newsfirstkannada.com

‘ರೌಡಿ ಬಾಸ್‌ನಿಂದ ಖ್ಯಾತ ಸಂಗೀತ ನಿರ್ದೇಶಕನಿಗೆ ಹಾರ್ಟ್ ಅಟ್ಯಾಕ್‌’- ಪ್ರಶಾಂತ್​ ಸಂಬರಗಿ ಹೊಸ ಬಾಂಬ್‌!

Share :

Published June 15, 2024 at 9:55pm

Update June 15, 2024 at 9:57pm

    ಒಂದಲ್ಲಾ ಒಂದು ಹೇಳಿಕೆಯ ಮೂಲಕ ಸುದ್ದಿಯಲ್ಲಿ ಇರುತ್ತಾರೆ ಮಾಜಿ ಸ್ಪರ್ಧಿ

    ಕನ್ನಡದ ಬಿಗ್​ ಶೋ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟಿದ್ದ ಪ್ರಶಾಂತ್​ ಸಂಬರಗಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಪ್ರಶಾಂತ್​ ಸಂಬರಗಿ ಪೋಸ್ಟ್​

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಮಾಜಿ ಸ್ಪರ್ಧಿ ಪ್ರಶಾಂತ್​ ಸಂಬರಗಿ ವಿವಾದಾತ್ಮಕ ಹೇಳಿಕೆ ನೀಡಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಮೊನ್ನೆಯಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಗ್ಗೆ ಮಾತಾಡಿ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: ದರ್ಶನ್​ ವಿರುದ್ಧ ಸ್ಟೇಟಸ್​ ಹಾಕಿದ್ದಕ್ಕೆ ನಿನ್ನನ್ನು ಜೀವಂತ ಸುಡುತ್ತೇವೆ ಎಂದ ಅಭಿಮಾನಿ! ಮುಂದೇನಾಯ್ತು ಗೊತ್ತಾ?

ಆದರೆ ಇದೀಗ ಸ್ಯಾಂಡಲ್​ವುಡ್​ ನಟ ದರ್ಶನ್​ ಅವರ ಬಗ್ಗೆ ಫೇಸ್​ಬುಕ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು ಟಿವಿ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರೋ ನನ್ನ ಸ್ನೇಹಿತನಿಗೆ 2 ವರ್ಷದ ಹಿಂದೆ ಹಾರ್ಟ್ ಅಟ್ಯಾಕ್ ಆಗಿತ್ತು. ಇದಕ್ಕೆ ಮುಖ್ಯ ಕಾರಣ ಎಂದರೆ ರೌಡಿ ಬಾಸ್. ಅದೇ ಆರು ಅಡಿ ಎತ್ತರದ ಮೃಗದಿಂದ ಬೆದರಿಕೆಯ ಕರೆ ಮತ್ತು ಮಾನಸಿಕ ಹಿಂಸೆ ಅಂತಾ ಬರೆದುಕೊಂಡಿದ್ದಾರೆ.

ಸದ್ಯ ಇದೇ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಈ ಪೋಸ್ಟ್​ ನೋಡಿದ ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಈಗ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಪವಿತ್ರಾ ಗೌಡ A1, ದರ್ಶನ್ A2 ಆರೋಪಿಗಳಾಗಿದ್ದಾರೆ. ಇನ್ನುಳಿದ 20ಕ್ಕೂ ಹೆಚ್ಚು ಆರೋಪಿಗಳನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯವು ಇನ್ನೂ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ರೌಡಿ ಬಾಸ್‌ನಿಂದ ಖ್ಯಾತ ಸಂಗೀತ ನಿರ್ದೇಶಕನಿಗೆ ಹಾರ್ಟ್ ಅಟ್ಯಾಕ್‌’- ಪ್ರಶಾಂತ್​ ಸಂಬರಗಿ ಹೊಸ ಬಾಂಬ್‌!

https://newsfirstlive.com/wp-content/uploads/2024/06/prashanth-sambaragi.jpg

    ಒಂದಲ್ಲಾ ಒಂದು ಹೇಳಿಕೆಯ ಮೂಲಕ ಸುದ್ದಿಯಲ್ಲಿ ಇರುತ್ತಾರೆ ಮಾಜಿ ಸ್ಪರ್ಧಿ

    ಕನ್ನಡದ ಬಿಗ್​ ಶೋ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟಿದ್ದ ಪ್ರಶಾಂತ್​ ಸಂಬರಗಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಪ್ರಶಾಂತ್​ ಸಂಬರಗಿ ಪೋಸ್ಟ್​

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಮಾಜಿ ಸ್ಪರ್ಧಿ ಪ್ರಶಾಂತ್​ ಸಂಬರಗಿ ವಿವಾದಾತ್ಮಕ ಹೇಳಿಕೆ ನೀಡಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಮೊನ್ನೆಯಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಗ್ಗೆ ಮಾತಾಡಿ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದನ್ನೂ ಓದಿ: ದರ್ಶನ್​ ವಿರುದ್ಧ ಸ್ಟೇಟಸ್​ ಹಾಕಿದ್ದಕ್ಕೆ ನಿನ್ನನ್ನು ಜೀವಂತ ಸುಡುತ್ತೇವೆ ಎಂದ ಅಭಿಮಾನಿ! ಮುಂದೇನಾಯ್ತು ಗೊತ್ತಾ?

ಆದರೆ ಇದೀಗ ಸ್ಯಾಂಡಲ್​ವುಡ್​ ನಟ ದರ್ಶನ್​ ಅವರ ಬಗ್ಗೆ ಫೇಸ್​ಬುಕ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು ಟಿವಿ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರೋ ನನ್ನ ಸ್ನೇಹಿತನಿಗೆ 2 ವರ್ಷದ ಹಿಂದೆ ಹಾರ್ಟ್ ಅಟ್ಯಾಕ್ ಆಗಿತ್ತು. ಇದಕ್ಕೆ ಮುಖ್ಯ ಕಾರಣ ಎಂದರೆ ರೌಡಿ ಬಾಸ್. ಅದೇ ಆರು ಅಡಿ ಎತ್ತರದ ಮೃಗದಿಂದ ಬೆದರಿಕೆಯ ಕರೆ ಮತ್ತು ಮಾನಸಿಕ ಹಿಂಸೆ ಅಂತಾ ಬರೆದುಕೊಂಡಿದ್ದಾರೆ.

ಸದ್ಯ ಇದೇ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಈ ಪೋಸ್ಟ್​ ನೋಡಿದ ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಈಗ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಪವಿತ್ರಾ ಗೌಡ A1, ದರ್ಶನ್ A2 ಆರೋಪಿಗಳಾಗಿದ್ದಾರೆ. ಇನ್ನುಳಿದ 20ಕ್ಕೂ ಹೆಚ್ಚು ಆರೋಪಿಗಳನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯವು ಇನ್ನೂ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More