2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿದೆ..!
ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದೆ
2 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾದ ಕಾಂಗ್ರೆಸ್ ನಾಯಕ ರಾಹುಲ್
ನವದೆಹಲಿ: 2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ಈ ಸಂಭ್ರಮಕ್ಕೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ಮಧ್ಯೆ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರೋ 2 ಲೋಕಸಭಾ ಕ್ಷೇತ್ರಗಳು ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಕಳೆದ ಸಲ ರಾಹುಲ್ ಅಮೇಥಿ ಹಾಗೂ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತರೂ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡಿನ ಜನ ಗೆಲ್ಲಿಸಿದ್ರು. ಸದ್ಯ ಕಳೆದ ಬಾರಿಗಿಂತಲೂ ರಾಹುಲ್ ಗಾಂಧಿ ಚಾರ್ಮ್ ಈ ಸಲ ಹೆಚ್ಚಿದೆ ಎನ್ನುತ್ತಿವೆ ಎಕ್ಸಿಟ್ ಪೋಲ್ ಸಮೀಕ್ಷೆಗಳು. ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾಹುಲ್ ಗಾಂಧಿ ಈ ಬಾರಿ ವಯನಾಡಿನಲ್ಲಿ ಪಡೆಯುವ ಮತಗಳಿಕೆ ಕಡಿಮೆ ಆಗಬಹುದು ಎಂದು ತಿಳಿದು ಬಂದಿದೆ.
2019ರಲ್ಲಿ ರಾಹುಲ್ ಗಾಂಧಿ ಶೇಕಡಾ 64.7 ಮತಗಳನ್ನು ಪಡೆದಿದ್ದರು. ಈ ಬಾರಿ ಮತಗಳ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ. ಅಂದರೆ ಗೆಲುವಿನ ಅಂತರ ಕಡಿಮೆ ಆಗಲಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಹೇಳಿದ್ದೇನು..?
ದೇಶದಲ್ಲಿ ದ್ವೇಷ ರಾಜಕಾರಣದ ವಾತಾವರಣ ಅಂತ್ಯಗೊಳ್ಳಲಿದೆ. ಭಾರತದ ಜನರು, ನಮಗೆ ದ್ವೇಷ ಬೇಕಿಲ್ಲ, ನಮಗೆ ಪ್ರೀತಿ ಬೇಕು ಎಂಬುದನ್ನು ಇಡೀ ಜಗತ್ತಿಗೆ ಸಾರಲಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋದೇ ನನ್ನ ಗುರಿ ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯದ ಟಾಪ್ 5 ಲೋಕಸಭಾ ಕ್ಷೇತ್ರಗಳು ಇವು! ಗೆಲ್ಲೋದ್ಯಾರು? ನೀವು ಓದಲೇಬೇಕಾದ ಸ್ಟೋರಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿದೆ..!
ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದೆ
2 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾದ ಕಾಂಗ್ರೆಸ್ ನಾಯಕ ರಾಹುಲ್
ನವದೆಹಲಿ: 2024ರ ಭಾರತೀಯ ಸಾರ್ವತ್ರಿಕ ಚುನಾವಣೆ 7 ಹಂತಗಳಲ್ಲಿ ಮುಗಿದಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ಈ ಸಂಭ್ರಮಕ್ಕೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ಮಧ್ಯೆ ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರೋ 2 ಲೋಕಸಭಾ ಕ್ಷೇತ್ರಗಳು ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಕಳೆದ ಸಲ ರಾಹುಲ್ ಅಮೇಥಿ ಹಾಗೂ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತರೂ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡಿನ ಜನ ಗೆಲ್ಲಿಸಿದ್ರು. ಸದ್ಯ ಕಳೆದ ಬಾರಿಗಿಂತಲೂ ರಾಹುಲ್ ಗಾಂಧಿ ಚಾರ್ಮ್ ಈ ಸಲ ಹೆಚ್ಚಿದೆ ಎನ್ನುತ್ತಿವೆ ಎಕ್ಸಿಟ್ ಪೋಲ್ ಸಮೀಕ್ಷೆಗಳು. ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ರಾಹುಲ್ ಗಾಂಧಿ ಈ ಬಾರಿ ವಯನಾಡಿನಲ್ಲಿ ಪಡೆಯುವ ಮತಗಳಿಕೆ ಕಡಿಮೆ ಆಗಬಹುದು ಎಂದು ತಿಳಿದು ಬಂದಿದೆ.
2019ರಲ್ಲಿ ರಾಹುಲ್ ಗಾಂಧಿ ಶೇಕಡಾ 64.7 ಮತಗಳನ್ನು ಪಡೆದಿದ್ದರು. ಈ ಬಾರಿ ಮತಗಳ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ. ಅಂದರೆ ಗೆಲುವಿನ ಅಂತರ ಕಡಿಮೆ ಆಗಲಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಹೇಳಿದ್ದೇನು..?
ದೇಶದಲ್ಲಿ ದ್ವೇಷ ರಾಜಕಾರಣದ ವಾತಾವರಣ ಅಂತ್ಯಗೊಳ್ಳಲಿದೆ. ಭಾರತದ ಜನರು, ನಮಗೆ ದ್ವೇಷ ಬೇಕಿಲ್ಲ, ನಮಗೆ ಪ್ರೀತಿ ಬೇಕು ಎಂಬುದನ್ನು ಇಡೀ ಜಗತ್ತಿಗೆ ಸಾರಲಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋದೇ ನನ್ನ ಗುರಿ ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯದ ಟಾಪ್ 5 ಲೋಕಸಭಾ ಕ್ಷೇತ್ರಗಳು ಇವು! ಗೆಲ್ಲೋದ್ಯಾರು? ನೀವು ಓದಲೇಬೇಕಾದ ಸ್ಟೋರಿ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ