ಆಂಧ್ರ ಪ್ರದೇಶದಲ್ಲಿ ಆಡಳಿತ ಪಕ್ಷ YSRCPಗೆ ಭಾರೀ ಮುಖಭಂಗ
ಟಿಡಿಪಿ, ಬಿಜೆಪಿ ಹಾಗೂ ಜನಸೇನಾ ಒಂದಾಗಿ ಸ್ಪರ್ಧೆ ಮಾಡಿದ್ದವು
ಒಡಿಶಾದ CM ನವೀನ್ ಪಟ್ನಾಯಕ್ ಕೋಟೆಗೆ ಎಂಟ್ರಿಯಾದ ಬಿಜೆಪಿ
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮತ್ತೊಮ್ಮೆ ಗೆದ್ದು ಬಂದಿದ್ದಾರೆ. ಜಿದ್ದಾಜಿದ್ದಿನ ಕದನದಲ್ಲಿ ಟಿಡಿಪಿ ದಿಗ್ವಿಜಯ ಸಾಧಿಸಿದೆ. ಹಾಲಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಭಾರೀ ಮುಖಭಂಗವಾಗಿದೆ. ಫಿನಿಕ್ಸ್ನಂತೆ ಎದ್ದು ಬಂದ ಚಂದ್ರಬಾಬು ನಾಯ್ಡು ಭರ್ಜರಿ ಬಹುಮತದೊಂದಿಗೆ ಮತ್ತೊಮ್ಮೆ ಆಂಧ್ರಾಧಿಪತಿಯಾಗಲು ಸಜ್ಜಾಗಿದ್ದಾರೆ. ಅತ್ತ ಒಡಿಶಾದಲ್ಲಿ ಅಚ್ಚರಿಯ ಫಲಿತಾಂಶದೊಂದಿಗೆ ಕಮಲ ಅರಳಿದೆ.
ಕರ್ನಾಟಕದ ನೆರೆರಾಜ್ಯ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 5 ವರ್ಷಗಳ ಬಳಿಕ ಟಿಡಿಪಿ ಮತ್ತು ಜನಸೇನಾ ಮತ್ತು ಬಿಜೆಪಿ ಮೈತ್ರಿಗೆ ಗೆಲುವಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಗೆ ಹೀನಾಯ ಸೋಲು ಉಂಟಾಗಿದೆ. ಲೋಕ ಸಮರದ ಜೊತೆ ಜೊತೆಯಲ್ಲೇ ನಡೆದಿದ್ದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರ ಮೈತ್ರಿ ದೋಸ್ತಿ ಜಯ ಸಾಧಿಸಿದೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗನ್ಮೋಹನ್
ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ದಿಗ್ವಿಜಯ ಸಾಧಿಸಿದೆ. ವೈಎಸ್ಆರ್ಸಿಪಿ ಪಕ್ಷದ ಮುಖ್ಯಸ್ಥ, ಹಾಲಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಭಾರೀ ಮುಖಭಂಗವಾಗಿದೆ. ಯಾರೂ ಊಹಿಸಿರದ ರೀತಿಯಲ್ಲಿ ಜಗನ್ ಸರ್ಕಾರ ಪತನಗೊಂಡಿದೆ. ಇದರ ಬೆನ್ನಲ್ಲೇ ಸೋಲಿನ ಹೊಣೆಹೊತ್ತು ಸಿಎಂ ಸ್ಥಾನಕ್ಕೆ ಜಗನ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ಫಿನಿಕ್ಸ್ನಂತೆ ಗೆದ್ದು ಬಂದ ಚಂದ್ರಬಾಬು ನಾಯ್ಡು
ಸಾಲು ಸಾಲು ಭ್ರಷ್ಟಾಚಾರದ ಆರೋಪ ಹೊತ್ತು ಜೈಲುವಾಸ ಅನುಭವಿಸಿದ್ದ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು 2024ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಫಿನಿಕ್ಸ್ನಂತೆ ಎದ್ದು ಬಂದು ಗೆಲುವು ಸಾಧಿಸಿದ್ದಾರೆ. ಪವರ್ ಸ್ಟಾರ್ ಪವನ್ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷ ಮತ್ತು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಚಂದ್ರಬಾಬು ನಾಯ್ಡು ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: 11 ವರ್ಷ.. 9 ಪಂದ್ಯ.. 9 ಸೋಲು.. ಕಪ್ ನಮ್ದಲ್ಲ.. ಈ ಇಬ್ಬರು ನಾಯಕರ ಕಾಡಿದ ಬ್ಯಾಡ್ಲಕ್!
ಆಂಧ್ರದ ಡಿಸಿಎಂ ಆಗ್ತಾರಾ ಪವರ್ ಸ್ಟಾರ್?
ಇತ್ತ ಚುನಾವಣೆಯಲ್ಲಿ ಜಯ ದಾಖಲಿಸುತ್ತಿದಂತೆ ಚಂದ್ರಬಾಬು ನಾಯ್ಡು ಅವರು ಕಳೆದ 5 ವರ್ಷಗಳ ಸರ್ಕಾರದ ಎಲ್ಲ ಫೈಲುಗಳನ್ನ ತರಿಸಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ತಮ್ಮ ಕನಸಿನ ಅಮರಾವತಿಯಲ್ಲಿ ಜೂನ್ 9ರಂದು ನಾಯ್ಡು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಇನ್ನು ಡಿಸಿಎಂ ಯಾರಾಗ್ತಾರೇ ಎಂಬ ಕುತೂಹಲ ಹೆಚ್ಚಾಗಿದೆ. ಇತ್ತ ಚುನಾವಣೆಯಲ್ಲಿ ಮೊದಲ ಬಾರಿಗೆ ಜಯ ದಾಖಲಿಸಿರುವ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಡಿಸಿಎಂ ಆಗ್ತಾರೇ ಎಂಬ ಮಾತು ಕೇಳಿ ಬರುತ್ತಿದೆ.
ಒಡಿಶಾದಲ್ಲಿ ಅರಲಿದ ‘ಕಮಲ’.. ಬಿಜೆಡಿಗೆ ಹೀನಾಯ ಸೋಲು
ಆಂಧ್ರದ ಜೊತೆ ಒಡಿಶಾದಲ್ಲೂ ಸರ್ಕಾರ ಬದಲಾವಣೆ ಆಗಿದೆ. ಲೋಕ ಸಮರದ ಹೊತ್ತಲ್ಲೇ ನಡೆದ ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಪಕ್ಷ ಭರ್ಜರಿ ಜಯಭೇರಿ ಬಾರಿಸಿ ನೂತನ ಸರ್ಕಾರ ರಚಿಸಲು ಮುಂದಾಗಿದೆ. ಹಾಲಿ ಸಿಎಂ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ ಪಾರ್ಟಿಗೆ ಭಾರೀ ಮುಖಭಂಗ ಉಂಟಾಗಿದೆ. ಈ ಮೂಲಕ ಪಟ್ನಾಯಕ್ ಕೋಟೆ ಕಮಲ ಪಾಳಯದ ಪಾಲಾದಂತಾಗಿದ್ದು ಬಿಜು ಪಟ್ನಾಯಕ್ ಸ್ಥಾಪಿಸಿದ್ದ ಸಾಮ್ರಾಜ್ಯ ಪತನಗೊಂಡಂತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆಂಧ್ರ ಪ್ರದೇಶದಲ್ಲಿ ಆಡಳಿತ ಪಕ್ಷ YSRCPಗೆ ಭಾರೀ ಮುಖಭಂಗ
ಟಿಡಿಪಿ, ಬಿಜೆಪಿ ಹಾಗೂ ಜನಸೇನಾ ಒಂದಾಗಿ ಸ್ಪರ್ಧೆ ಮಾಡಿದ್ದವು
ಒಡಿಶಾದ CM ನವೀನ್ ಪಟ್ನಾಯಕ್ ಕೋಟೆಗೆ ಎಂಟ್ರಿಯಾದ ಬಿಜೆಪಿ
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮತ್ತೊಮ್ಮೆ ಗೆದ್ದು ಬಂದಿದ್ದಾರೆ. ಜಿದ್ದಾಜಿದ್ದಿನ ಕದನದಲ್ಲಿ ಟಿಡಿಪಿ ದಿಗ್ವಿಜಯ ಸಾಧಿಸಿದೆ. ಹಾಲಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಭಾರೀ ಮುಖಭಂಗವಾಗಿದೆ. ಫಿನಿಕ್ಸ್ನಂತೆ ಎದ್ದು ಬಂದ ಚಂದ್ರಬಾಬು ನಾಯ್ಡು ಭರ್ಜರಿ ಬಹುಮತದೊಂದಿಗೆ ಮತ್ತೊಮ್ಮೆ ಆಂಧ್ರಾಧಿಪತಿಯಾಗಲು ಸಜ್ಜಾಗಿದ್ದಾರೆ. ಅತ್ತ ಒಡಿಶಾದಲ್ಲಿ ಅಚ್ಚರಿಯ ಫಲಿತಾಂಶದೊಂದಿಗೆ ಕಮಲ ಅರಳಿದೆ.
ಕರ್ನಾಟಕದ ನೆರೆರಾಜ್ಯ ಆಂಧ್ರಪ್ರದೇಶದ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 5 ವರ್ಷಗಳ ಬಳಿಕ ಟಿಡಿಪಿ ಮತ್ತು ಜನಸೇನಾ ಮತ್ತು ಬಿಜೆಪಿ ಮೈತ್ರಿಗೆ ಗೆಲುವಾಗಿದೆ. ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ಗೆ ಹೀನಾಯ ಸೋಲು ಉಂಟಾಗಿದೆ. ಲೋಕ ಸಮರದ ಜೊತೆ ಜೊತೆಯಲ್ಲೇ ನಡೆದಿದ್ದ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರ ಮೈತ್ರಿ ದೋಸ್ತಿ ಜಯ ಸಾಧಿಸಿದೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗನ್ಮೋಹನ್
ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ದಿಗ್ವಿಜಯ ಸಾಧಿಸಿದೆ. ವೈಎಸ್ಆರ್ಸಿಪಿ ಪಕ್ಷದ ಮುಖ್ಯಸ್ಥ, ಹಾಲಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಭಾರೀ ಮುಖಭಂಗವಾಗಿದೆ. ಯಾರೂ ಊಹಿಸಿರದ ರೀತಿಯಲ್ಲಿ ಜಗನ್ ಸರ್ಕಾರ ಪತನಗೊಂಡಿದೆ. ಇದರ ಬೆನ್ನಲ್ಲೇ ಸೋಲಿನ ಹೊಣೆಹೊತ್ತು ಸಿಎಂ ಸ್ಥಾನಕ್ಕೆ ಜಗನ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ಫಿನಿಕ್ಸ್ನಂತೆ ಗೆದ್ದು ಬಂದ ಚಂದ್ರಬಾಬು ನಾಯ್ಡು
ಸಾಲು ಸಾಲು ಭ್ರಷ್ಟಾಚಾರದ ಆರೋಪ ಹೊತ್ತು ಜೈಲುವಾಸ ಅನುಭವಿಸಿದ್ದ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು 2024ರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಫಿನಿಕ್ಸ್ನಂತೆ ಎದ್ದು ಬಂದು ಗೆಲುವು ಸಾಧಿಸಿದ್ದಾರೆ. ಪವರ್ ಸ್ಟಾರ್ ಪವನ್ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷ ಮತ್ತು ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಚಂದ್ರಬಾಬು ನಾಯ್ಡು ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಸರ್ಕಾರ ರಚನೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ: 11 ವರ್ಷ.. 9 ಪಂದ್ಯ.. 9 ಸೋಲು.. ಕಪ್ ನಮ್ದಲ್ಲ.. ಈ ಇಬ್ಬರು ನಾಯಕರ ಕಾಡಿದ ಬ್ಯಾಡ್ಲಕ್!
ಆಂಧ್ರದ ಡಿಸಿಎಂ ಆಗ್ತಾರಾ ಪವರ್ ಸ್ಟಾರ್?
ಇತ್ತ ಚುನಾವಣೆಯಲ್ಲಿ ಜಯ ದಾಖಲಿಸುತ್ತಿದಂತೆ ಚಂದ್ರಬಾಬು ನಾಯ್ಡು ಅವರು ಕಳೆದ 5 ವರ್ಷಗಳ ಸರ್ಕಾರದ ಎಲ್ಲ ಫೈಲುಗಳನ್ನ ತರಿಸಿಕೊಂಡಿದ್ದಾರೆ ಎಂದು ಹೇಳಲಾಗ್ತಿದೆ. ತಮ್ಮ ಕನಸಿನ ಅಮರಾವತಿಯಲ್ಲಿ ಜೂನ್ 9ರಂದು ನಾಯ್ಡು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಇನ್ನು ಡಿಸಿಎಂ ಯಾರಾಗ್ತಾರೇ ಎಂಬ ಕುತೂಹಲ ಹೆಚ್ಚಾಗಿದೆ. ಇತ್ತ ಚುನಾವಣೆಯಲ್ಲಿ ಮೊದಲ ಬಾರಿಗೆ ಜಯ ದಾಖಲಿಸಿರುವ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಡಿಸಿಎಂ ಆಗ್ತಾರೇ ಎಂಬ ಮಾತು ಕೇಳಿ ಬರುತ್ತಿದೆ.
ಒಡಿಶಾದಲ್ಲಿ ಅರಲಿದ ‘ಕಮಲ’.. ಬಿಜೆಡಿಗೆ ಹೀನಾಯ ಸೋಲು
ಆಂಧ್ರದ ಜೊತೆ ಒಡಿಶಾದಲ್ಲೂ ಸರ್ಕಾರ ಬದಲಾವಣೆ ಆಗಿದೆ. ಲೋಕ ಸಮರದ ಹೊತ್ತಲ್ಲೇ ನಡೆದ ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ಪಕ್ಷ ಭರ್ಜರಿ ಜಯಭೇರಿ ಬಾರಿಸಿ ನೂತನ ಸರ್ಕಾರ ರಚಿಸಲು ಮುಂದಾಗಿದೆ. ಹಾಲಿ ಸಿಎಂ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ ಪಾರ್ಟಿಗೆ ಭಾರೀ ಮುಖಭಂಗ ಉಂಟಾಗಿದೆ. ಈ ಮೂಲಕ ಪಟ್ನಾಯಕ್ ಕೋಟೆ ಕಮಲ ಪಾಳಯದ ಪಾಲಾದಂತಾಗಿದ್ದು ಬಿಜು ಪಟ್ನಾಯಕ್ ಸ್ಥಾಪಿಸಿದ್ದ ಸಾಮ್ರಾಜ್ಯ ಪತನಗೊಂಡಂತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ