ಟೀಮ್ ಇಂಡಿಯಾದ ಆಟಗಾರರಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಬಿಸಿಸಿಐ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್!
ಸದ್ಯದಲ್ಲೇ ಈ ಬಗ್ಗೆ ಬಿಸಿಸಿಐನಿಂದ ಅಧಿಕೃತ ಘೋಷಣೆ ಸಾಧ್ಯತೆ
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಕೊನೆಗೂ ಮುಗಿದಿದೆ. ಈ ವರ್ಷ ಮೆಂಟರ್ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಕೆಕೆಆರ್ ತಂಡವು 3ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದೆ. ಸದ್ಯ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ತಂಡದ ಆಟಗಾರರು ತಯಾರಿಯಲ್ಲಿ ತೊಡಗಿದ್ದು, ಬಿಸಿಸಿಐ ಬಿಗ್ ಸರ್ಪ್ರೈಸ್ ಕೊಟ್ಟಿದೆ.
ಹೌದು, ರಾಹುಲ್ ದ್ರಾವಿಡ್ ಬಳಿಕ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಖಚಿತ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಕ್ರಿಕ್ಬಜ್ ವರದಿ ಪ್ರಕಾರ ಬಿಸಿಸಿಐ ಪ್ರಧಾನಿ ಕಾರ್ಯದರ್ಶಿ ಜಯ್ ಶಾ ಅವರು ಗೌತಮ್ ಗಂಭೀರ್ ಅವರೊಂದಿಗೆ ಮಾತಾಡಿದ್ದು ದೇಶಕ್ಕಾಗಿ ನಾವು ಈ ಕೆಲಸ ಮಾಡಲೇಬೇಕು ಎಂದು ನಿರ್ಧಾರ ಬಂದಿದ್ದಾರಂತೆ. ಹಾಗಾಗಿ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಸದ್ಯದಲ್ಲೇ ಗೌತಮ್ ಗಂಭೀರ್ ಹೆಸರು ಅನೌನ್ಸ್ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಸದ್ಯ ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಟಿ20 ವಿಶ್ವಕಪ್ವರೆಗೆ ಇದೆ. ಬಳಿಕ ಟೀಮ್ ಇಂಡಿಯಾದ ಕೋಚ್ ಆಗಿ ಗಂಭೀರ್ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.
ಬಿಸಿಸಿಐ ಇತ್ತೀಚೆಗೆ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆಸಕ್ತರು ಮೇ 27ನೇ ತಾರೀಕಿನ ಒಳಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಈ ಅವಧಿ ಮುಕ್ತಾಯವಾಗಿದೆ. ಇದರ ಮಧ್ಯೆ ಬಿಸಿಸಿಐ ಮಾಜಿ ಆಟಗಾರ ಗೌತಮ್ ಗಂಭೀರ್ ಅವರನ್ನೂ ಅಪ್ರೋಚ್ ಮಾಡಿದ್ದು, ಇವರು ಕೋಚ್ ಆಗೋದು ಫೈನಲ್ ಆಗಿದೆ.
ಇದನ್ನೂ ಓದಿ: ‘ಅಂಬಾಟಿ ರಾಯುಡು ಜೋಕರ್’ ಎಂದಿದ್ದ ಪೀಟರ್ಸನ್.. ಕೊಹ್ಲಿ ಫ್ಯಾನ್ಸ್ಗೆ ಮಾಡಿದ ಮನವಿ ಏನು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಟೀಮ್ ಇಂಡಿಯಾದ ಆಟಗಾರರಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಬಿಸಿಸಿಐ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್!
ಸದ್ಯದಲ್ಲೇ ಈ ಬಗ್ಗೆ ಬಿಸಿಸಿಐನಿಂದ ಅಧಿಕೃತ ಘೋಷಣೆ ಸಾಧ್ಯತೆ
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಕೊನೆಗೂ ಮುಗಿದಿದೆ. ಈ ವರ್ಷ ಮೆಂಟರ್ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಕೆಕೆಆರ್ ತಂಡವು 3ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದೆ. ಸದ್ಯ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ತಂಡದ ಆಟಗಾರರು ತಯಾರಿಯಲ್ಲಿ ತೊಡಗಿದ್ದು, ಬಿಸಿಸಿಐ ಬಿಗ್ ಸರ್ಪ್ರೈಸ್ ಕೊಟ್ಟಿದೆ.
ಹೌದು, ರಾಹುಲ್ ದ್ರಾವಿಡ್ ಬಳಿಕ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಖಚಿತ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಕ್ರಿಕ್ಬಜ್ ವರದಿ ಪ್ರಕಾರ ಬಿಸಿಸಿಐ ಪ್ರಧಾನಿ ಕಾರ್ಯದರ್ಶಿ ಜಯ್ ಶಾ ಅವರು ಗೌತಮ್ ಗಂಭೀರ್ ಅವರೊಂದಿಗೆ ಮಾತಾಡಿದ್ದು ದೇಶಕ್ಕಾಗಿ ನಾವು ಈ ಕೆಲಸ ಮಾಡಲೇಬೇಕು ಎಂದು ನಿರ್ಧಾರ ಬಂದಿದ್ದಾರಂತೆ. ಹಾಗಾಗಿ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಸದ್ಯದಲ್ಲೇ ಗೌತಮ್ ಗಂಭೀರ್ ಹೆಸರು ಅನೌನ್ಸ್ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಸದ್ಯ ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಟಿ20 ವಿಶ್ವಕಪ್ವರೆಗೆ ಇದೆ. ಬಳಿಕ ಟೀಮ್ ಇಂಡಿಯಾದ ಕೋಚ್ ಆಗಿ ಗಂಭೀರ್ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ.
ಬಿಸಿಸಿಐ ಇತ್ತೀಚೆಗೆ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆಸಕ್ತರು ಮೇ 27ನೇ ತಾರೀಕಿನ ಒಳಗೆ ಅರ್ಜಿ ಸಲ್ಲಿಸಬಹುದಾಗಿತ್ತು. ಈ ಅವಧಿ ಮುಕ್ತಾಯವಾಗಿದೆ. ಇದರ ಮಧ್ಯೆ ಬಿಸಿಸಿಐ ಮಾಜಿ ಆಟಗಾರ ಗೌತಮ್ ಗಂಭೀರ್ ಅವರನ್ನೂ ಅಪ್ರೋಚ್ ಮಾಡಿದ್ದು, ಇವರು ಕೋಚ್ ಆಗೋದು ಫೈನಲ್ ಆಗಿದೆ.
ಇದನ್ನೂ ಓದಿ: ‘ಅಂಬಾಟಿ ರಾಯುಡು ಜೋಕರ್’ ಎಂದಿದ್ದ ಪೀಟರ್ಸನ್.. ಕೊಹ್ಲಿ ಫ್ಯಾನ್ಸ್ಗೆ ಮಾಡಿದ ಮನವಿ ಏನು?
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ