ಕೊನೆ ಕ್ಷಣದಲ್ಲಿ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ
ಹೊಸ ಪರೀಕ್ಷೆಯ ದಿನಾಂಕಗಳನ್ನು ಪ್ರಕಟ ಮಾಡುವುದು ಯಾವಾಗ?
ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ, ಅಭ್ಯರ್ಥಿಗಳನ್ನು ಕಂಗೆಡಿಸಿದ ಅಕ್ರಮ
ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್ನಲ್ಲೂ ಗೋಲ್ಮಾಲ್ ನಡೆದೋಯ್ತು. ಬಳಿಕ ನೆಟ್ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಮುಂದೂಡಿಕೆ ಮಾಡಿ ಆದೇಶಿಸಿದೆ.
ಇದು ಲೀಕಾಸುರರ ಲೋಕ. ಇದು ಅಕ್ರಮಗಳ ಜಮಾನ. ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗ್ತಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ.
ಕೊನೇ ಕ್ಷಣದಲ್ಲಿ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ
ನೀಟ್-ಯುಜಿ ಹಾಗೂ ಯಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಅಂತ ತಿಳಿಸಿದೆ.
ನೀಟ್-ನೆಟ್ ಪರೀಕ್ಷೆಯಲ್ಲಿ ಅಕ್ರಮಗಳ ಬೆನ್ನಲ್ಲೇ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ
ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ವಜಾ
ನೀಟ್-ನೆಟ್ ಪರೀಕ್ಷೆಗಳಲ್ಲಿ ಅಕ್ರಮಗಳ ಬೆನ್ನಲ್ಲೇ ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ವಜಾಗೊಳಿಸಿ ಕೇಂದ್ರ ಆದೇಶಿಸಿದೆ. ಸುಭೋದ್ ಕುಮಾರ್ ಜಾಗಕ್ಕೆ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಂಪಾದಕರಾಗಿರುವ ಪ್ರದೀಪ್ ಸಿಂಗ್ ಖರೋಲಾ ನೇಮಿಸಿದ್ದು ಹೆಚ್ಚುವರಿಯಾಗಿ ಎನ್ಟಿಎ ಮಹಾನಿರ್ದೇಶಕ ಜವಾಬ್ದಾರಿ ನೀಡಲಾಗಿದೆ. ಖರೋಲ ಈ ಹಿಂದೆ ನಮ್ಮ ಮೆಟ್ರೋದ ಬಿಎಂಆರ್ಸಿಎಲ್ ಸಂಸ್ಥೆಯ ಮುಖ್ಯಸ್ಥರೂ ಆಗಿದ್ದರು.
ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮ ತಡೆಗಟ್ಟಲು ಪಬ್ಲಿಕ್ ಎಕ್ಸಾಮಿನೇಷನ್ ಅಕ್ರಮ ತಡೆ ಕಾಯಿದೆ-2024 ಅನ್ನು ದೇಶಾದ್ಯಂತ ಜಾರಿಗೊಳಿಸಿದೆ.
ಇದನ್ನೂ ಓದಿ: ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ ಸೋನಾಕ್ಷಿ ಸಿನ್ಹಾ? ಮದುವೆ ದಿನವೇ ದೊಡ್ಡ ವಿವಾದ; ಏನದು?
ಹೊಸ ಕಾಯ್ದೆ ಏನು?
ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕಾಯ್ದೆ ಜಾರಿಗೊಳಿಸಿದೆ. ಈಗಲಾದ್ರೂ ಪರೀಕ್ಷಾ ಅಕ್ರಮಗಳು ಕಡಿಮೆ ಆಗುತ್ತಾ ಅಂತ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕೊನೆ ಕ್ಷಣದಲ್ಲಿ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ
ಹೊಸ ಪರೀಕ್ಷೆಯ ದಿನಾಂಕಗಳನ್ನು ಪ್ರಕಟ ಮಾಡುವುದು ಯಾವಾಗ?
ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ, ಅಭ್ಯರ್ಥಿಗಳನ್ನು ಕಂಗೆಡಿಸಿದ ಅಕ್ರಮ
ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್ನಲ್ಲೂ ಗೋಲ್ಮಾಲ್ ನಡೆದೋಯ್ತು. ಬಳಿಕ ನೆಟ್ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಮುಂದೂಡಿಕೆ ಮಾಡಿ ಆದೇಶಿಸಿದೆ.
ಇದು ಲೀಕಾಸುರರ ಲೋಕ. ಇದು ಅಕ್ರಮಗಳ ಜಮಾನ. ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗ್ತಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ.
ಕೊನೇ ಕ್ಷಣದಲ್ಲಿ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ
ನೀಟ್-ಯುಜಿ ಹಾಗೂ ಯಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಅಂತ ತಿಳಿಸಿದೆ.
ನೀಟ್-ನೆಟ್ ಪರೀಕ್ಷೆಯಲ್ಲಿ ಅಕ್ರಮಗಳ ಬೆನ್ನಲ್ಲೇ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ
ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ವಜಾ
ನೀಟ್-ನೆಟ್ ಪರೀಕ್ಷೆಗಳಲ್ಲಿ ಅಕ್ರಮಗಳ ಬೆನ್ನಲ್ಲೇ ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ವಜಾಗೊಳಿಸಿ ಕೇಂದ್ರ ಆದೇಶಿಸಿದೆ. ಸುಭೋದ್ ಕುಮಾರ್ ಜಾಗಕ್ಕೆ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ಸಂಪಾದಕರಾಗಿರುವ ಪ್ರದೀಪ್ ಸಿಂಗ್ ಖರೋಲಾ ನೇಮಿಸಿದ್ದು ಹೆಚ್ಚುವರಿಯಾಗಿ ಎನ್ಟಿಎ ಮಹಾನಿರ್ದೇಶಕ ಜವಾಬ್ದಾರಿ ನೀಡಲಾಗಿದೆ. ಖರೋಲ ಈ ಹಿಂದೆ ನಮ್ಮ ಮೆಟ್ರೋದ ಬಿಎಂಆರ್ಸಿಎಲ್ ಸಂಸ್ಥೆಯ ಮುಖ್ಯಸ್ಥರೂ ಆಗಿದ್ದರು.
ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಅಕ್ರಮ ತಡೆಗಟ್ಟಲು ಪಬ್ಲಿಕ್ ಎಕ್ಸಾಮಿನೇಷನ್ ಅಕ್ರಮ ತಡೆ ಕಾಯಿದೆ-2024 ಅನ್ನು ದೇಶಾದ್ಯಂತ ಜಾರಿಗೊಳಿಸಿದೆ.
ಇದನ್ನೂ ಓದಿ: ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ ಸೋನಾಕ್ಷಿ ಸಿನ್ಹಾ? ಮದುವೆ ದಿನವೇ ದೊಡ್ಡ ವಿವಾದ; ಏನದು?
ಹೊಸ ಕಾಯ್ದೆ ಏನು?
ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕಾಯ್ದೆ ಜಾರಿಗೊಳಿಸಿದೆ. ಈಗಲಾದ್ರೂ ಪರೀಕ್ಷಾ ಅಕ್ರಮಗಳು ಕಡಿಮೆ ಆಗುತ್ತಾ ಅಂತ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ