newsfirstkannada.com

×

ರಾಮನಗರ ಜಿಲ್ಲೆ ಹಾಗೇ ಇರುತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ; ಡಿ ಕೆ ಶಿವಕುಮಾರ್

Share :

Published July 9, 2024 at 11:38am

Update July 9, 2024 at 12:33pm

    ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ಪ್ರಯತ್ನಿಸಲಾಗ್ತಿದೆ

    ಹೆಸರು ಬದಲಾವಣೆ ವಿಚಾರವಾಗಿ ಸಿಎಂಗೆ ಮನವಿ ಕೊಟ್ಟಿದ್ದೇವೆ

    ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದ ಡಿ ಕೆ ಶಿವಕುಮಾರ್​

ರಾಮನಗರ ಜಿಲ್ಲೆ ಹಾಗೇ ಇರುತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನ್ಯೂಸ್​​ಫಸ್ಟ್​ಗೆ ಜೊತೆಗೆ ಮಾತನಾಡಿದ ಅವರು, ವಿಶ್ವವೇ ಬೆಂಗಳೂರನ್ನ ನೋಡುತ್ತಿದೆ. ಹೆಸರು ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲೆ ಹೆಸರು ಬದಲಾದ ನಂತರ ಅಭಿವೃದ್ಧಿ ಕೆಲಸಗಳು ಕೂಡ ಬೇಗ ಆಗಲಿವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್​ ಪಕ್ಕದಲ್ಲೇ ಆಂಧ್ರಪ್ರದೇಶದ, ತಮಿಳುನಾಡು ಇದೆ. ಹಾಗಾಗಿ ಕೈಗಾರಿಕೆಗಳಿಗೂ ಅನುಕೂಲ ಆಗಲಿದೆ. ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ಪ್ರಯತ್ನಿಸಲಾಗ್ತಿದೆ ಎಂದಿದ್ದಾರೆ.

ಇದನ್ನೂ ಓದಿ: B.C ಪಾಟೀಲ್​ ಅಳಿಯ ಆತ್ಮಹತ್ಯೆ.. ಇಂದು ಮಧ್ಯಾಹ್ನ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ

ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಕರೆಂಟ್​ ಇಲ್ಲ! ಮೊಬೈಲ್​​ ಟಾರ್ಚ್​​ನಲ್ಲೇ ರೋಗಿಗೆ ಚಿಕಿತ್ಸೆ! ಈ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಹೀಗಿದೆ ನೋಡಿ

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ. ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮನಗರ ಜಿಲ್ಲೆ ಹಾಗೇ ಇರುತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ; ಡಿ ಕೆ ಶಿವಕುಮಾರ್

https://newsfirstlive.com/wp-content/uploads/2024/03/D-K-Shivakumar.jpg

    ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ಪ್ರಯತ್ನಿಸಲಾಗ್ತಿದೆ

    ಹೆಸರು ಬದಲಾವಣೆ ವಿಚಾರವಾಗಿ ಸಿಎಂಗೆ ಮನವಿ ಕೊಟ್ಟಿದ್ದೇವೆ

    ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದ ಡಿ ಕೆ ಶಿವಕುಮಾರ್​

ರಾಮನಗರ ಜಿಲ್ಲೆ ಹಾಗೇ ಇರುತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನ್ಯೂಸ್​​ಫಸ್ಟ್​ಗೆ ಜೊತೆಗೆ ಮಾತನಾಡಿದ ಅವರು, ವಿಶ್ವವೇ ಬೆಂಗಳೂರನ್ನ ನೋಡುತ್ತಿದೆ. ಹೆಸರು ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲೆ ಹೆಸರು ಬದಲಾದ ನಂತರ ಅಭಿವೃದ್ಧಿ ಕೆಲಸಗಳು ಕೂಡ ಬೇಗ ಆಗಲಿವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್​ ಪಕ್ಕದಲ್ಲೇ ಆಂಧ್ರಪ್ರದೇಶದ, ತಮಿಳುನಾಡು ಇದೆ. ಹಾಗಾಗಿ ಕೈಗಾರಿಕೆಗಳಿಗೂ ಅನುಕೂಲ ಆಗಲಿದೆ. ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ಪ್ರಯತ್ನಿಸಲಾಗ್ತಿದೆ ಎಂದಿದ್ದಾರೆ.

ಇದನ್ನೂ ಓದಿ: B.C ಪಾಟೀಲ್​ ಅಳಿಯ ಆತ್ಮಹತ್ಯೆ.. ಇಂದು ಮಧ್ಯಾಹ್ನ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ

ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: ಕರೆಂಟ್​ ಇಲ್ಲ! ಮೊಬೈಲ್​​ ಟಾರ್ಚ್​​ನಲ್ಲೇ ರೋಗಿಗೆ ಚಿಕಿತ್ಸೆ! ಈ ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಹೀಗಿದೆ ನೋಡಿ

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ. ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More