‘ಲೋಕ’ ಚುನಾವಣೆ ಫಲಿತಾಂಶ ಬಳಿಕ ಮಹತ್ವದ ನಿರ್ಧಾರ
ಒಟ್ಟು ಮೂರು ಚಿತ್ರಗಳಲ್ಲಿ ನಟಿಸಿರುವ ನಿಖಿಲ್ ಕುಮಾರಸ್ವಾಮಿ
ಜಾಗ್ವಾರ್, ಸೀತಾರಾಮ ಕಲ್ಯಾಣ, ರೈಡರ್ನಲ್ಲಿ ಅಭಿನಯ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಈಗ 24X7 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಅಂತ ಹೇಳಿದ್ದಾರೆ. ಈ ಮೂಲಕ ಫುಲ್ಟೈಮ್ ಪಾಲಿಟಿಕ್ಸ್ನ ಸಂದೇಶ ರವಾನಿಸಿದ್ದಾರೆ.
ಸಿನಿಮಾ ರಂಗಕ್ಕೆ ಗುಡ್ಬೈ ಹೇಳಿದ ನಿಖಿಲ್ ಕುಮಾರಸ್ವಾಮಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.. ಜೆಡಿಎಸ್ ಪಕ್ಷ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಗೆದ್ದು ಬೀಗಿದೆ. ಈ ಹಿನ್ನೆಲೆ ನಿಖಿಲ್ ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಭೇಟಿ ಕೊಟ್ಟದ್ರು, ಈ ವೇಳೆ ಮಾತನಾಡಿ, ನಾನಿನ್ನು ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ ಅಂತ ಹೇಳಿದ್ರು.
ಇದನ್ನೂ ಓದಿ:IND vs PAK .. ನಸ್ಸೌ ಸ್ಟೇಡಿಯಂ ಕಂಡೀಷನ್ ಯಾವ ತಂಡಕ್ಕೆ ಹೆಚ್ಚು ವರ ಆಗಿದೆ ಗೊತ್ತಾ..?
ಬೈ ಎಲೆಕ್ಷನ್ನಲ್ಲಿ ಚನ್ನಪಟ್ಟಣದಿಂದ ನಿಖಿಲ್ ಸ್ಪರ್ಧೆ?
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮಂಡ್ಯ ಸಂಸದರಾದ ಆಯ್ಕೆ ಬೆನ್ನೆಲ್ಲೆ ಚನ್ನಪಟ್ಟಣ ಶಾಸಕ ಸ್ಥಾನ ತೆರವಾಗಿದೆ. ಹೀಗಾಗಿ ಉಪಚುನಾವಣೆ ನಡೆಯಲಿದೆ.. ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಮಾತನಾಡುವುದು ಈಗ ಅಪ್ರಸ್ತುತ ಎಂದು ನಿಖಿಲ್ ಹೇಳಿದ್ದಾರೆ.
ಜೆಡಿಎಸ್ನ ಮುಂದಿನ ಉತ್ತರಾಧಿಕಾರಿ ನಿಖಿಲ್?
ಜೆಡಿಎಸ್ ಪಕ್ಷದ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಹಾಸನ ಪೆನ್ಡ್ರೈವ್ ಪ್ರಕರಣದಿಂದ ಹಾಸನ ಕ್ಷೇತ್ರದಲ್ಲಿ ಹಿನ್ನೆಡೆಯಾಗಿದೆ ಜೊತೆಗೆ ಪಕ್ಷಕ್ಕೂ ಮುಜಗರ ತರಿಸಿದೆ.. ಹೀಗಾಗಿ ಪಕ್ಷದ ಉತ್ತರಾಧಿಕಾರಿ ಸ್ಪರ್ಧೆಯಿಂದ ಪ್ರಜ್ವಲ್ಗೆ ಹಿನ್ನೆಡೆಯಾಗಿದ್ದು, ಜೆಡಿಎಸ್ನ ಮುಂದಿನ ಉತ್ತರಾಧಿಕಾರಿ ನಿಖಿಲ್ ಕುಮಾಸ್ವಾಮಿ ಅಂತ ಹೇಳಲಾಗುತ್ತಿದೆ. ಒಟ್ಟಾರೆ.. ಜೆಡಿಎಸ್ ಯುವನಾಯಕ ನಿಖಿಲ್ ಕುಮಾಸ್ವಾಮಿ ತನ್ನ ತಾತಾ ಹಾಗೂ ತಂದೆಯಂತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಚನ್ನಪಟ್ಟಣದಲ್ಲಿ ಸ್ಫರ್ಧಿಸಿ ಗೆದ್ದು ಶಾಸಕರಾಗ್ತಾರಾ ಅಂತ ಕಾದು ನೋಡಬೇಕಿದೆ.
ಇದನ್ನೂ ಓದಿ:Super Over ಪಂದ್ಯದಲ್ಲಿ ಪಾಕ್ ಸೋಲಿಸಿದ ಅಮೆರಿಕ.. ಇಲ್ಲಿಯೂ ಭಾರತೀಯರದ್ದೇ ದರ್ಬಾರ್..!
ಇದನ್ನೂ ಓದಿ:ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆದ BCCI.. ನಿರೀಕ್ಷೆಗಳ ತಲೆಕೆಳಗಾಗಿಸಿದ ಟೀಮ್ ಮ್ಯಾನೇಜ್ಮೆಂಟ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
‘ಲೋಕ’ ಚುನಾವಣೆ ಫಲಿತಾಂಶ ಬಳಿಕ ಮಹತ್ವದ ನಿರ್ಧಾರ
ಒಟ್ಟು ಮೂರು ಚಿತ್ರಗಳಲ್ಲಿ ನಟಿಸಿರುವ ನಿಖಿಲ್ ಕುಮಾರಸ್ವಾಮಿ
ಜಾಗ್ವಾರ್, ಸೀತಾರಾಮ ಕಲ್ಯಾಣ, ರೈಡರ್ನಲ್ಲಿ ಅಭಿನಯ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಈಗ 24X7 ರಾಜಕಾರಣಿ. ಇನ್ಮುಂದೆ ಸಿನಿಮಾ ಮಾಡೋದನ್ನು ನಾನು ಬಂದ್ ಮಾಡಿದ್ದೇನೆ ಅಂತ ಹೇಳಿದ್ದಾರೆ. ಈ ಮೂಲಕ ಫುಲ್ಟೈಮ್ ಪಾಲಿಟಿಕ್ಸ್ನ ಸಂದೇಶ ರವಾನಿಸಿದ್ದಾರೆ.
ಸಿನಿಮಾ ರಂಗಕ್ಕೆ ಗುಡ್ಬೈ ಹೇಳಿದ ನಿಖಿಲ್ ಕುಮಾರಸ್ವಾಮಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.. ಜೆಡಿಎಸ್ ಪಕ್ಷ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಗೆದ್ದು ಬೀಗಿದೆ. ಈ ಹಿನ್ನೆಲೆ ನಿಖಿಲ್ ಕುಮಾರಸ್ವಾಮಿ ಇಂದು ಮಂಡ್ಯಕ್ಕೆ ಭೇಟಿ ಕೊಟ್ಟದ್ರು, ಈ ವೇಳೆ ಮಾತನಾಡಿ, ನಾನಿನ್ನು ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ ಅಂತ ಹೇಳಿದ್ರು.
ಇದನ್ನೂ ಓದಿ:IND vs PAK .. ನಸ್ಸೌ ಸ್ಟೇಡಿಯಂ ಕಂಡೀಷನ್ ಯಾವ ತಂಡಕ್ಕೆ ಹೆಚ್ಚು ವರ ಆಗಿದೆ ಗೊತ್ತಾ..?
ಬೈ ಎಲೆಕ್ಷನ್ನಲ್ಲಿ ಚನ್ನಪಟ್ಟಣದಿಂದ ನಿಖಿಲ್ ಸ್ಪರ್ಧೆ?
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮಂಡ್ಯ ಸಂಸದರಾದ ಆಯ್ಕೆ ಬೆನ್ನೆಲ್ಲೆ ಚನ್ನಪಟ್ಟಣ ಶಾಸಕ ಸ್ಥಾನ ತೆರವಾಗಿದೆ. ಹೀಗಾಗಿ ಉಪಚುನಾವಣೆ ನಡೆಯಲಿದೆ.. ಜೆಡಿಎಸ್ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಬಗ್ಗೆ ಮಾತನಾಡುವುದು ಈಗ ಅಪ್ರಸ್ತುತ ಎಂದು ನಿಖಿಲ್ ಹೇಳಿದ್ದಾರೆ.
ಜೆಡಿಎಸ್ನ ಮುಂದಿನ ಉತ್ತರಾಧಿಕಾರಿ ನಿಖಿಲ್?
ಜೆಡಿಎಸ್ ಪಕ್ಷದ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಹಾಸನ ಪೆನ್ಡ್ರೈವ್ ಪ್ರಕರಣದಿಂದ ಹಾಸನ ಕ್ಷೇತ್ರದಲ್ಲಿ ಹಿನ್ನೆಡೆಯಾಗಿದೆ ಜೊತೆಗೆ ಪಕ್ಷಕ್ಕೂ ಮುಜಗರ ತರಿಸಿದೆ.. ಹೀಗಾಗಿ ಪಕ್ಷದ ಉತ್ತರಾಧಿಕಾರಿ ಸ್ಪರ್ಧೆಯಿಂದ ಪ್ರಜ್ವಲ್ಗೆ ಹಿನ್ನೆಡೆಯಾಗಿದ್ದು, ಜೆಡಿಎಸ್ನ ಮುಂದಿನ ಉತ್ತರಾಧಿಕಾರಿ ನಿಖಿಲ್ ಕುಮಾಸ್ವಾಮಿ ಅಂತ ಹೇಳಲಾಗುತ್ತಿದೆ. ಒಟ್ಟಾರೆ.. ಜೆಡಿಎಸ್ ಯುವನಾಯಕ ನಿಖಿಲ್ ಕುಮಾಸ್ವಾಮಿ ತನ್ನ ತಾತಾ ಹಾಗೂ ತಂದೆಯಂತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಚನ್ನಪಟ್ಟಣದಲ್ಲಿ ಸ್ಫರ್ಧಿಸಿ ಗೆದ್ದು ಶಾಸಕರಾಗ್ತಾರಾ ಅಂತ ಕಾದು ನೋಡಬೇಕಿದೆ.
ಇದನ್ನೂ ಓದಿ:Super Over ಪಂದ್ಯದಲ್ಲಿ ಪಾಕ್ ಸೋಲಿಸಿದ ಅಮೆರಿಕ.. ಇಲ್ಲಿಯೂ ಭಾರತೀಯರದ್ದೇ ದರ್ಬಾರ್..!
ಇದನ್ನೂ ಓದಿ:ಒಂದೇ ಕಲ್ಲಲ್ಲಿ 2 ಹಕ್ಕಿ ಹೊಡೆದ BCCI.. ನಿರೀಕ್ಷೆಗಳ ತಲೆಕೆಳಗಾಗಿಸಿದ ಟೀಮ್ ಮ್ಯಾನೇಜ್ಮೆಂಟ್..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್