ಟಿ20 ವಿಶ್ವಕಪ್ಗೆ ಮುತ್ತಿಟ್ಟಿರುವ ಭಾರತ ತಂಡ
ಬಾರ್ಬಡೋಸ್ನಲ್ಲೇ ಲಾಕ್, ಅಸಲಿಗೆ ಆಗಿದ್ದೇನು?
ಬಾರ್ಬಡೋಸ್ನಿಂದ ಇನ್ನೂ ಹೊರಬರಲು ಸಾಧ್ಯವಾಗಿಲ್ಲ
ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಭಾರತ ತಂಡವು ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಫೈನಲ್ ಗೆದ್ದ ನಂತರ ಬಾರ್ಬಡೋಸ್ನಿಂದ ಇನ್ನೂ ಹೊರಬರಲು ಸಾಧ್ಯವಾಗಿಲ್ಲ. ಬಾರ್ಬಡೋಸ್ ಸೈಕ್ಲೋನ್ ಎಫೆಕ್ಟ್ಗೆ ಒಳಾಗಿದ್ದು, ಟೀಂ ಇಂಡಿಯಾ ಅಲ್ಲೇ ಲಾಕ್ ಆಗಿದೆ.
ಭಾರತ ತಂಡವು ಬಾರ್ಬಡೋಸ್ನಿಂದ ನ್ಯೂಯಾರ್ಕ್ಗೆ ತೆರಳಬೇಕಾಗಿತ್ತು. ಆದರೆ ಚಂಡಮಾರುತದಿಂದ ಹೊರಡಲು ಇನ್ನೂ ಸಾಧ್ಯವಾಗಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಟೀಂ ಇಂಡಿಯಾ ಸಂಕಷ್ಟದಲ್ಲಿದ್ದು, ಬಾರ್ಬಡೋಸ್ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಗುಡ್ನ್ಯೂಸ್.. ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ..!
ವರದಿಗಳ ಪ್ರಕಾರ ಬಾರ್ಬಡೋಸ್ನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮನೆಯಿಂದ ಯಾರಿಗೂ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಬೆರಿಲ್ ಚಂಡಮಾರುತದಿಂದಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿ ಉದ್ಭವಿಸಿದೆ ಎನ್ನಲಾಗಿದೆ.
ಟೀಂ ಇಂಡಿಯಾ ಕತೆ ಏನು?
ವರದಿಗಳ ಪ್ರಕಾರ.. ಸೈಕ್ಲೋನ್ನಿಂದಾಗಿ ಟೀಂ ಇಂಡಿಯಾ ನ್ಯೂಯಾರ್ಕ್ ಹೋಗುವ ಪ್ಲಾನ್ ಕ್ಯಾನ್ಸಲ್ ಮಾಡಲಾಗಿದೆ. ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ನೇರವಾಗಿ ದೆಹಲಿಗೆ ಬರಲಿದ್ದಾರೆ. ಸದ್ಯ ಪರಿಸ್ಥಿತಿ ಸುಧಾರಿಸುವ ವರೆಗೂ ಅವರು ಅಲ್ಲೇ ಕಾಯಬೇಕಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಜುಲೈ 3 ರಂದು ಟೀಂ ಇಂಡಿಯಾ ತಾಯ್ನಾಡಿಗೆ ಮರಳಬಹುದು.
ಇದನ್ನೂ ಓದಿ:3 ಹೊಸ ಕ್ರಿಮಿನಲ್ ಕಾನೂನು ಜಾರಿ.. ಇವು ನ್ಯಾಯ ವ್ಯವಸ್ಥೆ, ನಾಗರಿಕರ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟಿ20 ವಿಶ್ವಕಪ್ಗೆ ಮುತ್ತಿಟ್ಟಿರುವ ಭಾರತ ತಂಡ
ಬಾರ್ಬಡೋಸ್ನಲ್ಲೇ ಲಾಕ್, ಅಸಲಿಗೆ ಆಗಿದ್ದೇನು?
ಬಾರ್ಬಡೋಸ್ನಿಂದ ಇನ್ನೂ ಹೊರಬರಲು ಸಾಧ್ಯವಾಗಿಲ್ಲ
ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಭಾರತ ತಂಡವು ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಫೈನಲ್ ಗೆದ್ದ ನಂತರ ಬಾರ್ಬಡೋಸ್ನಿಂದ ಇನ್ನೂ ಹೊರಬರಲು ಸಾಧ್ಯವಾಗಿಲ್ಲ. ಬಾರ್ಬಡೋಸ್ ಸೈಕ್ಲೋನ್ ಎಫೆಕ್ಟ್ಗೆ ಒಳಾಗಿದ್ದು, ಟೀಂ ಇಂಡಿಯಾ ಅಲ್ಲೇ ಲಾಕ್ ಆಗಿದೆ.
ಭಾರತ ತಂಡವು ಬಾರ್ಬಡೋಸ್ನಿಂದ ನ್ಯೂಯಾರ್ಕ್ಗೆ ತೆರಳಬೇಕಾಗಿತ್ತು. ಆದರೆ ಚಂಡಮಾರುತದಿಂದ ಹೊರಡಲು ಇನ್ನೂ ಸಾಧ್ಯವಾಗಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಟೀಂ ಇಂಡಿಯಾ ಸಂಕಷ್ಟದಲ್ಲಿದ್ದು, ಬಾರ್ಬಡೋಸ್ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಗುಡ್ನ್ಯೂಸ್.. ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ..!
ವರದಿಗಳ ಪ್ರಕಾರ ಬಾರ್ಬಡೋಸ್ನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮನೆಯಿಂದ ಯಾರಿಗೂ ಹೊರಬರದಂತೆ ಎಚ್ಚರಿಕೆ ನೀಡಲಾಗಿದೆ. ಬೆರಿಲ್ ಚಂಡಮಾರುತದಿಂದಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿ ಉದ್ಭವಿಸಿದೆ ಎನ್ನಲಾಗಿದೆ.
ಟೀಂ ಇಂಡಿಯಾ ಕತೆ ಏನು?
ವರದಿಗಳ ಪ್ರಕಾರ.. ಸೈಕ್ಲೋನ್ನಿಂದಾಗಿ ಟೀಂ ಇಂಡಿಯಾ ನ್ಯೂಯಾರ್ಕ್ ಹೋಗುವ ಪ್ಲಾನ್ ಕ್ಯಾನ್ಸಲ್ ಮಾಡಲಾಗಿದೆ. ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ನೇರವಾಗಿ ದೆಹಲಿಗೆ ಬರಲಿದ್ದಾರೆ. ಸದ್ಯ ಪರಿಸ್ಥಿತಿ ಸುಧಾರಿಸುವ ವರೆಗೂ ಅವರು ಅಲ್ಲೇ ಕಾಯಬೇಕಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಜುಲೈ 3 ರಂದು ಟೀಂ ಇಂಡಿಯಾ ತಾಯ್ನಾಡಿಗೆ ಮರಳಬಹುದು.
ಇದನ್ನೂ ಓದಿ:3 ಹೊಸ ಕ್ರಿಮಿನಲ್ ಕಾನೂನು ಜಾರಿ.. ಇವು ನ್ಯಾಯ ವ್ಯವಸ್ಥೆ, ನಾಗರಿಕರ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ