರಾಂ ಸಂಬಂಧಿ ಅಪೇಕ್ಷಾ, ಚಾಲಕ ಶ್ರೀಕಾಂತ್ ಮತ್ತು ಸಹ ನಟ ಚಂದ್ರಕಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿ ಪವಿತ್ರ ಜಯರಾಂ ದುರಂತ ಅಂತ್ಯ
ಪವಿತ್ರ ಜಯರಾಂ ಅವರು ಮೂಲತಃ ಮಂಡ್ಯ ಜಿಲ್ಲೆಯವರು. ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ಪವಿತ್ರ ಜಯರಾಂ ಅವರು ನಂತರ ತೆಲುಗು ಕಿರುತೆರೆಯಲ್ಲಿ ಅಭಿನಯಿಸಿದ್ದರು. ಪವಿತ್ರ ಜಯರಾಂ ಸಾವಿಗೆ ತೆಲುಗು ಕಿರುತೆರೆಯ ಹಲವು ಕಲಾವಿದರು ತೀವ್ರ ಸಂತಾಪ ಸೂಚಿಸಿದ್ದಾರೆ. ನಾಳೆ ಪವಿತ್ರಾ ಜಯರಾಂ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಗಿಚ್ಚಿ ಗಿಲಿಗಿಲಿ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಹಾಸ್ಯನಟ ಚಂದ್ರಪ್ರಭ; ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ