ಟಿ20 ವಿಶ್ವಕಪ್ನಲ್ಲಿ ಭಾರತಕ್ಕೆ ಮತ್ತೊಂದು ಐತಿಹಾಸಿಕ ಗೆಲವು
ಪಾಕಿಸ್ತಾನದ ವಿರುದ್ಧ 6 ರನ್ಗಳ ಭರ್ಜರಿ ಗೆಲುವು ದಾಖಲು
ಆಡಿರುವ ಎರಡೂ ಪಂದ್ಯಗಳನ್ನು ಗೆದ್ದುಕೊಂಡ ಭಾರತ ತಂಡ
ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಅತ್ಯಂತ ಕಡಿಮೆ ಸ್ಕೋರ್ 119 ರನ್ಗಳನ್ನು ಡೆಪೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿರುವ ರೋಹಿತ್ ಪಡೆ, ಪಾಕ್ ವಿರುದ್ಧ 6 ರನ್ಗಳ ರೋಚಕ ಗೆಲುವು ಸಾಧಿಸಿದೆ. ಈ ಬಾರಿ ಭಾರತದ ಗೆಲುವಿಗೆ ಕಾರಣವಾಗಿದ್ದು ಟೀ ಇಂಡಿಯಾದ ಬೌಲರ್ಸ್.
ಟಾಸ್ ಸೋತ ಭಾರತ ಮೊದಲು ಬ್ಯಾಟ್ ಮಾಡಿತ್ತು. ರಿಷಬ್ ಪಂತ್ ಅವರ 42 ರನ್ಗಳ ಕಾಣಿಕೆಯ ಪರಿಣಾಮ ಭಾರತ 19 ಓವರ್ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 119ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಪಾಕಿಸ್ತಾನಕ್ಕೆ ಜಸ್ಪ್ರಿತ್ ಬೂಮ್ರಾ ಅವರು ದೊಡ್ಡ ಪೆಟ್ಟು ಕೊಟ್ಟರು.
ಇದನ್ನೂ ಓದಿ:ಅಮ್ಮ ಸಾಯುವಾಗ ಹೇಳಿದ ಮಾತು ಜೀವನ ಬದಲಿಸಿತು -US ಗೆಲುವಿನ ಹೀರೋಗಳ ರೋಚಕ ಜರ್ನಿ
ಬಾಬರ್ ಅಜಂ ಹಾಗೂ ರಿಜ್ವನ್ 26 ರನ್ಗಳಿಸಿ ಆಡುತ್ತಿದ್ದಾಗ ಅಜಂ ಅವರ ಪೆವಿಲಿಯನ್ಗೆ ಕಳುಹಿಸುವ ಮೂಲಕ ಜೊತೆಯಾಟಕ್ಕೆ ಬ್ರೇಕ್ ಹಾಕಿದರು. ಕ್ಯಾಪ್ಟನ್ ವಿಕೆಟ್ ಬೀಳುತ್ತಿದ್ದಂತೆಯೇ ಟೀಂ ಇಂಡಿಂಯಾ ಬೌಲಿಂಗ್ ಪಡೆಗೆ ಮತ್ತಷ್ಟು ಶಕ್ತಿ ಬಂತು. ಬೆಂಕಿ ಬೌಲಿಂಗ್ ಮಾಡಿದ ಟೀಂ ಇಂಡಿಯಾ ಬೌಲರ್ಸ್, ಪಾಕಿಸ್ತಾನವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಬೂಮ್ರಾ ಹೀರೋ..!
ಟೀಂ ಇಂಡಿಯಾಗೆ ಎಂದಿನಂತೆ ಬೂಮ್ರಾ ಹೀರೋ ಆದರು. ತಮ್ಮ ಕೋಟಾದ ನಾಲ್ಕು ಓವರ್ ಎಸೆದ ಬೂಮ್ರಾ ಕೇವಲ 3.5 ಎಕನಾಮಿಕ್ನೊಂದಿಗೆ 14 ರನ್ಗಳನ್ನು ಮಾತ್ರ ನೀಡಿದರು. ಮಾತ್ರವಲ್ಲ ಪಾಕ್ನ ಪ್ರಮುಖ ವಿಕೆಟ್ಗಳಾದ ಬಾಬರ್ ಅಜಂ, ರಿಜ್ವಾನ್ ಹಾಗೂ ಇಫ್ತಿಕಾರ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ:ಕೇವಲ 5 ದಿನದಲ್ಲಿ 850 ಕೋಟಿ ರೂ ಗಳಿಕೆ..! CM ಆಗುವ ಮೊದಲೇ ಚಂದ್ರಬಾಬು ನಾಯ್ಡು ಕುಟುಂಬ ಶ್ರೀಮಂತ..!
ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ನಾಲ್ಕು ಓವರ್ಗಳನ್ನು ಎಸೆದು 2 ವಿಕೆಟ್ ಪಡೆದು ಕೇವಲ 24 ರನ್ಗಳನ್ನು ಮಾತ್ರ ನೀಡಿದರು. ಅಷ್ಟೇ ಅಲ್ಲ ಅಕ್ಸರ್ ಪಟೇಲ್ 2 ಓವರ್ ಎಸೆದು 11 ರನ್ ನೀಡಿ ಒಂದು ವಿಕೆಟ್ ಪಡೆದರು. ಪಾಕ್ನ ಬ್ಯಾಟಿಂಗ್ ಶಕ್ತಿ ಉಸ್ಮಾನ್ ಖಾನ್ರ ವಿಕೆಟ್ ಪಡೆದು ಪಾಕ್ನ ಮಗ್ಗಲು ಮುರಿದರು.
ನಿನ್ನೆಯ ಪಂದ್ಯದಲ್ಲಿ ಸಿರಾಜ್ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು, 4 ಓವರ್ಗಳಲ್ಲಿ 19 ರನ್ ನೀಡಿದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಲಿಲ್ಲ. ರವೀಂದ್ರ ಜಡೇಜಾ 2 ಓವರ್ ಮಾಡಿ 10 ರನ್ ನೀಡಿದ್ರೆ, ಅರ್ಷ್ದೀಪ್ ಸಿಂಗ್ ಸ್ವಲ್ಪ ದುಬಾರಿಯಾದರೂ ಒಂದು ವಿಕೆಟ್ ಪಡೆದುಕೊಂಡರು. 31 ರನ್ ನೀಡಿ ಒಂದು ವಿಕೆಟ್ ಪಡೆದುಕೊಂಡರು. ಬೂಮ್ರಾ, ಸಿರಾಜ್ ಹಾಗೂ ಪಾಂಡ್ಯ ಅವರ ಭಯಂಕರ ಬೌಲಿಂಗ್ನಿಂದಾಗಿ ಪಾಕಿಸ್ತಾನದ ವಿರುದ್ಧ ಭಾರತ ಮತ್ತೆ ಗೆದ್ದು ಬೀಗಿದೆ.
ಇದನ್ನೂ ಓದಿ:ಜೆಡಿಎಸ್ಗೆ ಸಿಕ್ಕೇಬಿಟ್ರು ಮುಂದಿನ ಉತ್ತರಾಧಿಕಾರಿ..? ಚುನಾವಣಾ ಫಲಿತಾಂಶ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಟಿ20 ವಿಶ್ವಕಪ್ನಲ್ಲಿ ಭಾರತಕ್ಕೆ ಮತ್ತೊಂದು ಐತಿಹಾಸಿಕ ಗೆಲವು
ಪಾಕಿಸ್ತಾನದ ವಿರುದ್ಧ 6 ರನ್ಗಳ ಭರ್ಜರಿ ಗೆಲುವು ದಾಖಲು
ಆಡಿರುವ ಎರಡೂ ಪಂದ್ಯಗಳನ್ನು ಗೆದ್ದುಕೊಂಡ ಭಾರತ ತಂಡ
ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಐತಿಹಾಸಿಕ ಗೆಲುವು ಸಾಧಿಸಿದೆ. ಅತ್ಯಂತ ಕಡಿಮೆ ಸ್ಕೋರ್ 119 ರನ್ಗಳನ್ನು ಡೆಪೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿರುವ ರೋಹಿತ್ ಪಡೆ, ಪಾಕ್ ವಿರುದ್ಧ 6 ರನ್ಗಳ ರೋಚಕ ಗೆಲುವು ಸಾಧಿಸಿದೆ. ಈ ಬಾರಿ ಭಾರತದ ಗೆಲುವಿಗೆ ಕಾರಣವಾಗಿದ್ದು ಟೀ ಇಂಡಿಯಾದ ಬೌಲರ್ಸ್.
ಟಾಸ್ ಸೋತ ಭಾರತ ಮೊದಲು ಬ್ಯಾಟ್ ಮಾಡಿತ್ತು. ರಿಷಬ್ ಪಂತ್ ಅವರ 42 ರನ್ಗಳ ಕಾಣಿಕೆಯ ಪರಿಣಾಮ ಭಾರತ 19 ಓವರ್ನಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 119ರನ್ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಪಾಕಿಸ್ತಾನಕ್ಕೆ ಜಸ್ಪ್ರಿತ್ ಬೂಮ್ರಾ ಅವರು ದೊಡ್ಡ ಪೆಟ್ಟು ಕೊಟ್ಟರು.
ಇದನ್ನೂ ಓದಿ:ಅಮ್ಮ ಸಾಯುವಾಗ ಹೇಳಿದ ಮಾತು ಜೀವನ ಬದಲಿಸಿತು -US ಗೆಲುವಿನ ಹೀರೋಗಳ ರೋಚಕ ಜರ್ನಿ
ಬಾಬರ್ ಅಜಂ ಹಾಗೂ ರಿಜ್ವನ್ 26 ರನ್ಗಳಿಸಿ ಆಡುತ್ತಿದ್ದಾಗ ಅಜಂ ಅವರ ಪೆವಿಲಿಯನ್ಗೆ ಕಳುಹಿಸುವ ಮೂಲಕ ಜೊತೆಯಾಟಕ್ಕೆ ಬ್ರೇಕ್ ಹಾಕಿದರು. ಕ್ಯಾಪ್ಟನ್ ವಿಕೆಟ್ ಬೀಳುತ್ತಿದ್ದಂತೆಯೇ ಟೀಂ ಇಂಡಿಂಯಾ ಬೌಲಿಂಗ್ ಪಡೆಗೆ ಮತ್ತಷ್ಟು ಶಕ್ತಿ ಬಂತು. ಬೆಂಕಿ ಬೌಲಿಂಗ್ ಮಾಡಿದ ಟೀಂ ಇಂಡಿಯಾ ಬೌಲರ್ಸ್, ಪಾಕಿಸ್ತಾನವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಬೂಮ್ರಾ ಹೀರೋ..!
ಟೀಂ ಇಂಡಿಯಾಗೆ ಎಂದಿನಂತೆ ಬೂಮ್ರಾ ಹೀರೋ ಆದರು. ತಮ್ಮ ಕೋಟಾದ ನಾಲ್ಕು ಓವರ್ ಎಸೆದ ಬೂಮ್ರಾ ಕೇವಲ 3.5 ಎಕನಾಮಿಕ್ನೊಂದಿಗೆ 14 ರನ್ಗಳನ್ನು ಮಾತ್ರ ನೀಡಿದರು. ಮಾತ್ರವಲ್ಲ ಪಾಕ್ನ ಪ್ರಮುಖ ವಿಕೆಟ್ಗಳಾದ ಬಾಬರ್ ಅಜಂ, ರಿಜ್ವಾನ್ ಹಾಗೂ ಇಫ್ತಿಕಾರ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ:ಕೇವಲ 5 ದಿನದಲ್ಲಿ 850 ಕೋಟಿ ರೂ ಗಳಿಕೆ..! CM ಆಗುವ ಮೊದಲೇ ಚಂದ್ರಬಾಬು ನಾಯ್ಡು ಕುಟುಂಬ ಶ್ರೀಮಂತ..!
ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು. ನಾಲ್ಕು ಓವರ್ಗಳನ್ನು ಎಸೆದು 2 ವಿಕೆಟ್ ಪಡೆದು ಕೇವಲ 24 ರನ್ಗಳನ್ನು ಮಾತ್ರ ನೀಡಿದರು. ಅಷ್ಟೇ ಅಲ್ಲ ಅಕ್ಸರ್ ಪಟೇಲ್ 2 ಓವರ್ ಎಸೆದು 11 ರನ್ ನೀಡಿ ಒಂದು ವಿಕೆಟ್ ಪಡೆದರು. ಪಾಕ್ನ ಬ್ಯಾಟಿಂಗ್ ಶಕ್ತಿ ಉಸ್ಮಾನ್ ಖಾನ್ರ ವಿಕೆಟ್ ಪಡೆದು ಪಾಕ್ನ ಮಗ್ಗಲು ಮುರಿದರು.
ನಿನ್ನೆಯ ಪಂದ್ಯದಲ್ಲಿ ಸಿರಾಜ್ ಕೂಡ ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದರು, 4 ಓವರ್ಗಳಲ್ಲಿ 19 ರನ್ ನೀಡಿದರು. ಆದರೆ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಲಿಲ್ಲ. ರವೀಂದ್ರ ಜಡೇಜಾ 2 ಓವರ್ ಮಾಡಿ 10 ರನ್ ನೀಡಿದ್ರೆ, ಅರ್ಷ್ದೀಪ್ ಸಿಂಗ್ ಸ್ವಲ್ಪ ದುಬಾರಿಯಾದರೂ ಒಂದು ವಿಕೆಟ್ ಪಡೆದುಕೊಂಡರು. 31 ರನ್ ನೀಡಿ ಒಂದು ವಿಕೆಟ್ ಪಡೆದುಕೊಂಡರು. ಬೂಮ್ರಾ, ಸಿರಾಜ್ ಹಾಗೂ ಪಾಂಡ್ಯ ಅವರ ಭಯಂಕರ ಬೌಲಿಂಗ್ನಿಂದಾಗಿ ಪಾಕಿಸ್ತಾನದ ವಿರುದ್ಧ ಭಾರತ ಮತ್ತೆ ಗೆದ್ದು ಬೀಗಿದೆ.
ಇದನ್ನೂ ಓದಿ:ಜೆಡಿಎಸ್ಗೆ ಸಿಕ್ಕೇಬಿಟ್ರು ಮುಂದಿನ ಉತ್ತರಾಧಿಕಾರಿ..? ಚುನಾವಣಾ ಫಲಿತಾಂಶ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್