ಅಪರ್ಣಾ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ
ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದ ನಟಿ ಅಪರ್ಣಾ ಇನ್ನಿಲ್ಲ
ಇವರ ಕೊನೆ ಆಸೆ ಈಡೇರಿಸೋ ಮುನ್ನವೇ ನಿಧನರಾದ್ರು!
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಕ್ಯಾನ್ಸರ್ನಿಂದ ತೀವ್ರವಾಗಿ ಬಳಲುತ್ತಿದ್ದ ಅಪರ್ಣಾ ಅವರು ಇಂದು ನಿಧನರಾಗಿದ್ದಾರೆ. ಇನ್ನೂ ಅಪರ್ಣಾ ಸಾವಿನ ಸುದ್ದಿ ತಿಳಿದು ಎಲ್ಲರಿಗೂ ಶಾಕ್ ಆಗಿದೆ.
ಅಪರ್ಣಾ ಅವರು ತಮ್ಮ ಬನಶಂಕರಿ ನಿವಾಸದಲ್ಲಿ ನಿಧನರಾಗಿದ್ದು, ಇಡೀ ಚಿತ್ರರಂಗವೇ ಕಂಬನಿ ಮಿಡಿಯುತ್ತಿದ್ದೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದ ಅಪರ್ಣಾ ಅವರಿಗೆ ಒಂದು ಕೊನೆ ಆಸೆ ಇತ್ತಂತೆ. ಅದು ಒಂದು ನಿರೂಪಣೆ ಶಾಲೆ ತೆರೆಯಬೇಕು ಎಂಬುದು.
ಸದ್ಯ ತಮ್ಮ ಕೊನೆ ಆಸೆ ಈಡೇರಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ ನಟಿ ಅಪರ್ಣಾ. ಈ ಬಗ್ಗೆ ಖುದ್ದಾಗಿ ಮಂಡ್ಯ ರಮೇಶ್ ಅವರೇ ಹೇಳಿಕೊಂಡಿದ್ದಾರೆ.
ಮಂಡ್ಯ ರಮೇಶ್ ಹೇಳಿದ್ದೇನು?
ಈ ಬಗ್ಗೆ ಮಾತಾಡಿದ ಮಂಡ್ಯ ರಮೇಶ್ ಅವರು, ಅಪರ್ಣಾಗೆ ಒಂದು ನಿರೂಪಣೆ ಶಾಲೆ ಮಾಡಬೇಕು ಅಂತ ಆಸೆ ಇತ್ತು. ನನ್ನ ಬಳಿ ಹೇಳಿಕೊಂಡಿದ್ದರು. ಅದು ಈಡೇರುವ ಮುನ್ನವೇ ನಮ್ಮನ್ನ ಬಿಟ್ಟು ಹೋದ್ರು ಎಂದು ಅಪರ್ಣಾ ಸಾವಿರ ಕಂಬನಿ ಮಿಡಿದ್ದಾರೆ.
ಯಾರು ಈ ಅಪರ್ಣಾ?
ಅಪರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.
90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.
ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.
ಇದನ್ನೂ ಓದಿ: BIG BREAKING: ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅಪರ್ಣಾ ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ
ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದ ನಟಿ ಅಪರ್ಣಾ ಇನ್ನಿಲ್ಲ
ಇವರ ಕೊನೆ ಆಸೆ ಈಡೇರಿಸೋ ಮುನ್ನವೇ ನಿಧನರಾದ್ರು!
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಕ್ಯಾನ್ಸರ್ನಿಂದ ತೀವ್ರವಾಗಿ ಬಳಲುತ್ತಿದ್ದ ಅಪರ್ಣಾ ಅವರು ಇಂದು ನಿಧನರಾಗಿದ್ದಾರೆ. ಇನ್ನೂ ಅಪರ್ಣಾ ಸಾವಿನ ಸುದ್ದಿ ತಿಳಿದು ಎಲ್ಲರಿಗೂ ಶಾಕ್ ಆಗಿದೆ.
ಅಪರ್ಣಾ ಅವರು ತಮ್ಮ ಬನಶಂಕರಿ ನಿವಾಸದಲ್ಲಿ ನಿಧನರಾಗಿದ್ದು, ಇಡೀ ಚಿತ್ರರಂಗವೇ ಕಂಬನಿ ಮಿಡಿಯುತ್ತಿದ್ದೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದ ಅಪರ್ಣಾ ಅವರಿಗೆ ಒಂದು ಕೊನೆ ಆಸೆ ಇತ್ತಂತೆ. ಅದು ಒಂದು ನಿರೂಪಣೆ ಶಾಲೆ ತೆರೆಯಬೇಕು ಎಂಬುದು.
ಸದ್ಯ ತಮ್ಮ ಕೊನೆ ಆಸೆ ಈಡೇರಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ ನಟಿ ಅಪರ್ಣಾ. ಈ ಬಗ್ಗೆ ಖುದ್ದಾಗಿ ಮಂಡ್ಯ ರಮೇಶ್ ಅವರೇ ಹೇಳಿಕೊಂಡಿದ್ದಾರೆ.
ಮಂಡ್ಯ ರಮೇಶ್ ಹೇಳಿದ್ದೇನು?
ಈ ಬಗ್ಗೆ ಮಾತಾಡಿದ ಮಂಡ್ಯ ರಮೇಶ್ ಅವರು, ಅಪರ್ಣಾಗೆ ಒಂದು ನಿರೂಪಣೆ ಶಾಲೆ ಮಾಡಬೇಕು ಅಂತ ಆಸೆ ಇತ್ತು. ನನ್ನ ಬಳಿ ಹೇಳಿಕೊಂಡಿದ್ದರು. ಅದು ಈಡೇರುವ ಮುನ್ನವೇ ನಮ್ಮನ್ನ ಬಿಟ್ಟು ಹೋದ್ರು ಎಂದು ಅಪರ್ಣಾ ಸಾವಿರ ಕಂಬನಿ ಮಿಡಿದ್ದಾರೆ.
ಯಾರು ಈ ಅಪರ್ಣಾ?
ಅಪರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.
90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.
ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.
ಇದನ್ನೂ ಓದಿ: BIG BREAKING: ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ