ಫಾಫ್ ಡು ಪ್ಲೆಸಿಸ್ಗೆ ಕ್ಯಾಪ್ಟನ್ಸಿಯಿಂದ ಕೊಕ್ ಗ್ಯಾರಂಟಿ
ಆರ್ಸಿಬಿ ತಂಡದಲ್ಲಿ ಮತ್ತೆ ನಾಯಕತ್ವದ ಚರ್ಚೆ ಶುರುವಾಗಿದೆ
ಆರ್ಸಿಬಿ ಯಾರನ್ನೆಲ್ಲ ಕೈಬಿಡಬಹುದು ಎಂದು ತಿಳಿಸಿದ ಮಾಜಿ ಕ್ರಿಕೆಟಿಗ
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು.. ಮುಂದಿನ ವರ್ಷ ನಡೆಯುವ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್ಸಿಬಿ ಯಾರನ್ನೆಲ್ಲ ಉಳಿಸಿಕೊಳ್ಳುತ್ತೆ. ಯಾರನ್ನೆಲ್ಲ ಕೈಬಿಡುತ್ತೆ ಅನ್ನೋದ್ರ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ ಅವರನ್ನು ಮತ್ತೆ ತಂಡದ ನಾಯಕರನ್ನಾಗಿ ಮಾಡಬೇಕು ಎಂದಿದ್ದಾರೆ.
ವಿರಾಟ್ ಕೊಹ್ಲಿಯನ್ನು ಆರ್ಸಿಬಿ ಹರಾಜಿಗೂ ಮುನ್ನವೇ ಉಳಿಸಿಕೊಳ್ಳಬೇಕು. ಜೊತೆಗೆ ಅವರಿಗೆ ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ನೀಡಬೇಕು. ಅಂದಾಗ ಮಾತ್ರ ತಂಡದಲ್ಲಿ ಹೊಸ ಕಳೆ ಬರಲಿದೆ. ಆರ್ಸಿಬಿಯಲ್ಲಿ ರಿಟೈನ್ ಮಾಡಿಕೊಳ್ಳಲು ಇರುವ ಏಕೈಕ ವ್ಯಕ್ತಿ ಕೊಹ್ಲಿ. ಖಂಡಿತವಾಗಿಯೂ ಅವರ ಹೆಸರು ರಿಟೈನ್ ಲಿಸ್ಟ್ನಲ್ಲಿ ಮೊದಲ ಸ್ಥಾನದಲ್ಲಿ ಇರುತ್ತದೆ.
ಇದನ್ನೂ ಓದಿ:ಪ್ರಿಯಕರನ ಜೊತೆ ಮದುಮಗಳು ಪರಾರಿ.. ಕಣ್ಣೀರು ಇಡುತ್ತ ಪೊಲೀಸರ ಬಳಿ ಬಂದ ಪೋಷಕರು
ಡುಪ್ಲೆಸಿಸ್ ಅವರನ್ನು ಆರ್ಸಿಬಿ ತಂಡದಲ್ಲಿ ಉಳಿಸಿಕೊಳ್ಳುವಂತೆ ಕಾಣುತ್ತಿಲ್ಲ. ಕಾರಣ ಇಷ್ಟೇ ಡುಪ್ಲೆಸಿಸ್ ನೇತೃತ್ವದಲ್ಲಿ ಆರ್ಸಿಬಿ ಮೂರು ಸೀಸನ್ಗಳನ್ನು ಆಡಿದೆ. ಅವರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ವಿಫಲರಾಗಿದ್ದಾರೆ. ಆರ್ಸಿಬಿ ಭವಿಷ್ಯದ ದೃಷ್ಟಿಯಿಂದ ಅವರನ್ನು ಕೈಬಿಡಬಹುದು.
ಅದೇ ರೀತಿ ಮ್ಯಾಕ್ಸ್ವೆಲ್ರನ್ನೂ ಆಯ್ಕೆ ಮಾಡಿಕೊಳ್ತಾರೆ ಅನ್ನೋದನ್ನೂ ನಾನು ನಂಬಲ್ಲ. ಅವರಿಗೂ ಟಾಟಾ ಬೈಬೈ ಹೇಳಬಹುದು. ಅಲ್ಜರಿ ಜೊಸೇಫ್, ಲೊಕಿ ಫರ್ಗುಸನ್ರಿಗೂ ಆರ್ಸಿಬಿ ಟಾಟಾ ಹೇಳಬಹುದು ಎಂದು ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:IPL ತಂಡ ಪ್ರಕಟಿಸಿದ ರಾಯಡು.. ಆರ್ಸಿಬಿಯ ಒಬ್ಬನೇ ಒಬ್ಬ ಆಟಗಾರನಿಗೆ ಸ್ಥಾನ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಫಾಫ್ ಡು ಪ್ಲೆಸಿಸ್ಗೆ ಕ್ಯಾಪ್ಟನ್ಸಿಯಿಂದ ಕೊಕ್ ಗ್ಯಾರಂಟಿ
ಆರ್ಸಿಬಿ ತಂಡದಲ್ಲಿ ಮತ್ತೆ ನಾಯಕತ್ವದ ಚರ್ಚೆ ಶುರುವಾಗಿದೆ
ಆರ್ಸಿಬಿ ಯಾರನ್ನೆಲ್ಲ ಕೈಬಿಡಬಹುದು ಎಂದು ತಿಳಿಸಿದ ಮಾಜಿ ಕ್ರಿಕೆಟಿಗ
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು.. ಮುಂದಿನ ವರ್ಷ ನಡೆಯುವ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್ಸಿಬಿ ಯಾರನ್ನೆಲ್ಲ ಉಳಿಸಿಕೊಳ್ಳುತ್ತೆ. ಯಾರನ್ನೆಲ್ಲ ಕೈಬಿಡುತ್ತೆ ಅನ್ನೋದ್ರ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ ಅವರನ್ನು ಮತ್ತೆ ತಂಡದ ನಾಯಕರನ್ನಾಗಿ ಮಾಡಬೇಕು ಎಂದಿದ್ದಾರೆ.
ವಿರಾಟ್ ಕೊಹ್ಲಿಯನ್ನು ಆರ್ಸಿಬಿ ಹರಾಜಿಗೂ ಮುನ್ನವೇ ಉಳಿಸಿಕೊಳ್ಳಬೇಕು. ಜೊತೆಗೆ ಅವರಿಗೆ ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ನೀಡಬೇಕು. ಅಂದಾಗ ಮಾತ್ರ ತಂಡದಲ್ಲಿ ಹೊಸ ಕಳೆ ಬರಲಿದೆ. ಆರ್ಸಿಬಿಯಲ್ಲಿ ರಿಟೈನ್ ಮಾಡಿಕೊಳ್ಳಲು ಇರುವ ಏಕೈಕ ವ್ಯಕ್ತಿ ಕೊಹ್ಲಿ. ಖಂಡಿತವಾಗಿಯೂ ಅವರ ಹೆಸರು ರಿಟೈನ್ ಲಿಸ್ಟ್ನಲ್ಲಿ ಮೊದಲ ಸ್ಥಾನದಲ್ಲಿ ಇರುತ್ತದೆ.
ಇದನ್ನೂ ಓದಿ:ಪ್ರಿಯಕರನ ಜೊತೆ ಮದುಮಗಳು ಪರಾರಿ.. ಕಣ್ಣೀರು ಇಡುತ್ತ ಪೊಲೀಸರ ಬಳಿ ಬಂದ ಪೋಷಕರು
ಡುಪ್ಲೆಸಿಸ್ ಅವರನ್ನು ಆರ್ಸಿಬಿ ತಂಡದಲ್ಲಿ ಉಳಿಸಿಕೊಳ್ಳುವಂತೆ ಕಾಣುತ್ತಿಲ್ಲ. ಕಾರಣ ಇಷ್ಟೇ ಡುಪ್ಲೆಸಿಸ್ ನೇತೃತ್ವದಲ್ಲಿ ಆರ್ಸಿಬಿ ಮೂರು ಸೀಸನ್ಗಳನ್ನು ಆಡಿದೆ. ಅವರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ವಿಫಲರಾಗಿದ್ದಾರೆ. ಆರ್ಸಿಬಿ ಭವಿಷ್ಯದ ದೃಷ್ಟಿಯಿಂದ ಅವರನ್ನು ಕೈಬಿಡಬಹುದು.
ಅದೇ ರೀತಿ ಮ್ಯಾಕ್ಸ್ವೆಲ್ರನ್ನೂ ಆಯ್ಕೆ ಮಾಡಿಕೊಳ್ತಾರೆ ಅನ್ನೋದನ್ನೂ ನಾನು ನಂಬಲ್ಲ. ಅವರಿಗೂ ಟಾಟಾ ಬೈಬೈ ಹೇಳಬಹುದು. ಅಲ್ಜರಿ ಜೊಸೇಫ್, ಲೊಕಿ ಫರ್ಗುಸನ್ರಿಗೂ ಆರ್ಸಿಬಿ ಟಾಟಾ ಹೇಳಬಹುದು ಎಂದು ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:IPL ತಂಡ ಪ್ರಕಟಿಸಿದ ರಾಯಡು.. ಆರ್ಸಿಬಿಯ ಒಬ್ಬನೇ ಒಬ್ಬ ಆಟಗಾರನಿಗೆ ಸ್ಥಾನ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್