ವೆಸ್ಟ್ ಇಂಡೀಸ್ನಲ್ಲಿ ಟ್ರೋಫಿಗೆ ಮುತ್ತಿಕ್ಕಿರುವ ಭಾರತ ತಂಡ
T20 ವಿಶ್ವಕಪ್ಗೆ ಕೆ.ಎಲ್ ರಾಹುಲ್ರನ್ನ ಆಯ್ಕೆ ಮಾಡಿರಲಿಲ್ಲ
ರಾಹುಲ್ರನ್ನ ಬಿಟ್ಟು ಪಂತ್, ಸಂಜುಗೆ ಚಾನ್ಸ್ ನೀಡಿದ್ದ ಬಿಸಿಸಿಐ
2024ರ T20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದೇ ಭಾರತ ಅಮೋಘವಾದ ಪ್ರದರ್ಶನ ನೀಡಿ ಟ್ರೋಫಿಗೆ ಮುತ್ತಿಕ್ಕಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯವನ್ನ ರೋಚಕವಾಗಿ ಗೆಲ್ಲುವ ಮೂಲಕ 2ನೇ ಬಾರಿಗೆ ಭಾರತ ಚುಟುಕು ಕ್ರಿಕೆಟ್ನ ಚಾಂಪಿಯನ್ ಆಗಿ ಹೊರ ಹೊಮ್ಮುದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಆಟಗಾರ ಹಾಗೂ ಕನ್ನಡಿಗ ಕೆ.ಎಲ್ ರಾಹುಲ್ ಅವರು ಇಡೀ ತಂಡಕ್ಕೆ, ಸಿಬ್ಬಂದಿಗೆ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಟೂರ್ನಿ ಉದ್ದಕ್ಕೂ ಅದ್ಭುತವಾದ ಪ್ರದರ್ಶನ ನೀಡಿ ಸಕ್ಸಸ್ ಕಂಡಿದೆ. ಟ್ರೋಫಿಯನ್ನು ಎತ್ತಿ ಹಿಡಿದಿದ್ದರಿಂದ ಭಾರತ ತಂಡದ ಸಿಬ್ಬಂದಿ, ಅಭಿಮಾನಿಗಳು ಹಾಗೂ ಎಲ್ಲ ಭಾರತೀಯರು ನಿಮ್ಮೊಂದಿಗೆ ಸಂಭ್ರಮಿಸಿದ್ದಾರೆ. ಭಾರತ ತಂಡದ ಆಟಗಾರರೊಂದಿಗೆ ಇಡೀ ದೇಶವೇ ಸಂಭ್ರಮಿಸಿ ಖುಷಿಪಟ್ಟಿದೆ ಎಂದು ಕೆಎಲ್ ರಾಹುಲ್ ಅವರು ತಮ್ಮ ಎಕ್ಸ್ ಅಕೌಂಟ್ನಲ್ಲಿ ಬರೆದು ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ.
ಇದನ್ನೂ ಓದಿ: ಪಾಂಡ್ಯ ಮ್ಯಾಚ್ ವಿನ್ನಿಂಗ್ ಆಟಕ್ಕೆ ಸೆಲ್ಯೂಟ್.. ಗೆಲುವಿನ ಹಿಂದೆ ಹಾರ್ದಿಕ್ ನುಂಗಿರುವ ನೋವುಗಳು ಎಷ್ಟು ಗೊತ್ತಾ..?
Sheer brilliance from this team throughout the competition.
Unbeaten and comprehensive.
Congratulations team 🇮🇳
The support staff, the fans and all Indians 🤗
The whole nation celebrates with you guys 🩵 pic.twitter.com/dk6LghMVOV— K L Rahul (@klrahul) June 30, 2024
ಕನ್ನಡಿಗ ಕೆ.ಎಲ್.ರಾಹುಲ್ರನ್ನು T20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಅಚ್ಚರಿ ಎಂದರೆ ರಾಹುಲ್ಗಿಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ್ದ ರಿಷಬ್ ಪಂತ್ ಹಾಗೂ ಸಂಜು ಸ್ಯಾಮ್ಸನ್ಗೆ ಟೀಮ್ನಲ್ಲಿ ಸ್ಥಾನ ನೀಡಲಾಗಿತ್ತು. ಇದರ ಬೆನ್ನಲ್ಲೇ ಕನ್ನಡಿಗನನ್ನು ಕಡೆಗಣಿಸಲಾಗಿದೆ ಎಂಬ ಕೂಗು ಕೇಳಿಬಂದಿತ್ತು. ಇದರಿಂದ ಅವಕಾಶ ವಂಚಿತರಾಗಿದ್ದ ಕೆಎಲ್ ರಾಹುಲ್ ಅವರು ತನ್ನ ಪತ್ನಿಯೊಂದಿಗೆ ಪ್ರವಾಸ ಕೈಗೊಂಡು ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಸುತ್ತಾಡುತ್ತಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ವೆಸ್ಟ್ ಇಂಡೀಸ್ನಲ್ಲಿ ಟ್ರೋಫಿಗೆ ಮುತ್ತಿಕ್ಕಿರುವ ಭಾರತ ತಂಡ
T20 ವಿಶ್ವಕಪ್ಗೆ ಕೆ.ಎಲ್ ರಾಹುಲ್ರನ್ನ ಆಯ್ಕೆ ಮಾಡಿರಲಿಲ್ಲ
ರಾಹುಲ್ರನ್ನ ಬಿಟ್ಟು ಪಂತ್, ಸಂಜುಗೆ ಚಾನ್ಸ್ ನೀಡಿದ್ದ ಬಿಸಿಸಿಐ
2024ರ T20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದೇ ಭಾರತ ಅಮೋಘವಾದ ಪ್ರದರ್ಶನ ನೀಡಿ ಟ್ರೋಫಿಗೆ ಮುತ್ತಿಕ್ಕಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯವನ್ನ ರೋಚಕವಾಗಿ ಗೆಲ್ಲುವ ಮೂಲಕ 2ನೇ ಬಾರಿಗೆ ಭಾರತ ಚುಟುಕು ಕ್ರಿಕೆಟ್ನ ಚಾಂಪಿಯನ್ ಆಗಿ ಹೊರ ಹೊಮ್ಮುದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಆಟಗಾರ ಹಾಗೂ ಕನ್ನಡಿಗ ಕೆ.ಎಲ್ ರಾಹುಲ್ ಅವರು ಇಡೀ ತಂಡಕ್ಕೆ, ಸಿಬ್ಬಂದಿಗೆ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ತಾಯಿ ಮೀನಾ, ಸಹೋದರ ದಿನಕರ ಜೈಲಿಗೆ ಭೇಟಿ.. ಮಗನ ಸಂಕಟ ನೋಡಿ ಅಮ್ಮ ಭಾವುಕ..
ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಟೂರ್ನಿ ಉದ್ದಕ್ಕೂ ಅದ್ಭುತವಾದ ಪ್ರದರ್ಶನ ನೀಡಿ ಸಕ್ಸಸ್ ಕಂಡಿದೆ. ಟ್ರೋಫಿಯನ್ನು ಎತ್ತಿ ಹಿಡಿದಿದ್ದರಿಂದ ಭಾರತ ತಂಡದ ಸಿಬ್ಬಂದಿ, ಅಭಿಮಾನಿಗಳು ಹಾಗೂ ಎಲ್ಲ ಭಾರತೀಯರು ನಿಮ್ಮೊಂದಿಗೆ ಸಂಭ್ರಮಿಸಿದ್ದಾರೆ. ಭಾರತ ತಂಡದ ಆಟಗಾರರೊಂದಿಗೆ ಇಡೀ ದೇಶವೇ ಸಂಭ್ರಮಿಸಿ ಖುಷಿಪಟ್ಟಿದೆ ಎಂದು ಕೆಎಲ್ ರಾಹುಲ್ ಅವರು ತಮ್ಮ ಎಕ್ಸ್ ಅಕೌಂಟ್ನಲ್ಲಿ ಬರೆದು ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ.
ಇದನ್ನೂ ಓದಿ: ಪಾಂಡ್ಯ ಮ್ಯಾಚ್ ವಿನ್ನಿಂಗ್ ಆಟಕ್ಕೆ ಸೆಲ್ಯೂಟ್.. ಗೆಲುವಿನ ಹಿಂದೆ ಹಾರ್ದಿಕ್ ನುಂಗಿರುವ ನೋವುಗಳು ಎಷ್ಟು ಗೊತ್ತಾ..?
Sheer brilliance from this team throughout the competition.
Unbeaten and comprehensive.
Congratulations team 🇮🇳
The support staff, the fans and all Indians 🤗
The whole nation celebrates with you guys 🩵 pic.twitter.com/dk6LghMVOV— K L Rahul (@klrahul) June 30, 2024
ಕನ್ನಡಿಗ ಕೆ.ಎಲ್.ರಾಹುಲ್ರನ್ನು T20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಅಚ್ಚರಿ ಎಂದರೆ ರಾಹುಲ್ಗಿಂತ ಕಡಿಮೆ ಸ್ಟ್ರೈಕ್ ರೇಟ್ ಹೊಂದಿದ್ದ ರಿಷಬ್ ಪಂತ್ ಹಾಗೂ ಸಂಜು ಸ್ಯಾಮ್ಸನ್ಗೆ ಟೀಮ್ನಲ್ಲಿ ಸ್ಥಾನ ನೀಡಲಾಗಿತ್ತು. ಇದರ ಬೆನ್ನಲ್ಲೇ ಕನ್ನಡಿಗನನ್ನು ಕಡೆಗಣಿಸಲಾಗಿದೆ ಎಂಬ ಕೂಗು ಕೇಳಿಬಂದಿತ್ತು. ಇದರಿಂದ ಅವಕಾಶ ವಂಚಿತರಾಗಿದ್ದ ಕೆಎಲ್ ರಾಹುಲ್ ಅವರು ತನ್ನ ಪತ್ನಿಯೊಂದಿಗೆ ಪ್ರವಾಸ ಕೈಗೊಂಡು ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಸುತ್ತಾಡುತ್ತಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ