newsfirstkannada.com

ಮರಕ್ಕೆ ಗುದ್ದಿದ ಸರ್ಕಾರಿ ಬಸ್.. ಡ್ರೈವರ್​ನ 2 ಕಾಲು ಕಟ್​, ನಾಲ್ವರ ಸ್ಥಿತಿ ಚಿಂತಾಜನಕ

Share :

Published July 20, 2024 at 5:33pm

    30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸ್ತಿದ್ದ ಬಸ್​ ಅಪಘಾತ

    ಗಂಭೀರವಾಗಿ ಗಾಯಗೊಂಡ ನಾಲ್ವರು ಸಹ ಪ್ರಯಾಣಿಕರು

    ಕಾಲು ಕಟ್ ಆದ ಚಾಲಕನ ನೋವು ಯಾರಿಗು ಹೇಳತೀರದು

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ 2 ಕಾಲುಗಳು ಕಟ್ ಆಗಿದ್ದು ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ‘ವೈಯಕ್ತಿಕ ಗಲಾಟೆಗಳಿಗಿಂತ ದೇಶವೇ ಫಸ್ಟ್​’.. ಸಾಮರಸ್ಯ ಸಂದೇಶ ಸಾರಿದ ಗಂಭೀರ್- ವಿರಾಟ್​ ಕೊಹ್ಲಿ!

ಹುಬ್ಬಳ್ಳಿ ಕಡೆಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್​ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ರಾಮನಾಳ ಕ್ರಾಸ್ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಬೇವಿನ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಡ್ರೈವರ್​​ನ ಎರಡು ಕಾಲುಗಳು ಕಟ್​ ಆಗಿದ್ದು ಸ್ಥಳವೆಲ್ಲ ರಕ್ತಸಿಕ್ತವಾಗಿದೆ. ಇನ್ನು ಬಸ್ ಮುಂಭಾಗವೆಲ್ಲ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ನಿರ್ದೇಶಕ ವಿನೋದ್ ದೋಂಡಾಲೆ ಸಾವಿಗೆ ಟಿ.ಎನ್ ಸೀತಾರಾಮ್ ಸಂತಾಪ; ಹೇಳಿದ್ದೇನು?

ಇನ್ನು ಬಸ್​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು ಆಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಘಟಗಿ​ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮರಕ್ಕೆ ಗುದ್ದಿದ ಸರ್ಕಾರಿ ಬಸ್.. ಡ್ರೈವರ್​ನ 2 ಕಾಲು ಕಟ್​, ನಾಲ್ವರ ಸ್ಥಿತಿ ಚಿಂತಾಜನಕ

https://newsfirstlive.com/wp-content/uploads/2024/07/BGM_BUS_ACCIDENT.jpg

    30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸ್ತಿದ್ದ ಬಸ್​ ಅಪಘಾತ

    ಗಂಭೀರವಾಗಿ ಗಾಯಗೊಂಡ ನಾಲ್ವರು ಸಹ ಪ್ರಯಾಣಿಕರು

    ಕಾಲು ಕಟ್ ಆದ ಚಾಲಕನ ನೋವು ಯಾರಿಗು ಹೇಳತೀರದು

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ 2 ಕಾಲುಗಳು ಕಟ್ ಆಗಿದ್ದು ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ‘ವೈಯಕ್ತಿಕ ಗಲಾಟೆಗಳಿಗಿಂತ ದೇಶವೇ ಫಸ್ಟ್​’.. ಸಾಮರಸ್ಯ ಸಂದೇಶ ಸಾರಿದ ಗಂಭೀರ್- ವಿರಾಟ್​ ಕೊಹ್ಲಿ!

ಹುಬ್ಬಳ್ಳಿ ಕಡೆಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್​ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ರಾಮನಾಳ ಕ್ರಾಸ್ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಬೇವಿನ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಡ್ರೈವರ್​​ನ ಎರಡು ಕಾಲುಗಳು ಕಟ್​ ಆಗಿದ್ದು ಸ್ಥಳವೆಲ್ಲ ರಕ್ತಸಿಕ್ತವಾಗಿದೆ. ಇನ್ನು ಬಸ್ ಮುಂಭಾಗವೆಲ್ಲ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ನಿರ್ದೇಶಕ ವಿನೋದ್ ದೋಂಡಾಲೆ ಸಾವಿಗೆ ಟಿ.ಎನ್ ಸೀತಾರಾಮ್ ಸಂತಾಪ; ಹೇಳಿದ್ದೇನು?

ಇನ್ನು ಬಸ್​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು ಆಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಘಟಗಿ​ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More