newsfirstkannada.com

ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಭರ್ಜರಿ ಮಳೆ.. ಬೆಂಗಳೂರಿಗೆ ಬಿಸಿಲು ಬರೋದು ಯಾವಾಗ ಗೊತ್ತಾ..?

Share :

Published July 20, 2024 at 9:11am

    ಹವಾಮಾನ ಇಲಾಖೆಯಿಂದ ಕರಾವಳಿಗೆ ಎಚ್ಚರಿಕೆ

    ಇಂದು, ನಾಳೆ ಎಲ್ಲೆಲ್ಲಿ ರೆಡ್ ಅಲರ್ಟ್ ಘೋಷಣೆ?

    ಮಳೆಯ ಜೊತೆಗೆ ಚಳಿ, ಶೀತಗಾಳಿಯ ವಾರ್ನಿಂಗ್..!

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಕೊಟ್ಟಿದೆ.

ಇಂದಿನಿಂದ 5 ದಿನಗಳವರೆಗೆ ಮಳೆ ಮುಂದುವರಿಯಲಿದೆ. ಇಂದು, ನಾಳೆ ಕರಾವಳಿಗೆ ರೆಡ್ ಅಲರ್ಟ್ ವಿಸ್ತರಣೆ ಆಗಲಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ಮಳೆ ಭಾರೀ ಅಬ್ಬರಿಸುತ್ತಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ  ಓದಿ:ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು.. ಕನ್ನಡತಿ ಶ್ರೇಯಂಕಾ ಪಾಟೀಲ್ ಶೈನ್

ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಿದ್ರೆ, ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನು ದಕ್ಷಿಣ ಒಳನಾಡಿಗೆ ಇಂದು ನಾಳೆ ರೆಡ್ ಅಲರ್ಟ್ ಇದೆ. ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿಯ ವಾರ್ನಿಂಗ್​​ಗೂ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತವಾರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಕರೆಂಟ್ ಬಿಟ್ಟಿಲ್ಲ ಎಂದು ಶಾಪ ಹಾಕೋ ಜನಗಳೇ ಇಲ್ನೋಡಿ.. ನಿಮ್ಮ ಮನೆ ಬೆಳಗಲು ಜೀವವನ್ನೇ ಒತ್ತೆಯಿಟ್ಟು ಕೆಲಸ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಭರ್ಜರಿ ಮಳೆ.. ಬೆಂಗಳೂರಿಗೆ ಬಿಸಿಲು ಬರೋದು ಯಾವಾಗ ಗೊತ್ತಾ..?

https://newsfirstlive.com/wp-content/uploads/2024/07/KWR-RAIN-5-1.jpg

    ಹವಾಮಾನ ಇಲಾಖೆಯಿಂದ ಕರಾವಳಿಗೆ ಎಚ್ಚರಿಕೆ

    ಇಂದು, ನಾಳೆ ಎಲ್ಲೆಲ್ಲಿ ರೆಡ್ ಅಲರ್ಟ್ ಘೋಷಣೆ?

    ಮಳೆಯ ಜೊತೆಗೆ ಚಳಿ, ಶೀತಗಾಳಿಯ ವಾರ್ನಿಂಗ್..!

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಕೊಟ್ಟಿದೆ.

ಇಂದಿನಿಂದ 5 ದಿನಗಳವರೆಗೆ ಮಳೆ ಮುಂದುವರಿಯಲಿದೆ. ಇಂದು, ನಾಳೆ ಕರಾವಳಿಗೆ ರೆಡ್ ಅಲರ್ಟ್ ವಿಸ್ತರಣೆ ಆಗಲಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ಮಳೆ ಭಾರೀ ಅಬ್ಬರಿಸುತ್ತಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ  ಓದಿ:ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು.. ಕನ್ನಡತಿ ಶ್ರೇಯಂಕಾ ಪಾಟೀಲ್ ಶೈನ್

ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಗೆ ಆರೆಂಜ್ ಅಲರ್ಟ್​ ಘೋಷಣೆ ಮಾಡಿದ್ರೆ, ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನು ದಕ್ಷಿಣ ಒಳನಾಡಿಗೆ ಇಂದು ನಾಳೆ ರೆಡ್ ಅಲರ್ಟ್ ಇದೆ. ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿಯ ವಾರ್ನಿಂಗ್​​ಗೂ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತವಾರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಕರೆಂಟ್ ಬಿಟ್ಟಿಲ್ಲ ಎಂದು ಶಾಪ ಹಾಕೋ ಜನಗಳೇ ಇಲ್ನೋಡಿ.. ನಿಮ್ಮ ಮನೆ ಬೆಳಗಲು ಜೀವವನ್ನೇ ಒತ್ತೆಯಿಟ್ಟು ಕೆಲಸ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More