newsfirstkannada.com

ದಾಸ ಜೈಲಿನಲ್ಲಿರುವಾಗಲೇ ಶಾಸ್ತ್ರಿ ಥಿಯೇಟರ್‌ಗೆ ಲಗ್ಗೆ.. 20 ವರ್ಷಗಳ ಬಳಿಕ ರೀ ರಿಲೀಸ್​; ಯಾವಾಗ ಗೊತ್ತಾ?

Share :

Published July 7, 2024 at 6:00pm

    ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ದರ್ಶನ್

    ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಅಂಡ್ ಗ್ಯಾಂಗ್​ ಜೈಲಿಗೆ

    ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್​ಗೆ ಸಜ್ಜು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಅಂಡ್ ಗ್ಯಾಂಗ್​ ಜೈಲಿನಲ್ಲಿ ಇದ್ದಾರೆ. ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್​ಗೆ ಬೇಲ್​ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಇದರ ಮಧ್ಯೆ ಇಂತಹ ಸಮಯದಲ್ಲೇ ದರ್ಶನ್ ಅಭಿನಯದ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್​ಗೆ ಸಜ್ಜಾಗುತ್ತಿದೆ. ಅಭಿಮಾನಿಗಳು ದರ್ಶನ್ ಜೈಲಿನಲ್ಲಿರುವಾಗಲೇ ಸೂಪರ್ ಹಿಟ್ ಸಿನಿಮಾ ನೋಡೋ ಖುಷಿಯಲ್ಲಿದ್ದಾರೆ.

ಇದನ್ನೂ ಓದಿ: ದರ್ಶನ್​​ಗೆ ಶನಿ, ರಾಹು ಕಾಟ.. ರಾಜಯೋಗ ಇದೆಯಾ; ಬಂಡೆ ಮಹಾಕಾಳಿ ಪ್ರಧಾನ ಅರ್ಚಕ ನುಡಿದ ಭವಿಷ್ಯ? 

ಇದನ್ನೂ ಓದಿ: ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರಿಷಬ್ ಶೆಟ್ಟಿ; ಪತಿಗೆ ವಿಶೇಷವಾಗಿ ಶುಭ ಕೋರಿದ ಪತ್ನಿ ಪ್ರಗತಿ

ಜೂನ್‌, ಜುಲೈ ತಿಂಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಚಿತ್ರಮಂದಿರಕ್ಕೆ ಬರುವುದು ಕಡಿಮೆಯಾಗಿಬಿಟ್ಟಿವೆ. ಹಾಗಾಗಿ ಹಳೇ ಸಿನಿಮಾಗಳನ್ನೇ ಮತ್ತೆ ತೆರೆಗೆ ತರುವ ಪ್ರಯತ್ನ ಮುಂದುವರೆದಿದೆ. ಈ ಹಿಂದೆ ಪುನೀತ್ ರಾಜ್‌ಕುಮಾರ್ ನಟನೆಯ ಜಾಕಿ ಸಿನಿಮಾ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿತ್ತು. ಬಳಿಕ ಉಪೇಂದ್ರ ನಿರ್ದೇಶಿಸಿ ನಟಿಸಿದ ಎ ಸೇರಿದಂತೆ ಹಲವು ಸಿನಿಮಾಗಳು ಪ್ರೇಕ್ಷಕರ ಮುಂದೆ ಬಂದಿದ್ದವು. ಇದೀಗ ನಟ ದರ್ಶನ್ ಅಭಿನಯದ ಶಾಸ್ತ್ರಿ ಸಿನಿಮಾವನ್ನು ಜುಲೈ 12ಕ್ಕೆ ರೀ ರಿಲೀಸ್ ಮಾಡಲು ಸಿದ್ದತೆ ನಡೆಸಲಾಗುತ್ತಿದೆ. ಈಗಾಗಲೇ ಶಾಸ್ತ್ರಿ ಸಿನಿಮಾ ರೀ ರಿಲೀಸ್ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ.

ಪಿಎನ್ ಸತ್ಯ ಅವರು ನಿರ್ದೇಶಿಸಿದ್ದ ಸಿನಿಮಾ ಇದಾಗಿದ್ದು, 2005ರಲ್ಲಿ ಶಾಸ್ತ್ರಿ ಸಿನಿಮಾ ರಿಲೀಸ್ ಆಗಿತ್ತು. ದರ್ಶನ್ ಆಪ್ತ ಅಣಜಿ ನಾಗರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಒಂದು ರೀತಿಯಲ್ಲಿ ನಟ ದರ್ಶನ್​ಗೆ ಲೈಫ್ ಕೊಟ್ಟ ಸಿನಿಮಾ ಇದಾಗಿದೆ. ಸದ್ಯ ಕೆಜಿ ರಸ್ತೆ,‌ ಮೈಸೂರು, ತುಮಕೂರು ಸೇರಿ ರಾಜ್ಯದ ಹಲವು ಥಿಯೇಟರ್​ಗಳಲ್ಲಿ ಶಾಸ್ತ್ರಿ ಸಿನಿಮಾ‌ ರೀ ರಿಲೀಸ್​ಗೆ ಸಜ್ಜಾಗಿದೆ. ಸದ್ಯ ಶಂಕರ್ ಅಂಡ್ ಟೀಮ್ ಥಿಯೇಟರ್​ಗಳನ್ನ ಫೈನಲ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದಾಸ ಜೈಲಿನಲ್ಲಿರುವಾಗಲೇ ಶಾಸ್ತ್ರಿ ಥಿಯೇಟರ್‌ಗೆ ಲಗ್ಗೆ.. 20 ವರ್ಷಗಳ ಬಳಿಕ ರೀ ರಿಲೀಸ್​; ಯಾವಾಗ ಗೊತ್ತಾ?

https://newsfirstlive.com/wp-content/uploads/2024/07/shastri1.jpg

    ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ದರ್ಶನ್

    ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಅಂಡ್ ಗ್ಯಾಂಗ್​ ಜೈಲಿಗೆ

    ನಟ ದರ್ಶನ್ ಅಭಿನಯದ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್​ಗೆ ಸಜ್ಜು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಅಂಡ್ ಗ್ಯಾಂಗ್​ ಜೈಲಿನಲ್ಲಿ ಇದ್ದಾರೆ. ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್​ಗೆ ಬೇಲ್​ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಇದರ ಮಧ್ಯೆ ಇಂತಹ ಸಮಯದಲ್ಲೇ ದರ್ಶನ್ ಅಭಿನಯದ ಸೂಪರ್ ಹಿಟ್ ಸಿನಿಮಾ ರೀ ರಿಲೀಸ್​ಗೆ ಸಜ್ಜಾಗುತ್ತಿದೆ. ಅಭಿಮಾನಿಗಳು ದರ್ಶನ್ ಜೈಲಿನಲ್ಲಿರುವಾಗಲೇ ಸೂಪರ್ ಹಿಟ್ ಸಿನಿಮಾ ನೋಡೋ ಖುಷಿಯಲ್ಲಿದ್ದಾರೆ.

ಇದನ್ನೂ ಓದಿ: ದರ್ಶನ್​​ಗೆ ಶನಿ, ರಾಹು ಕಾಟ.. ರಾಜಯೋಗ ಇದೆಯಾ; ಬಂಡೆ ಮಹಾಕಾಳಿ ಪ್ರಧಾನ ಅರ್ಚಕ ನುಡಿದ ಭವಿಷ್ಯ? 

ಇದನ್ನೂ ಓದಿ: ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರಿಷಬ್ ಶೆಟ್ಟಿ; ಪತಿಗೆ ವಿಶೇಷವಾಗಿ ಶುಭ ಕೋರಿದ ಪತ್ನಿ ಪ್ರಗತಿ

ಜೂನ್‌, ಜುಲೈ ತಿಂಗಳಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಚಿತ್ರಮಂದಿರಕ್ಕೆ ಬರುವುದು ಕಡಿಮೆಯಾಗಿಬಿಟ್ಟಿವೆ. ಹಾಗಾಗಿ ಹಳೇ ಸಿನಿಮಾಗಳನ್ನೇ ಮತ್ತೆ ತೆರೆಗೆ ತರುವ ಪ್ರಯತ್ನ ಮುಂದುವರೆದಿದೆ. ಈ ಹಿಂದೆ ಪುನೀತ್ ರಾಜ್‌ಕುಮಾರ್ ನಟನೆಯ ಜಾಕಿ ಸಿನಿಮಾ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿತ್ತು. ಬಳಿಕ ಉಪೇಂದ್ರ ನಿರ್ದೇಶಿಸಿ ನಟಿಸಿದ ಎ ಸೇರಿದಂತೆ ಹಲವು ಸಿನಿಮಾಗಳು ಪ್ರೇಕ್ಷಕರ ಮುಂದೆ ಬಂದಿದ್ದವು. ಇದೀಗ ನಟ ದರ್ಶನ್ ಅಭಿನಯದ ಶಾಸ್ತ್ರಿ ಸಿನಿಮಾವನ್ನು ಜುಲೈ 12ಕ್ಕೆ ರೀ ರಿಲೀಸ್ ಮಾಡಲು ಸಿದ್ದತೆ ನಡೆಸಲಾಗುತ್ತಿದೆ. ಈಗಾಗಲೇ ಶಾಸ್ತ್ರಿ ಸಿನಿಮಾ ರೀ ರಿಲೀಸ್ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ.

ಪಿಎನ್ ಸತ್ಯ ಅವರು ನಿರ್ದೇಶಿಸಿದ್ದ ಸಿನಿಮಾ ಇದಾಗಿದ್ದು, 2005ರಲ್ಲಿ ಶಾಸ್ತ್ರಿ ಸಿನಿಮಾ ರಿಲೀಸ್ ಆಗಿತ್ತು. ದರ್ಶನ್ ಆಪ್ತ ಅಣಜಿ ನಾಗರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಒಂದು ರೀತಿಯಲ್ಲಿ ನಟ ದರ್ಶನ್​ಗೆ ಲೈಫ್ ಕೊಟ್ಟ ಸಿನಿಮಾ ಇದಾಗಿದೆ. ಸದ್ಯ ಕೆಜಿ ರಸ್ತೆ,‌ ಮೈಸೂರು, ತುಮಕೂರು ಸೇರಿ ರಾಜ್ಯದ ಹಲವು ಥಿಯೇಟರ್​ಗಳಲ್ಲಿ ಶಾಸ್ತ್ರಿ ಸಿನಿಮಾ‌ ರೀ ರಿಲೀಸ್​ಗೆ ಸಜ್ಜಾಗಿದೆ. ಸದ್ಯ ಶಂಕರ್ ಅಂಡ್ ಟೀಮ್ ಥಿಯೇಟರ್​ಗಳನ್ನ ಫೈನಲ್ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More