newsfirstkannada.com

ಜೈಲಲ್ಲಿ ದರ್ಶನ್​ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ..? ಅಚ್ಚರಿಯ ವಿಷಯ ಬಹಿರಂಗ..!

Share :

Published June 25, 2024 at 7:57am

    ನಾ ನೋಡಿ ಕೊಳ್ತೀನಿ.. ನಾ ನೋಡಿ ಕೊಳ್ತೀನಿ ಅಂತಾ ರೇಸ್!

    ದರ್ಶನ್​ಗೆ ಅತಿಥ್ಯ ನೀಡಲು ಮುಂದಾಗಿರುವ ರೌಡಿಗಳು ಯಾರು?

    2011ರಲ್ಲಿ ದರ್ಶನ್​ಗೆ ಜೈಲಲ್ಲಿ ಅತಿಥ್ಯ ನೀಡಿದ್ದ ಸೈಕಲ್ ರವಿ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಗಳಂತೆ ದಿನ ಕಳೆಯುತ್ತಿರುವ ದರ್ಶನ್ ಊಟ, ತಿಂಡಿ ಹಾಗೂ ನಿದ್ರೆಯನ್ನು ಸರಿಯಾಗಿ ಮಾಡದೇ ಚಿಂತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಜೈಲಲ್ಲಿ ದರ್ಶನ್​​ಗೆ ಅತಿಥ್ಯ ನೀಡಲು ರೌಡಿಗಳ ಪಡೆ ನಾ ಮುಂದು ತಾ ಮುಂದು ಎಂದು ಬಂದಿದೆ ಅಂತಾ ಹೇಳಲಾಗುತ್ತಿದೆ. ದರ್ಶನ್​ಗೆ ಅತಿಥ್ಯ ನೀಡಲು ಮುಂದಾಗಿರುವ ರೌಡಿಗಳು ಯಾರು ಅನ್ನೋದು ಕೂಡ ಇಂಟ್ರೆಸ್ಟಿಂಗ್ ಆಗಿದೆ.

ಇದನ್ನೂ ಓದಿ:ಬೀದರ್​​ನಲ್ಲಿ ಮಧ್ಯರಾತ್ರಿ ಹರಿದ ನೆತ್ತರು.. ಬಾಲ್ಯದ ಗೆಳೆಯನ ಕತ್ತು ಸೀಳಿ ಬರ್ಬರ ಕೊಲೆ..

ಕುಖ್ಯಾತ ವಿಲ್ಸನ್ ಗಾರ್ಡನ್ ನಾಗ ಹಾಗೂ ಸೈಕಲ್ ರವಿ ಕಡೆಯಿಂದ ದರ್ಶನ್ ನೋಡಿಕೊಳ್ಳಲು ಪೈಪೋಟಿ ಬಿದ್ದಿದ್ಯಂತೆ. ಪರಪ್ಪನ ಆಗ್ರಹಾರ ಜೈಲಲ್ಲೇ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ಆದರೆ ಸೈಕಲ್ ರವಿ ಜೈಲಲ್ಲಿ ಇಲ್ಲ. ಆದರೂ ದರ್ಶನ್ ಜೈಲಲ್ಲಿ ನೋಡಿಕೊಳ್ಳಲು ರವಿ ಹುಡುಗರು ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕಾಗಿ ರವಿಯ ಬಂಟನೊಬ್ಬ ಹಳೆ ಕೇಸಲ್ಲಿ ಜೈಲು ಸೇರೋ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2011ರಲ್ಲಿ ದರ್ಶನ್​​ ಜೈಲಲ್ಲಿದ್ದಾಗ ಸೈಕಲ್ ರವಿ ಅತಿಥ್ಯ ನೀಡಿದ್ದ ಎನ್ನಲಾಗಿದೆ. ಈಗಲೂ ತಾನೇ ನೀಡುತ್ತೇವೆ ಎಂದು ಸೈಕಲ್ ಗ್ಯಾಂಗ್ ಮುಂದಾಗಿದೆ ಎಂದು ಹೇಳಲಾಗಿದೆ. ಆದರೆ ವಿಲ್ಸನ್ ಗಾರ್ಡನ್ ನಾಗ ಜೈಲಲ್ಲೇ ಇದ್ದು ಅವರು ಕೂಡ ದರ್ಶನ್​​ಗೆ ಅತಿಥ್ಯ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸೋತು ಸುಣ್ಣವಾದ ವಿಶ್ವಚಾಂಪಿಯನ್.. ಬಾಂಗ್ಲಾದೇಶದ ಕೈಯಲ್ಲಿ ಆಸ್ಟ್ರೇಲಿಯಾ ಭವಿಷ್ಯ​..!

ಇದನ್ನೂ ಓದಿ:ರಕ್ತ ಚರಿತ್ರೆಯ ಪಟ್ಟಣಗೆರೆ ಶೆಡ್​​​​​​​​​ನಲ್ಲಿ ಮತ್ತೊಂದು ಅನುಮಾನ.. RTO ಅಸ್ತ್ರ ಪ್ರಯೋಗಿಸಿದ ಪೊಲೀಸರು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜೈಲಲ್ಲಿ ದರ್ಶನ್​ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ..? ಅಚ್ಚರಿಯ ವಿಷಯ ಬಹಿರಂಗ..!

https://newsfirstlive.com/wp-content/uploads/2024/06/DARSHAN-JAIL.jpg

    ನಾ ನೋಡಿ ಕೊಳ್ತೀನಿ.. ನಾ ನೋಡಿ ಕೊಳ್ತೀನಿ ಅಂತಾ ರೇಸ್!

    ದರ್ಶನ್​ಗೆ ಅತಿಥ್ಯ ನೀಡಲು ಮುಂದಾಗಿರುವ ರೌಡಿಗಳು ಯಾರು?

    2011ರಲ್ಲಿ ದರ್ಶನ್​ಗೆ ಜೈಲಲ್ಲಿ ಅತಿಥ್ಯ ನೀಡಿದ್ದ ಸೈಕಲ್ ರವಿ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸಾಮಾನ್ಯ ಕೈದಿಗಳಂತೆ ದಿನ ಕಳೆಯುತ್ತಿರುವ ದರ್ಶನ್ ಊಟ, ತಿಂಡಿ ಹಾಗೂ ನಿದ್ರೆಯನ್ನು ಸರಿಯಾಗಿ ಮಾಡದೇ ಚಿಂತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಜೈಲಲ್ಲಿ ದರ್ಶನ್​​ಗೆ ಅತಿಥ್ಯ ನೀಡಲು ರೌಡಿಗಳ ಪಡೆ ನಾ ಮುಂದು ತಾ ಮುಂದು ಎಂದು ಬಂದಿದೆ ಅಂತಾ ಹೇಳಲಾಗುತ್ತಿದೆ. ದರ್ಶನ್​ಗೆ ಅತಿಥ್ಯ ನೀಡಲು ಮುಂದಾಗಿರುವ ರೌಡಿಗಳು ಯಾರು ಅನ್ನೋದು ಕೂಡ ಇಂಟ್ರೆಸ್ಟಿಂಗ್ ಆಗಿದೆ.

ಇದನ್ನೂ ಓದಿ:ಬೀದರ್​​ನಲ್ಲಿ ಮಧ್ಯರಾತ್ರಿ ಹರಿದ ನೆತ್ತರು.. ಬಾಲ್ಯದ ಗೆಳೆಯನ ಕತ್ತು ಸೀಳಿ ಬರ್ಬರ ಕೊಲೆ..

ಕುಖ್ಯಾತ ವಿಲ್ಸನ್ ಗಾರ್ಡನ್ ನಾಗ ಹಾಗೂ ಸೈಕಲ್ ರವಿ ಕಡೆಯಿಂದ ದರ್ಶನ್ ನೋಡಿಕೊಳ್ಳಲು ಪೈಪೋಟಿ ಬಿದ್ದಿದ್ಯಂತೆ. ಪರಪ್ಪನ ಆಗ್ರಹಾರ ಜೈಲಲ್ಲೇ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ಆದರೆ ಸೈಕಲ್ ರವಿ ಜೈಲಲ್ಲಿ ಇಲ್ಲ. ಆದರೂ ದರ್ಶನ್ ಜೈಲಲ್ಲಿ ನೋಡಿಕೊಳ್ಳಲು ರವಿ ಹುಡುಗರು ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕಾಗಿ ರವಿಯ ಬಂಟನೊಬ್ಬ ಹಳೆ ಕೇಸಲ್ಲಿ ಜೈಲು ಸೇರೋ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2011ರಲ್ಲಿ ದರ್ಶನ್​​ ಜೈಲಲ್ಲಿದ್ದಾಗ ಸೈಕಲ್ ರವಿ ಅತಿಥ್ಯ ನೀಡಿದ್ದ ಎನ್ನಲಾಗಿದೆ. ಈಗಲೂ ತಾನೇ ನೀಡುತ್ತೇವೆ ಎಂದು ಸೈಕಲ್ ಗ್ಯಾಂಗ್ ಮುಂದಾಗಿದೆ ಎಂದು ಹೇಳಲಾಗಿದೆ. ಆದರೆ ವಿಲ್ಸನ್ ಗಾರ್ಡನ್ ನಾಗ ಜೈಲಲ್ಲೇ ಇದ್ದು ಅವರು ಕೂಡ ದರ್ಶನ್​​ಗೆ ಅತಿಥ್ಯ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸೋತು ಸುಣ್ಣವಾದ ವಿಶ್ವಚಾಂಪಿಯನ್.. ಬಾಂಗ್ಲಾದೇಶದ ಕೈಯಲ್ಲಿ ಆಸ್ಟ್ರೇಲಿಯಾ ಭವಿಷ್ಯ​..!

ಇದನ್ನೂ ಓದಿ:ರಕ್ತ ಚರಿತ್ರೆಯ ಪಟ್ಟಣಗೆರೆ ಶೆಡ್​​​​​​​​​ನಲ್ಲಿ ಮತ್ತೊಂದು ಅನುಮಾನ.. RTO ಅಸ್ತ್ರ ಪ್ರಯೋಗಿಸಿದ ಪೊಲೀಸರು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More