newsfirstkannada.com

×

Breaking: ಬೆಂಗಳೂರು 5 ಭಾಗ ಮಾಡಲು ಸರ್ಕಾರ ನಿರ್ಧಾರ.. ಸಿಎಂ ಸಂಪುಟ ಸಭೆಯಲ್ಲಿ ಅಸ್ತು!

Share :

Published July 22, 2024 at 9:40pm

Update July 22, 2024 at 10:08pm

    ಬೆಂಗಳೂರು ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟದಿಂದ ಅಸ್ತು

    ಬೆಂಗಳೂರನ್ನ ಐದು ವಿಭಾಗಗಳನ್ನಾಗಿ ಮಾಡುವ ವಿಧೇಯಕಕ್ಕೆ ಒಪ್ಪಿಗೆ

    ನಾಳೆಯೇ ಈ ಕುರಿತು ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಸಾಧ್ಯತೆ

ರಾಜ್ಯ ರಾಜಧಾನಿ ಬೆಂಗಳೂರನ್ನು ಐದು ಭಾಗವನ್ನಾಗಿ ಮಾಡುವ ವಿಧೇಯಕಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವುದಕ್ಕೂ ಅನುಮೋದನೆ ದೊರಕಿದೆ. ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ ಮಾಡಲು ನಿರ್ಧಾರ ಮಾಡಲಾಗಿದೆ. ನಾಳೆಯೇ ವಿಧಾನಸಭೆಯಲ್ಲಿ ಈ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರು IT ಉದ್ಯೋಗಿಗಳಿಗೆ 14 ಗಂಟೆ ಕೆಲಸ.. ಹೋರಾಟದ ಬಳಿಕ ರಾಜ್ಯ ಸರ್ಕಾರದ ನಿಲುವೇನು?

ಸಿಲಿಕಾನ್​ ಸಿಟಿ ಬೆಂಗಳೂರಿನ ಆಡಳಿತ ನಿರ್ವಹಣೆಗೆ ಈಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬದಲು ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ ರಚಿಸುವುದು. ಬೆಂಗಳೂರಿನ ಅಭಿವೃದ್ಧಿ ಯೋಜನೆಗಳು ಮತ್ತು ಹಣಕಾಸು ನಿರ್ವಹಣೆಯಲ್ಲಿ ಉನ್ನತ ಅಧಿಕಾರ ಹೊಂದಿರುವ ಈ ಪ್ರಾಧಿಕಾರಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಎರಡನೇ ಹಂತದಲ್ಲಿ ಈ ಪ್ರಾಧಿಕಾರದ ಅಡಿಯಲ್ಲಿ ಬಿಬಿಎಂಪಿಯನ್ನು ವಿಭಜಿಸಿ ಸರ್ಕಾರ ರಚಿಸುವ ಹೊಸ ಪಾಲಿಕೆಗಳು ಇರಲಿವೆ. ಪ್ರತಿ ಪಾಲಿಕೆಗೂ ಪ್ರತ್ಯೇಕ ಮೇಯರ್‌, ಉಪಮೇಯರ್‌ ಸೇರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದ ಆಡಳಿತ ವ್ಯವಸ್ಥೆ ಇರುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಬೆಂಗಳೂರು 5 ಭಾಗ ಮಾಡಲು ಸರ್ಕಾರ ನಿರ್ಧಾರ.. ಸಿಎಂ ಸಂಪುಟ ಸಭೆಯಲ್ಲಿ ಅಸ್ತು!

https://newsfirstlive.com/wp-content/uploads/2024/03/Siddaramaiah-24.jpg

    ಬೆಂಗಳೂರು ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟದಿಂದ ಅಸ್ತು

    ಬೆಂಗಳೂರನ್ನ ಐದು ವಿಭಾಗಗಳನ್ನಾಗಿ ಮಾಡುವ ವಿಧೇಯಕಕ್ಕೆ ಒಪ್ಪಿಗೆ

    ನಾಳೆಯೇ ಈ ಕುರಿತು ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಸಾಧ್ಯತೆ

ರಾಜ್ಯ ರಾಜಧಾನಿ ಬೆಂಗಳೂರನ್ನು ಐದು ಭಾಗವನ್ನಾಗಿ ಮಾಡುವ ವಿಧೇಯಕಕ್ಕೆ ಸಚಿವ ಸಂಪುಟದಿಂದ ಒಪ್ಪಿಗೆ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವುದಕ್ಕೂ ಅನುಮೋದನೆ ದೊರಕಿದೆ. ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ ಮಾಡಲು ನಿರ್ಧಾರ ಮಾಡಲಾಗಿದೆ. ನಾಳೆಯೇ ವಿಧಾನಸಭೆಯಲ್ಲಿ ಈ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರು IT ಉದ್ಯೋಗಿಗಳಿಗೆ 14 ಗಂಟೆ ಕೆಲಸ.. ಹೋರಾಟದ ಬಳಿಕ ರಾಜ್ಯ ಸರ್ಕಾರದ ನಿಲುವೇನು?

ಸಿಲಿಕಾನ್​ ಸಿಟಿ ಬೆಂಗಳೂರಿನ ಆಡಳಿತ ನಿರ್ವಹಣೆಗೆ ಈಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬದಲು ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ ರಚಿಸುವುದು. ಬೆಂಗಳೂರಿನ ಅಭಿವೃದ್ಧಿ ಯೋಜನೆಗಳು ಮತ್ತು ಹಣಕಾಸು ನಿರ್ವಹಣೆಯಲ್ಲಿ ಉನ್ನತ ಅಧಿಕಾರ ಹೊಂದಿರುವ ಈ ಪ್ರಾಧಿಕಾರಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುತ್ತಾರೆ. ಎರಡನೇ ಹಂತದಲ್ಲಿ ಈ ಪ್ರಾಧಿಕಾರದ ಅಡಿಯಲ್ಲಿ ಬಿಬಿಎಂಪಿಯನ್ನು ವಿಭಜಿಸಿ ಸರ್ಕಾರ ರಚಿಸುವ ಹೊಸ ಪಾಲಿಕೆಗಳು ಇರಲಿವೆ. ಪ್ರತಿ ಪಾಲಿಕೆಗೂ ಪ್ರತ್ಯೇಕ ಮೇಯರ್‌, ಉಪಮೇಯರ್‌ ಸೇರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದ ಆಡಳಿತ ವ್ಯವಸ್ಥೆ ಇರುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More