ಸಂಸತ್ ಸಂಕೀರ್ಣ ಪ್ರವೇಶಿಸಲು ಯತ್ನಿಸಿದ ಮೂವರು
ನಕಲಿ ಆಧಾರ್ ಚೀಟಿ ಹಿಡಿದುಕೊಂಡು ಸಂಸತ್ ಪ್ರವೇಶಿಸಲು ಯತ್ನ
ಭಾರತೀಯ ದಂಡ ಸಂಹಿತೆ ಸೆಕ್ಷನ್ ಅಡಿಯಲ್ಲಿ ಮೂವರ ಬಂಧನ
ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಸಂಕೀರ್ಣ ಪ್ರವೇಶಿಸಲು ಯತ್ನಿಸಿದ ಮೂವರನ್ನು ಸಿಐಎಸ್ಎಫ್ ಯೋಧರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಬಂಧಿತರನ್ನು ಖಾಸಿಂ, ಮೋನಿಸ್, ಸೋಯೆಬ್ ಎಂದು ಗುರುತಿಸಲಾಗಿದೆ.
ಸೋಯೆಬ್ ಗುರುತಿನ ಚೀಟಿಯನ್ನು ಹಿಡಿದುಕೊಂಡು ಸಂಸತ್ ಪ್ರವೇಶಿಸಲು ಯತ್ನಿಸಿದ್ದಾನೆ. ಈತ ಉತ್ತರದ ಪ್ರದೇಶದ ಹಾಪುರ್ ನಿವಾಸಿ ಎಂದು ಗುರುತಿನ ಚೀಟಿಯಲ್ಲಿ ನಮೂದಿಸಿ ಸಂಸತ್ ಪ್ರವೇಶಿಸಲು ಮುಂದಾಗಿದ್ದಾನೆ. ಸದ್ಯ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ ಅಡಿಯಲ್ಲಿ ಬಂಧಿಸಲಾಗಿದೆ.
ಬಂಧಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ. 419, 465,468, 120ಬಿ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ಮೂವರ ನಕಲಿ ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ಕೀಳಲು ಮರವೇರಿದ ಮಗ.. ಕಾಲು ಜಾರಿ ಬಿದ್ದು ಸಾವು
ಕಳೆದ ವರ್ಷ ಡಿಸೆಂಬರ್ನಲ್ಲಿ ಮೈಸೂರು ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರಿಂದ ಅನುಮತಿ ಪಡೆದ ಆರು ವಿದ್ಯಾರ್ಥಿಗಳು ಸಂಸತ್ ಪ್ರವೇಶಿಸಿದ್ದರು. ಸಂಸತ್ನಲ್ಲಿ ಹೊಗೆ ಡಬ್ಬಿ ಹಚ್ಚಿದ್ದರು. ಈ ಘಟನೆಯಲ್ಲಿ ಮೈಸೂರು ಮೂಲದ ವ್ಯಕ್ತಿಯೂ ಇದ್ದನು. ಇದೀಗ ಅಂತಹದೇ ಘಟನೆ ಎಂಬಂತೆ ನಕಲಿ ಗುರುತಿನ ಚೀಟಿ ಹಿಡಿದುಕೊಂಡು ಸಂಸತ್ ಪ್ರವೇಶಿಸಲು ಯತ್ನಿಸಿದ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಂಸತ್ ಸಂಕೀರ್ಣ ಪ್ರವೇಶಿಸಲು ಯತ್ನಿಸಿದ ಮೂವರು
ನಕಲಿ ಆಧಾರ್ ಚೀಟಿ ಹಿಡಿದುಕೊಂಡು ಸಂಸತ್ ಪ್ರವೇಶಿಸಲು ಯತ್ನ
ಭಾರತೀಯ ದಂಡ ಸಂಹಿತೆ ಸೆಕ್ಷನ್ ಅಡಿಯಲ್ಲಿ ಮೂವರ ಬಂಧನ
ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಸಂಕೀರ್ಣ ಪ್ರವೇಶಿಸಲು ಯತ್ನಿಸಿದ ಮೂವರನ್ನು ಸಿಐಎಸ್ಎಫ್ ಯೋಧರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಬಂಧಿತರನ್ನು ಖಾಸಿಂ, ಮೋನಿಸ್, ಸೋಯೆಬ್ ಎಂದು ಗುರುತಿಸಲಾಗಿದೆ.
ಸೋಯೆಬ್ ಗುರುತಿನ ಚೀಟಿಯನ್ನು ಹಿಡಿದುಕೊಂಡು ಸಂಸತ್ ಪ್ರವೇಶಿಸಲು ಯತ್ನಿಸಿದ್ದಾನೆ. ಈತ ಉತ್ತರದ ಪ್ರದೇಶದ ಹಾಪುರ್ ನಿವಾಸಿ ಎಂದು ಗುರುತಿನ ಚೀಟಿಯಲ್ಲಿ ನಮೂದಿಸಿ ಸಂಸತ್ ಪ್ರವೇಶಿಸಲು ಮುಂದಾಗಿದ್ದಾನೆ. ಸದ್ಯ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ ಅಡಿಯಲ್ಲಿ ಬಂಧಿಸಲಾಗಿದೆ.
ಬಂಧಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ. 419, 465,468, 120ಬಿ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ಮೂವರ ನಕಲಿ ಗುರುತಿನ ಚೀಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ಕೀಳಲು ಮರವೇರಿದ ಮಗ.. ಕಾಲು ಜಾರಿ ಬಿದ್ದು ಸಾವು
ಕಳೆದ ವರ್ಷ ಡಿಸೆಂಬರ್ನಲ್ಲಿ ಮೈಸೂರು ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರಿಂದ ಅನುಮತಿ ಪಡೆದ ಆರು ವಿದ್ಯಾರ್ಥಿಗಳು ಸಂಸತ್ ಪ್ರವೇಶಿಸಿದ್ದರು. ಸಂಸತ್ನಲ್ಲಿ ಹೊಗೆ ಡಬ್ಬಿ ಹಚ್ಚಿದ್ದರು. ಈ ಘಟನೆಯಲ್ಲಿ ಮೈಸೂರು ಮೂಲದ ವ್ಯಕ್ತಿಯೂ ಇದ್ದನು. ಇದೀಗ ಅಂತಹದೇ ಘಟನೆ ಎಂಬಂತೆ ನಕಲಿ ಗುರುತಿನ ಚೀಟಿ ಹಿಡಿದುಕೊಂಡು ಸಂಸತ್ ಪ್ರವೇಶಿಸಲು ಯತ್ನಿಸಿದ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ