'ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್' ಶೋನಲ್ಲಿ ಅನುಶ್ರೀ ಕಣ್ಣೀರು
ಒಂದು ಮಾತು ಕೇಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ನಿರೂಪಕಿ, ನಟಿ ಅನುಶ್ರೀ
ಆ್ಯಂಕರ್ ಅನುಶ್ರೀ ಕಣ್ಣೀರಿಗೆ ಶೋನಲ್ಲಿ ಭಾಗಿಯಾಗಿದ್ದ ಎಲ್ಲರೂ ಭಾವುಕ
ಕನ್ನಡದ ಸ್ಟಾರ್ ನಿರೂಪಕಿ ಅನುಶ್ರೀ ಅವರ ಮುದ್ದಾದ ಮಾತು ಯಾರಿಗೇ ತಾನೇ ಇಷ್ಟ ಆಗೋದಿಲ್ಲ ಹೇಳಿ. ಕನ್ನಡ ಕಿರುತೆರೆ ಲೋಕದಲ್ಲಿ ಆ್ಯಂಕರ್ ಆಗಿ ಮಿಂಚುತ್ತಿರುವ ನಟಿ, ನಿರೂಪಕಿ ಅನುಶ್ರೀ ಅವರು ಒಂದಲ್ಲಾ ಒಂದು ವಿಚಾರದ ಬಗ್ಗೆ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಚಟಪಟ ಅಂತ ಮಾತನಾಡುವ ಅನುಶ್ರೀ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಇದನ್ನೂ ಓದಿ: ಮನೆ ಊಟಕ್ಕೆ ಹಂಬಲಿಸಿದ್ದ ದಾಸನಿಗೆ ಆಘಾತ; ದರ್ಶನ್ ಅರ್ಜಿ ವಜಾ ಆಗಿದ್ದಕ್ಕೆ 3 ಕಾರಣಗಳಿವೆ; ಏನದು?
ಸದ್ಯ ಅನುಶ್ರೀ ಅವರು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿದ್ದಾರೆ. ಆದರೆ ಕಳೆದ ಸಂಚಿಕೆಯಲ್ಲಿ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ರಿಯಾಲಿಟಿ ಶೋನಲ್ಲಿ ಒಂದು ಸ್ಕಿಟ್ ಮಾಡಲಾಗಿದೆ. ಟೈಮ್ ಟ್ರಾವೆಲ್ ಮೆಷಿನ್ ಕುರಿತಾದ ಕಾನ್ಸೆಪ್ಟ್ನಿಂದ ಸ್ಕಿಟ್ ರಚನೆಯಾಗಿತ್ತು. ಆ ಟೈಮ್ ಮೆಷಿನ್ ಸ್ಕಿಟ್ನಲ್ಲಿ ಜೂನಿಯರ್ ಪುನೀತ್ ರಾಜ್ಕುಮಾರ್ ಅವರು ಬಂದಿದ್ದರು. ಇದನ್ನೂ ನೋಡಿದ ಕೂಡಲೇ ಶೋನಲ್ಲಿ ಭಾಗಿಯಾಗಿದ್ದ ಎಲ್ಲರೂ ಭಾವುಕರಾಗಿದ್ದಾರೆ.
View this post on Instagram
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗುತ್ತಿವೆ. ಆದರೆ ಇನ್ನೂ ಕೂಡ ಅವರ ಅಗಲಿಕೆಯ ನೋವು ಕಡಿಮೆ ಆಗಿಲ್ಲ. ಈಗಲೂ ‘ಅಪ್ಪು’ ಎಂಬ ಹೆಸರು ಕಿವಿ ಮೇಲೆ ಬಿದ್ದಾಗ ಫ್ಯಾನ್ಸ್ ಕಣ್ಣೀರು ಇಡುತ್ತಾರೆ. ಅಷ್ಟರ ಮಟ್ಟಿಗೆ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಆದರೆ ವೇದಿಕೆಗೆ ಜೂನಿಯರ್ ಪುನೀತ್ ರಾಜ್ಕುಮಾರ್ ಅವರು ಎಂಟ್ರಿ ಕೊಡುತ್ತಿದ್ದಂತೆ ನಿರೂಪಕಿ ಅನುಶ್ರೀ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ವಾಪಸ್ ಬಂದ್ಬಿಡಿ ಸಾರ್ ಪ್ಲೀಸ್ ಅಂತ ಹೇಳಿ ಅವರನ್ನು ತಬ್ಬಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಎಂದರೆ ಅನುಶ್ರೀ ಅವರಿಗೆ ತುಂಬಾ ಇಷ್ಟ. ಅವರ ದೊಡ್ಡ ಅಭಿಮಾನಿ ಕೂಡ ಹೌದು. ಹೀಗಾಗಿ ವೇದಿಕೆ ಮೇಲೆ ಜೂನಿಯರ್ ಪುನೀತ್ ರಾಜ್ಕುಮಾರ್ ಅವರು ಮಾತಾಡುತ್ತಿದ್ದಂತೆ ಅತ್ತಿದ್ದಾರೆ. ಜೊತೆಗೆ ನಟಿ ನಯನಾ ಕಣ್ಣೀರಿಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
'ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್' ಶೋನಲ್ಲಿ ಅನುಶ್ರೀ ಕಣ್ಣೀರು
ಒಂದು ಮಾತು ಕೇಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ನಿರೂಪಕಿ, ನಟಿ ಅನುಶ್ರೀ
ಆ್ಯಂಕರ್ ಅನುಶ್ರೀ ಕಣ್ಣೀರಿಗೆ ಶೋನಲ್ಲಿ ಭಾಗಿಯಾಗಿದ್ದ ಎಲ್ಲರೂ ಭಾವುಕ
ಕನ್ನಡದ ಸ್ಟಾರ್ ನಿರೂಪಕಿ ಅನುಶ್ರೀ ಅವರ ಮುದ್ದಾದ ಮಾತು ಯಾರಿಗೇ ತಾನೇ ಇಷ್ಟ ಆಗೋದಿಲ್ಲ ಹೇಳಿ. ಕನ್ನಡ ಕಿರುತೆರೆ ಲೋಕದಲ್ಲಿ ಆ್ಯಂಕರ್ ಆಗಿ ಮಿಂಚುತ್ತಿರುವ ನಟಿ, ನಿರೂಪಕಿ ಅನುಶ್ರೀ ಅವರು ಒಂದಲ್ಲಾ ಒಂದು ವಿಚಾರದ ಬಗ್ಗೆ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಚಟಪಟ ಅಂತ ಮಾತನಾಡುವ ಅನುಶ್ರೀ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಇದನ್ನೂ ಓದಿ: ಮನೆ ಊಟಕ್ಕೆ ಹಂಬಲಿಸಿದ್ದ ದಾಸನಿಗೆ ಆಘಾತ; ದರ್ಶನ್ ಅರ್ಜಿ ವಜಾ ಆಗಿದ್ದಕ್ಕೆ 3 ಕಾರಣಗಳಿವೆ; ಏನದು?
ಸದ್ಯ ಅನುಶ್ರೀ ಅವರು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿದ್ದಾರೆ. ಆದರೆ ಕಳೆದ ಸಂಚಿಕೆಯಲ್ಲಿ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ರಿಯಾಲಿಟಿ ಶೋನಲ್ಲಿ ಒಂದು ಸ್ಕಿಟ್ ಮಾಡಲಾಗಿದೆ. ಟೈಮ್ ಟ್ರಾವೆಲ್ ಮೆಷಿನ್ ಕುರಿತಾದ ಕಾನ್ಸೆಪ್ಟ್ನಿಂದ ಸ್ಕಿಟ್ ರಚನೆಯಾಗಿತ್ತು. ಆ ಟೈಮ್ ಮೆಷಿನ್ ಸ್ಕಿಟ್ನಲ್ಲಿ ಜೂನಿಯರ್ ಪುನೀತ್ ರಾಜ್ಕುಮಾರ್ ಅವರು ಬಂದಿದ್ದರು. ಇದನ್ನೂ ನೋಡಿದ ಕೂಡಲೇ ಶೋನಲ್ಲಿ ಭಾಗಿಯಾಗಿದ್ದ ಎಲ್ಲರೂ ಭಾವುಕರಾಗಿದ್ದಾರೆ.
View this post on Instagram
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗುತ್ತಿವೆ. ಆದರೆ ಇನ್ನೂ ಕೂಡ ಅವರ ಅಗಲಿಕೆಯ ನೋವು ಕಡಿಮೆ ಆಗಿಲ್ಲ. ಈಗಲೂ ‘ಅಪ್ಪು’ ಎಂಬ ಹೆಸರು ಕಿವಿ ಮೇಲೆ ಬಿದ್ದಾಗ ಫ್ಯಾನ್ಸ್ ಕಣ್ಣೀರು ಇಡುತ್ತಾರೆ. ಅಷ್ಟರ ಮಟ್ಟಿಗೆ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಆದರೆ ವೇದಿಕೆಗೆ ಜೂನಿಯರ್ ಪುನೀತ್ ರಾಜ್ಕುಮಾರ್ ಅವರು ಎಂಟ್ರಿ ಕೊಡುತ್ತಿದ್ದಂತೆ ನಿರೂಪಕಿ ಅನುಶ್ರೀ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ವಾಪಸ್ ಬಂದ್ಬಿಡಿ ಸಾರ್ ಪ್ಲೀಸ್ ಅಂತ ಹೇಳಿ ಅವರನ್ನು ತಬ್ಬಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ ಎಂದರೆ ಅನುಶ್ರೀ ಅವರಿಗೆ ತುಂಬಾ ಇಷ್ಟ. ಅವರ ದೊಡ್ಡ ಅಭಿಮಾನಿ ಕೂಡ ಹೌದು. ಹೀಗಾಗಿ ವೇದಿಕೆ ಮೇಲೆ ಜೂನಿಯರ್ ಪುನೀತ್ ರಾಜ್ಕುಮಾರ್ ಅವರು ಮಾತಾಡುತ್ತಿದ್ದಂತೆ ಅತ್ತಿದ್ದಾರೆ. ಜೊತೆಗೆ ನಟಿ ನಯನಾ ಕಣ್ಣೀರಿಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ