ಬಾರ್ನಲ್ಲಿ ಗುರಾಯಿಸಿದ್ದಕ್ಕೆ ಬಿಯರ್ ಬಾಟಲ್ಸ್ನಿಂದ ಹೊಡೆದ್ರು
ಕೆಲಸ ಮಾಡಿ ಸಂಜೆ ವೇಳೆ ಕುಡಿಯಲು ಬಂದ ವ್ಯಕ್ತಿ ಮೇಲೆ ಹಲ್ಲೆ
ಮದ್ಯದ ಬಾಟಲಿಗಳಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು: ಬಾರ್ನಲ್ಲಿ ಕುಳಿತು ಮದ್ಯಪಾನ ಮಾಡುವಾಗ ಗುರಾಯಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬನ ತಲೆಗೆ ಬಿಯರ್ ಬಾಟಲ್ಗಳಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನೈಟ್ ಸಫಾರಿ ಬಾರ್ನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: LK Advani : ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಪುರಸ್ಕೃತ ಅಡ್ವಾಣಿ ತಡರಾತ್ರಿ ಆಸ್ಪತ್ರೆಗೆ ದಾಖಲು
ಹರ್ಷವರ್ಧನ್ (35) ಕೊಲೆಯಾದ ವ್ಯಕ್ತಿ. ಸಂಜೆ ಸಮಯದಲ್ಲಿ ಮದ್ಯಪಾನ ಮಾಡಲೆಂದು ಬಾರ್ಗೆ ಹೋಗಿದ್ದಾನೆ. ಇದೇ ವೇಳೆ ಪಕ್ಕದ ಟೇಬಲ್ನಲ್ಲಿ ಕುಳಿತು ಮತ್ತಿಬ್ಬರು ಮದ್ಯಪಾನ ಮಾಡುತ್ತಿದ್ದರು. ಆಗ ಒಬ್ಬರನ್ನ ಒಬ್ಬರು ನೋಡಿದ್ದಾರೆ. ಇಷ್ಟಕ್ಕೆ ಯಾಕೋ ಗುರಾಯಿಸುತ್ತಿದ್ದೀಯಾ ಎಂದು ಗಲಾಟೆ ಮಾಡಿದ್ದಾರೆ.
ಬಳಿಕ ಮದ್ಯದ ಬಾಟಲ್ಸ್ ಹಾಗೂ ಬಿಯರ್ ಬಾಟಲ್ಗಳಿಂದ ವ್ಯಕ್ತಿ ತಲೆಗೆ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಾರ್ನಲ್ಲಿ ಗುರಾಯಿಸಿದ್ದಕ್ಕೆ ಬಿಯರ್ ಬಾಟಲ್ಸ್ನಿಂದ ಹೊಡೆದ್ರು
ಕೆಲಸ ಮಾಡಿ ಸಂಜೆ ವೇಳೆ ಕುಡಿಯಲು ಬಂದ ವ್ಯಕ್ತಿ ಮೇಲೆ ಹಲ್ಲೆ
ಮದ್ಯದ ಬಾಟಲಿಗಳಿಂದ ಹೊಡೆದು ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು: ಬಾರ್ನಲ್ಲಿ ಕುಳಿತು ಮದ್ಯಪಾನ ಮಾಡುವಾಗ ಗುರಾಯಿಸುತ್ತಿದ್ದಾನೆಂದು ವ್ಯಕ್ತಿಯೊಬ್ಬನ ತಲೆಗೆ ಬಿಯರ್ ಬಾಟಲ್ಗಳಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ನೈಟ್ ಸಫಾರಿ ಬಾರ್ನಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: LK Advani : ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಪುರಸ್ಕೃತ ಅಡ್ವಾಣಿ ತಡರಾತ್ರಿ ಆಸ್ಪತ್ರೆಗೆ ದಾಖಲು
ಹರ್ಷವರ್ಧನ್ (35) ಕೊಲೆಯಾದ ವ್ಯಕ್ತಿ. ಸಂಜೆ ಸಮಯದಲ್ಲಿ ಮದ್ಯಪಾನ ಮಾಡಲೆಂದು ಬಾರ್ಗೆ ಹೋಗಿದ್ದಾನೆ. ಇದೇ ವೇಳೆ ಪಕ್ಕದ ಟೇಬಲ್ನಲ್ಲಿ ಕುಳಿತು ಮತ್ತಿಬ್ಬರು ಮದ್ಯಪಾನ ಮಾಡುತ್ತಿದ್ದರು. ಆಗ ಒಬ್ಬರನ್ನ ಒಬ್ಬರು ನೋಡಿದ್ದಾರೆ. ಇಷ್ಟಕ್ಕೆ ಯಾಕೋ ಗುರಾಯಿಸುತ್ತಿದ್ದೀಯಾ ಎಂದು ಗಲಾಟೆ ಮಾಡಿದ್ದಾರೆ.
ಬಳಿಕ ಮದ್ಯದ ಬಾಟಲ್ಸ್ ಹಾಗೂ ಬಿಯರ್ ಬಾಟಲ್ಗಳಿಂದ ವ್ಯಕ್ತಿ ತಲೆಗೆ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ