ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿಗಳು
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್, ರಾಜಕಾಲುವೆಗೆ ಸವಾರ ಬಿದ್ದನಾ?
ಸ್ಥಳದಲ್ಲಿ ಶೋರ್ಧ ಕಾರ್ಯ, ಬಿಬಿಎಂಪಿ ಇಂಜಿನಿಯರ್ಸ್ ಆಗಮನ
ಬೆಂಗಳೂರು: ರಾತ್ರಿ ವೇಳೆ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಸವಾರನೊಬ್ಬ ರಾಜಕಾಲುವೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನುವ ಆತಂಕ ಎದುರಾಗಿದೆ. ಅನುಮಾನದ ಮೇಲೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜ್ಞಾನ ಭಾರತಿ ಮೆಟ್ರೋ ಸ್ಟೇಷನ್ ಸಮೀಪದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಡೆಂಘೀಗೆ ಮೊದಲ ಬಲಿ.. 11 ವರ್ಷದ ಬಾಲಕ ಸಾವು
ಬ್ಯಾಟರಾಯನಪುರದ ನಿವಾಸಿ ಡೆಲಿವರಿ ಬಾಯ್ ಆಗಿರುವ ಹೇಮಂತ್ ಕುಮಾರ್ (27) ಸದ್ಯ ನಾಪತ್ತೆ ಆಗಿದ್ದಾನೆ. ಈತ ನಿನ್ನೆ ರಾತ್ರಿ 10:30ರ ಸುಮಾರಿಗೆ ಕೆಂಗೇರಿ ಕಡೆಯಿಂದ ಮೈಸೂರು ರಸ್ತೆಯಲ್ಲಿ ಪ್ರಯಾಣಿಸುತ್ತಿರುವಾಗ ಬೈಕ್ ಡಿವೈಡರ್ಗೆ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪ್ರತ್ಯಕ್ಷದರ್ಶಿಗಳು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: KRS, ಕಬಿನಿ ಡ್ಯಾಂ ನೀರಿನ ಮಟ್ಟ ಹೇಗಿದೆ.. ಈ ಜಲಾಶಯದಿಂದ ಶೀಘ್ರದಲ್ಲೇ ಶುಭಸುದ್ದಿ..!
ಈ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೋಲಿಸರು ರಾಜಕಾಲುವೆಯಲ್ಲಿ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸವಾರನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಜ್ಞಾನ ಭಾರತಿ ಮೆಟ್ರೋ ಸ್ಟೇಷನ್ ಸಮೀಪವೇ ಸವಾರನ ಬೈಕ್ ಇದೆ. ಸ್ಥಳದಲ್ಲಿ ಚಪ್ಪಲಿಗಳು, ಡಿವೈಡರ್ಗೆ ಬೈಕ್ ತಾಗಿರುವ ಗುರುತು ಆಧಾರಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೈಕ್ ಸವಾರ ಬಿದ್ದಿದ್ದಾನೋ, ಇಲ್ಲವೋ ಎಂಬುದು ಪೊಲೀಸರಿಗೆ ಅನುಮಾನವಿದೆ. ಇನ್ನು ಈ ಸಂಬಂಧ ಪೊಲೀಸರು ಬಿಬಿಎಂಪಿ ಇಂಜಿನಿಯರ್ಸ್ನ್ನ ಘಟನಾ ಸ್ಥಳಕ್ಕೆ ಕರೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿಗಳು
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್, ರಾಜಕಾಲುವೆಗೆ ಸವಾರ ಬಿದ್ದನಾ?
ಸ್ಥಳದಲ್ಲಿ ಶೋರ್ಧ ಕಾರ್ಯ, ಬಿಬಿಎಂಪಿ ಇಂಜಿನಿಯರ್ಸ್ ಆಗಮನ
ಬೆಂಗಳೂರು: ರಾತ್ರಿ ವೇಳೆ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದು ಸವಾರನೊಬ್ಬ ರಾಜಕಾಲುವೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನುವ ಆತಂಕ ಎದುರಾಗಿದೆ. ಅನುಮಾನದ ಮೇಲೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜ್ಞಾನ ಭಾರತಿ ಮೆಟ್ರೋ ಸ್ಟೇಷನ್ ಸಮೀಪದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಡೆಂಘೀಗೆ ಮೊದಲ ಬಲಿ.. 11 ವರ್ಷದ ಬಾಲಕ ಸಾವು
ಬ್ಯಾಟರಾಯನಪುರದ ನಿವಾಸಿ ಡೆಲಿವರಿ ಬಾಯ್ ಆಗಿರುವ ಹೇಮಂತ್ ಕುಮಾರ್ (27) ಸದ್ಯ ನಾಪತ್ತೆ ಆಗಿದ್ದಾನೆ. ಈತ ನಿನ್ನೆ ರಾತ್ರಿ 10:30ರ ಸುಮಾರಿಗೆ ಕೆಂಗೇರಿ ಕಡೆಯಿಂದ ಮೈಸೂರು ರಸ್ತೆಯಲ್ಲಿ ಪ್ರಯಾಣಿಸುತ್ತಿರುವಾಗ ಬೈಕ್ ಡಿವೈಡರ್ಗೆ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಪ್ರತ್ಯಕ್ಷದರ್ಶಿಗಳು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: KRS, ಕಬಿನಿ ಡ್ಯಾಂ ನೀರಿನ ಮಟ್ಟ ಹೇಗಿದೆ.. ಈ ಜಲಾಶಯದಿಂದ ಶೀಘ್ರದಲ್ಲೇ ಶುಭಸುದ್ದಿ..!
ಈ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಪೋಲಿಸರು ರಾಜಕಾಲುವೆಯಲ್ಲಿ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸವಾರನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಜ್ಞಾನ ಭಾರತಿ ಮೆಟ್ರೋ ಸ್ಟೇಷನ್ ಸಮೀಪವೇ ಸವಾರನ ಬೈಕ್ ಇದೆ. ಸ್ಥಳದಲ್ಲಿ ಚಪ್ಪಲಿಗಳು, ಡಿವೈಡರ್ಗೆ ಬೈಕ್ ತಾಗಿರುವ ಗುರುತು ಆಧಾರಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೈಕ್ ಸವಾರ ಬಿದ್ದಿದ್ದಾನೋ, ಇಲ್ಲವೋ ಎಂಬುದು ಪೊಲೀಸರಿಗೆ ಅನುಮಾನವಿದೆ. ಇನ್ನು ಈ ಸಂಬಂಧ ಪೊಲೀಸರು ಬಿಬಿಎಂಪಿ ಇಂಜಿನಿಯರ್ಸ್ನ್ನ ಘಟನಾ ಸ್ಥಳಕ್ಕೆ ಕರೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ