ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ
ಕರ್ತವ್ಯ ಲೋಪ ಎಸಗಿದ್ದ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಅಮಾನತು!
ಬೆಂಡಿಗೇರಿ ಇನ್ಸ್ಪೆಕ್ಟರ್ ಜತೆ ಮಹಿಳಾ ಕಾನ್ಸ್ಟೇಬಲ್ ಕೂಡ ಸಸ್ಪೆಂಡ್
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದ ಆರೋಪದ ಮೇರೆಗೆ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಮತ್ತು ಮಹಿಳಾ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ. ಜನರ ತೀವ್ರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಅವರೇ ಈ ಕ್ರಮ ತೆಗೆದುಕೊಂಡಿದ್ದಾರೆ.
ತನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ರು. ದೂರು ನೀಡಿದ್ರೂ ನಿರ್ಲಕ್ಷ್ಯ ತೋರಿದ ಆರೋಪ ಕೇಳಿ ಬಂದಿದ್ದು, ಇನ್ಸ್ಪೆಕ್ಟರ್ ಚಂದ್ರಶೇಖರ ಬಿ. ಚಿಕ್ಕೋಡಿ, ಕಾನ್ಸ್ಟೇಬಲ್ ರೇಖಾ ಅವರನ್ನು ಅಮಾನತು ಮಾಡಿ ರೇಣುಕಾ ಅವರು ಆದೇಶ ಹೊರಡಿಸಿದ್ದಾರೆ.
ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಲಾಗಿತ್ತು. ತನ್ನ ಜೊತೆ ಬರದಿದ್ರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ಹಂತಕ ವಾರ್ನಿಂಗ್ ಮಾಡಿದ್ದ. ಈ ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ದೂರು ನೀಡಿದ್ರು. ಆಗ ಪೊಲೀಸ್ರು ಅಂಜಲಿ ಕುಟುಂಬಸ್ಥರಿಗೆ ಬೈದು ವಾಪಸ್ ಕಳಿಸಿದ್ದು, ನಿರ್ಲಕ್ಷ್ಯ ತೋರಿಸಿದ್ದರು ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ
ಕರ್ತವ್ಯ ಲೋಪ ಎಸಗಿದ್ದ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಅಮಾನತು!
ಬೆಂಡಿಗೇರಿ ಇನ್ಸ್ಪೆಕ್ಟರ್ ಜತೆ ಮಹಿಳಾ ಕಾನ್ಸ್ಟೇಬಲ್ ಕೂಡ ಸಸ್ಪೆಂಡ್
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದ ಆರೋಪದ ಮೇರೆಗೆ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಮತ್ತು ಮಹಿಳಾ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ. ಜನರ ತೀವ್ರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಅವರೇ ಈ ಕ್ರಮ ತೆಗೆದುಕೊಂಡಿದ್ದಾರೆ.
ತನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ರು. ದೂರು ನೀಡಿದ್ರೂ ನಿರ್ಲಕ್ಷ್ಯ ತೋರಿದ ಆರೋಪ ಕೇಳಿ ಬಂದಿದ್ದು, ಇನ್ಸ್ಪೆಕ್ಟರ್ ಚಂದ್ರಶೇಖರ ಬಿ. ಚಿಕ್ಕೋಡಿ, ಕಾನ್ಸ್ಟೇಬಲ್ ರೇಖಾ ಅವರನ್ನು ಅಮಾನತು ಮಾಡಿ ರೇಣುಕಾ ಅವರು ಆದೇಶ ಹೊರಡಿಸಿದ್ದಾರೆ.
ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಲಾಗಿತ್ತು. ತನ್ನ ಜೊತೆ ಬರದಿದ್ರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ಹಂತಕ ವಾರ್ನಿಂಗ್ ಮಾಡಿದ್ದ. ಈ ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ದೂರು ನೀಡಿದ್ರು. ಆಗ ಪೊಲೀಸ್ರು ಅಂಜಲಿ ಕುಟುಂಬಸ್ಥರಿಗೆ ಬೈದು ವಾಪಸ್ ಕಳಿಸಿದ್ದು, ನಿರ್ಲಕ್ಷ್ಯ ತೋರಿಸಿದ್ದರು ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ