ಪತ್ನಿ ಕತ್ತು, ದೇಹದ ಅಂಗಾಂಗಗಳನ್ನು ಕತ್ತರಿಸಿ ಪರಾರಿಯಾಗಿದ್ದ
ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ, ಪತ್ನಿ ನಡುವೆ ಆಗಾಗ ಗಲಾಟೆ
ದೇಹದ ಅಂಗಾಂಗ ತುಂಡರಿಸಿ, ಚರ್ಮ ಸುಲಿದು ಭೀಕರವಾಗಿ ಕೊಲೆ
ಪತಿಯಿಂದಲೇ ಪತ್ನಿಯ ಭೀಕರ ಕೊಲೆ ಪ್ರಕರಣ ಇವತ್ತು ತುಮಕೂರು ಜಿಲ್ಲೆ ಜನರನ್ನು ಬೆಚ್ಚಿ ಬೀಳಿಸಿದೆ. 32 ವರ್ಷದ ಪುಷ್ಪ ಮೃತ ದುರ್ದೈವಿ. ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಕತ್ತರಿಸಿ ಪರಾರಿಯಾಗಿದ್ದ ಶಿವರಾಮ್ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಹುಲಿಯೂರುದುರ್ಗದ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬುವವನು ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಪುಷ್ಪಾಳನ್ನು ಮದುವೆಯಾಗಿದ್ದ.
ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡ ಶಿವರಾಮ್, ಮರದ ಸಾಮಿಲ್ವೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ಗಂಡ-ಹೆಂಡತಿ ಮಧ್ಯೆ ಗಲಾಟೆಯಾಗಿದ್ದು, ಶಿವರಾಮ್ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.
ಕಿರಾತಕ ಶಿವರಾಮ್, ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದ. ಹುಲಿಯೂರುದುರ್ಗ ಪೊಲೀಸರು ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೊಲೆಗಾರನಿಗಾಗಿ ಹುಡುಕಾಟ ನಡೆಸಿದ್ದರು.
ಇದನ್ನೂ ಓದಿ: VIDEO: ಎಂಥಾ ಕಟುಕ ತಾಯಿನಮ್ಮ ನೀನು.. ಮಗನಿಗೆ ಅಮಾನುಷವಾಗಿ ಹಲ್ಲೆ; ಆಮೇಲೇನಾಯ್ತು?
ಕೊಲೆ ಮಾಡಿದ ಆರೋಪಿ ಶಿವರಾಮು, ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮನೆಯ ಹತ್ತಿರವಿದ್ದ ಪೊದೆಯೊಂದರಲ್ಲಿ ಅಡಗಿ ಕುಳಿತ್ತಿದ್ದ. ಖಚಿತ ಮಾಹಿತಿ ಮೇರೆಗೆ ಶಿವರಾಮುನನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಗಂಡ-ಹೆಂಡತಿ ನಡುವೆ ಹೊಂದಾಣಿಕೆಯ ಕೊರತೆಯಿಂದಾಗಿ ಆಗಾಗ ಜಗಳ ನಡೆಯುತ್ತಿತ್ತು. ಅಕ್ಕಪಕ್ಕದವರು, ಸಂಬಂಧಿಕರು ಇವರ ಜಗಳ ಬಿಡಿಸುತ್ತಿದ್ದರು, ಆದರೆ ನಿನ್ನೆ ರಾತ್ರಿ ಇಬ್ಬರ ನಡುವೆ ಶುರುವಾದ ಜಗಳ ಪುಷ್ಪಾಳನ್ನ ಹತ್ಯೆ ಮಾಡುವ ಮಟ್ಟಕ್ಕೆ ಹೋಗಿದೆ. ಅಡುಗೆ ಮನೆಯಲ್ಲೇ ಕುತ್ತಿಗೆ ಕತ್ತರಿಸಿ ದೇಹವನ್ನು ಸೀಳಿ ಹಾಗೂ ದೇಹದ ಅಂಗಾಂಗಳನ್ನ ತುಂಡರಿಸಿ, ಚರ್ಮ ಸುಲಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಪತಿ ಶಿವರಾಜ್ ನನ್ನು ವಶಕ್ಕೆ ಪಡೆಯಲಾಗಿದೆ. 9 ವರ್ಷದ ಹಿಂದೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪಾಳನ್ನು ಶಿವರಾಜ್ ಮದುವೆಯಾಗಿದ್ದ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪತ್ನಿ ಕತ್ತು, ದೇಹದ ಅಂಗಾಂಗಗಳನ್ನು ಕತ್ತರಿಸಿ ಪರಾರಿಯಾಗಿದ್ದ
ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ, ಪತ್ನಿ ನಡುವೆ ಆಗಾಗ ಗಲಾಟೆ
ದೇಹದ ಅಂಗಾಂಗ ತುಂಡರಿಸಿ, ಚರ್ಮ ಸುಲಿದು ಭೀಕರವಾಗಿ ಕೊಲೆ
ಪತಿಯಿಂದಲೇ ಪತ್ನಿಯ ಭೀಕರ ಕೊಲೆ ಪ್ರಕರಣ ಇವತ್ತು ತುಮಕೂರು ಜಿಲ್ಲೆ ಜನರನ್ನು ಬೆಚ್ಚಿ ಬೀಳಿಸಿದೆ. 32 ವರ್ಷದ ಪುಷ್ಪ ಮೃತ ದುರ್ದೈವಿ. ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನು ಕತ್ತರಿಸಿ ಪರಾರಿಯಾಗಿದ್ದ ಶಿವರಾಮ್ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಈ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಹುಲಿಯೂರುದುರ್ಗದ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬುವವನು ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ಪುಷ್ಪಾಳನ್ನು ಮದುವೆಯಾಗಿದ್ದ.
ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡ ಶಿವರಾಮ್, ಮರದ ಸಾಮಿಲ್ವೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ಗಂಡ-ಹೆಂಡತಿ ಮಧ್ಯೆ ಗಲಾಟೆಯಾಗಿದ್ದು, ಶಿವರಾಮ್ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.
ಕಿರಾತಕ ಶಿವರಾಮ್, ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದ. ಹುಲಿಯೂರುದುರ್ಗ ಪೊಲೀಸರು ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕೊಲೆಗಾರನಿಗಾಗಿ ಹುಡುಕಾಟ ನಡೆಸಿದ್ದರು.
ಇದನ್ನೂ ಓದಿ: VIDEO: ಎಂಥಾ ಕಟುಕ ತಾಯಿನಮ್ಮ ನೀನು.. ಮಗನಿಗೆ ಅಮಾನುಷವಾಗಿ ಹಲ್ಲೆ; ಆಮೇಲೇನಾಯ್ತು?
ಕೊಲೆ ಮಾಡಿದ ಆರೋಪಿ ಶಿವರಾಮು, ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮನೆಯ ಹತ್ತಿರವಿದ್ದ ಪೊದೆಯೊಂದರಲ್ಲಿ ಅಡಗಿ ಕುಳಿತ್ತಿದ್ದ. ಖಚಿತ ಮಾಹಿತಿ ಮೇರೆಗೆ ಶಿವರಾಮುನನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಗಂಡ-ಹೆಂಡತಿ ನಡುವೆ ಹೊಂದಾಣಿಕೆಯ ಕೊರತೆಯಿಂದಾಗಿ ಆಗಾಗ ಜಗಳ ನಡೆಯುತ್ತಿತ್ತು. ಅಕ್ಕಪಕ್ಕದವರು, ಸಂಬಂಧಿಕರು ಇವರ ಜಗಳ ಬಿಡಿಸುತ್ತಿದ್ದರು, ಆದರೆ ನಿನ್ನೆ ರಾತ್ರಿ ಇಬ್ಬರ ನಡುವೆ ಶುರುವಾದ ಜಗಳ ಪುಷ್ಪಾಳನ್ನ ಹತ್ಯೆ ಮಾಡುವ ಮಟ್ಟಕ್ಕೆ ಹೋಗಿದೆ. ಅಡುಗೆ ಮನೆಯಲ್ಲೇ ಕುತ್ತಿಗೆ ಕತ್ತರಿಸಿ ದೇಹವನ್ನು ಸೀಳಿ ಹಾಗೂ ದೇಹದ ಅಂಗಾಂಗಳನ್ನ ತುಂಡರಿಸಿ, ಚರ್ಮ ಸುಲಿದು ಭೀಕರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಪತಿ ಶಿವರಾಜ್ ನನ್ನು ವಶಕ್ಕೆ ಪಡೆಯಲಾಗಿದೆ. 9 ವರ್ಷದ ಹಿಂದೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪಾಳನ್ನು ಶಿವರಾಜ್ ಮದುವೆಯಾಗಿದ್ದ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ