ಸಂಜೆ ಸಾವನ್ನಪ್ಪಿದ್ದ ಮಗುವಿನ ಮೃತದೇಹ ತಡರಾತ್ರಿ ಅಂತ್ಯಸಂಸ್ಕಾರ
ಹಲವು ಅನುಮಾನಗಳು, ಮಗುವಿನ ಸಾವಿಗೆ ಕಾರಣವೇನು..?
ಒಂದೂವರೆ ವರ್ಷದ ಮಗುವಿನ ದೇಹ ಜೋಕಾಲಿಯಲ್ಲಿ ಪತ್ತೆ
ಬೀದರ್: ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಎನ್ನುವಷ್ಟರಲ್ಲಿ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..
ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬುವವರ ಒಂದೂವರೆ ವರ್ಷದ ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿದ್ದರು. ಆದರೆ ಮರುದಿನ ಅಂದರೆ ಜೂನ್ 30ರ ಬೆಳಗ್ಗೆ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಪ್ರತ್ಯಕ್ಷವಾಗಿದೆ. ಇದರಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಗುಡ್ನ್ಯೂಸ್.. ಬೆಂಗಳೂರು ಫ್ರಾಂಚೈಸಿಯಿಂದ ಕಾರ್ತಿಕ್ಗೆ ಮಹತ್ವದ ಜವಾಬ್ದಾರಿ, ಏನದು?
ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಚೈನ್ಗಳ ಆಸೆಗಾಗಿ ಮೃತದೇಹವನ್ನು ಹೊರ ತೆಗೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಸಂಜೆ ಸಾವನ್ನಪ್ಪಿದ್ದ ಮಗುವಿನ ಮೃತದೇಹ ತಡರಾತ್ರಿ ಅಂತ್ಯಸಂಸ್ಕಾರ
ಹಲವು ಅನುಮಾನಗಳು, ಮಗುವಿನ ಸಾವಿಗೆ ಕಾರಣವೇನು..?
ಒಂದೂವರೆ ವರ್ಷದ ಮಗುವಿನ ದೇಹ ಜೋಕಾಲಿಯಲ್ಲಿ ಪತ್ತೆ
ಬೀದರ್: ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಎನ್ನುವಷ್ಟರಲ್ಲಿ ಉಯ್ಯಾಲೆಯಲ್ಲಿ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು, ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..
ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಎಂಬುವವರ ಒಂದೂವರೆ ವರ್ಷದ ದೀಪ್ತಿ ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿದ್ದರು. ಆದರೆ ಮರುದಿನ ಅಂದರೆ ಜೂನ್ 30ರ ಬೆಳಗ್ಗೆ ಮರಕ್ಕೆ ಕಟ್ಟಿದ್ದ ಉಯ್ಯಾಲೆ (ಜೋಕಾಲಿ) ಯಲ್ಲಿ ಮಗುವಿನ ಮೃತದೇಹ ಪ್ರತ್ಯಕ್ಷವಾಗಿದೆ. ಇದರಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಗುಡ್ನ್ಯೂಸ್.. ಬೆಂಗಳೂರು ಫ್ರಾಂಚೈಸಿಯಿಂದ ಕಾರ್ತಿಕ್ಗೆ ಮಹತ್ವದ ಜವಾಬ್ದಾರಿ, ಏನದು?
ಮಗುವಿನ ಮೃತದೇಹವನ್ನು ಕುಟುಂಬಸ್ಥರು ಜೂನ್ 30 ರಂದು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಮಗುವಿನ ಕಾಲುಗಳಲ್ಲಿದ್ದ ಚೈನ್ಗಳ ಆಸೆಗಾಗಿ ಮೃತದೇಹವನ್ನು ಹೊರ ತೆಗೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ