newsfirstkannada.com

ಹಾಸನದಲ್ಲಿ ಬೆಳ್ಳಂಬೆಳಗ್ಗೆ ಅನಾಹುತ.. ರೈಲು ಬರುತ್ತಿದ್ದಾಗಲೇ ಕುಸಿದ ಗುಡ್ಡ, ಹಳಿಯಿಂದ ಜಾರಿದ ಟ್ರೈನ್..

Share :

Published July 27, 2024 at 10:23am

Update July 27, 2024 at 10:24am

    ಬೆಳಗ್ಗೆ 5.45ರ ಸುಮಾರಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ

    ಹಾಸನ-ಬೆಂಗಳೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ

    ಮಣ್ಣು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಮುಕ್ತ ಅವಕಾಶ

ಹಾಸನ: ಇಲ್ಲಿನ ಶಾಂತಿಗ್ರಾಮದ ಬಳಿ ಗೂಡ್ಸ್ ರೈಲು ಹಳಿ ತಪ್ಪಿ ಅನಾಹುತ ಸಂಭವಿಸಿದೆ. ರೈಲು ಚಲಿಸುತ್ತಿರುವಾಗಲೇ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ಟ್ರೈನ್ ಹಳಿಯಿಂದ ಜಾರಿದೆ.

ಇಂದು ಮುಂಜಾನೆ 5.45ರ ಸುಮಾರಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಯಾವುದೇ ಸಾವು, ನೋವು ಸಂಭವಿಸಿಲ್ಲ.

ಕೊನೆಗೆ ರೈಲ್ವೇ ಸಿಬ್ಬಂದಿ ಟ್ರ್ಯಾಕ್ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ ರೈಲು ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಹಾಸನ ಬೆಂಗಳೂರು, ಬೆಂಗಳೂರು-ಹಾಸನ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆ ಆಗಿದೆ.

ಇದನ್ನೂ ಓದಿ:Breaking: ಕುಸಿದು ಬಿದ್ದ 3 ಅಂತಸ್ತಿನ ಕಟ್ಟಡ.. 24 ಕುಟುಂಬ ವಾಸವಿದ್ದ ಮಾಹಿತಿ.. ಭಾರೀ ಸಾವು ನೋವಿನ ಆತಂಕ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನದಲ್ಲಿ ಬೆಳ್ಳಂಬೆಳಗ್ಗೆ ಅನಾಹುತ.. ರೈಲು ಬರುತ್ತಿದ್ದಾಗಲೇ ಕುಸಿದ ಗುಡ್ಡ, ಹಳಿಯಿಂದ ಜಾರಿದ ಟ್ರೈನ್..

https://newsfirstlive.com/wp-content/uploads/2024/07/TRAIN.jpg

    ಬೆಳಗ್ಗೆ 5.45ರ ಸುಮಾರಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ

    ಹಾಸನ-ಬೆಂಗಳೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ

    ಮಣ್ಣು ತೆರವುಗೊಳಿಸಿ ರೈಲುಗಳ ಸಂಚಾರಕ್ಕೆ ಮುಕ್ತ ಅವಕಾಶ

ಹಾಸನ: ಇಲ್ಲಿನ ಶಾಂತಿಗ್ರಾಮದ ಬಳಿ ಗೂಡ್ಸ್ ರೈಲು ಹಳಿ ತಪ್ಪಿ ಅನಾಹುತ ಸಂಭವಿಸಿದೆ. ರೈಲು ಚಲಿಸುತ್ತಿರುವಾಗಲೇ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ಟ್ರೈನ್ ಹಳಿಯಿಂದ ಜಾರಿದೆ.

ಇಂದು ಮುಂಜಾನೆ 5.45ರ ಸುಮಾರಿಗೆ ಟ್ರ್ಯಾಕ್ ಮೇಲೆ ಮಣ್ಣು ಕುಸಿದಿದೆ. ಪರಿಣಾಮ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಯಾವುದೇ ಸಾವು, ನೋವು ಸಂಭವಿಸಿಲ್ಲ.

ಕೊನೆಗೆ ರೈಲ್ವೇ ಸಿಬ್ಬಂದಿ ಟ್ರ್ಯಾಕ್ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ ರೈಲು ಸಂಚಾರಕ್ಕೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಹಾಸನ ಬೆಂಗಳೂರು, ಬೆಂಗಳೂರು-ಹಾಸನ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆ ಆಗಿದೆ.

ಇದನ್ನೂ ಓದಿ:Breaking: ಕುಸಿದು ಬಿದ್ದ 3 ಅಂತಸ್ತಿನ ಕಟ್ಟಡ.. 24 ಕುಟುಂಬ ವಾಸವಿದ್ದ ಮಾಹಿತಿ.. ಭಾರೀ ಸಾವು ನೋವಿನ ಆತಂಕ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More