ಸ್ವಗ್ರಾಮ ಸೋಮನಾಳದಲ್ಲಿ ಪಿಎಸ್ಐ ಪರಶುರಾಂ್ ಅಂತ್ಯಕ್ರಿಯೆ
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ, ನ್ಯಾಯಕ್ಕಾಗಿ ಆಗ್ರಹ
ಆಕ್ರೋಶ ಭುಗಿಲೆದ್ದ ಬೆನ್ನಲ್ಲಿಯೇ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ
ಯಾದಗಿರಿ ಪಿಎಸ್ಐ ಪರಶುರಾಮ ಅವರ ಅನುಮಾನಾಸ್ಪದ ಸಾವು ರಾಜ್ಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿದೆ. ಪ್ರತಿಭಟನೆ, ಆಕ್ರೋಶ ಇದೆಲ್ಲದರ ನಡುವೆಯೇ ಈಗ ಪಿಎಸ್ಐ ಪರಶುರಾಮ ಅಂತ್ಯಕ್ರಿಯೆ ಅವರ ಹುಟ್ಟೂರಾದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆದಿದೆ. ಮೃತದೇಹ ಹುಟ್ಟೂರಿಗೆ ಬಂದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪಿಎಸ್ಐ ಅನುಮಾನಾಸ್ಪದ ಸಾವು ಖಂಡಿಸಿ ಸ್ವಗ್ರಾಮದಲ್ಲಿ ಪ್ರತಿಭಟನೆಯೂ ನಡೆಯಿತು. ಗ್ರಾಮಕ್ಕೆ ಸಚಿವ ಶಿವರಾಜ್ ತಂಗಡಗಿ ಬಂದು ಅಂತಿಮ ದರ್ಶನ ಪಡೆದರು. ಈ ವೇಳೆ ನಮಗೆ ನ್ಯಾಯ ಬೇಕು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಲಾಯಿತು.
ಇದನ್ನೂ ಓದಿ:ಯಾದಗಿರಿ PSI ಅನುಮಾನಾಸ್ಪದ ಸಾವಿಗೆ ದೊಡ್ಡ ಟ್ವಿಸ್ಟ್.. ಅಸಲಿಗೆ ಆಗಿದ್ದೇನು? ಕಂಪ್ಲೀಟ್ ಮಾಹಿತಿ ಇಲ್ಲಿದೆ
ಯಾದಗಿರಿಯಿಂದ ಸೋಮನಾಳಕ್ಕೆ ಜೀರೋ ಟ್ರಾಫಿಕ್ನಲ್ಲಿ ಮೃತದೇಹ ಪೊಲೀಸ್ ಇಲಾಖೆಯವರು ತೆಗೆದುಕೊಂಡು ಬಂದರು. ಸರ್ಕಾರಿ ಶಾಲೆಯ ಎದುರುಗಡೆ ಇರುವ ಅವರ ಜಮೀನಿನಲ್ಲಿ ಪರಶುರಾಮ್ ಅವರ ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು. ಈ ವೇಳೆ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ: BREAKING: ಪಿಎಸ್ಐ ಪರಶುರಾಮ ಸಾವಿನ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಕಾಂಗ್ರೆಸ್ ಶಾಸಕ ಅರೆಸ್ಟ್ ಆಗ್ತಾರಾ?
ಆಕ್ರೋಶ ಭುಗಿಲೇಳುತ್ತಿದ್ದಂತೆ CID ತನಿಖೆಗೆ ಆದೇಶ
PSI ಪರಶುರಾಮ್ ಅವರ ಅನುಮಾನಾಸ್ಪದ ಸಾವು ರಾಜ್ಯದ ಹಲವೆಡೆ ದೊಡ್ಡ ಮಟ್ಟದ ಆಕ್ರೋಶವನ್ನೇ ಬಿತ್ತಿತ್ತು. ಪರಶುರಾಮ್ ಪತ್ನಿ ಶ್ವೇತಾ ಅವರು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತನ್ನೂರ್ ಹಾಗೂ ಅವರ ಪುತ್ರನ ವಿರುದ್ಧವೇ ನೇರಾನೇರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರಶುರಾಮ್ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದೆ. ಕೂಲಂಕುಷ ತನಿಖೆಗೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆಯಲಾಗಿದ್ದು, ಶಾಸಕ ಚೆನ್ನಾರೆಡ್ಡಿ ಹಾಗೂ ಅವರ ಪುತ್ರನ ಮೇಲೆ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಶಾಸಕರ ಮೇಲೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ ಹೊರಬಿದ್ದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ವಗ್ರಾಮ ಸೋಮನಾಳದಲ್ಲಿ ಪಿಎಸ್ಐ ಪರಶುರಾಂ್ ಅಂತ್ಯಕ್ರಿಯೆ
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ, ನ್ಯಾಯಕ್ಕಾಗಿ ಆಗ್ರಹ
ಆಕ್ರೋಶ ಭುಗಿಲೆದ್ದ ಬೆನ್ನಲ್ಲಿಯೇ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ
ಯಾದಗಿರಿ ಪಿಎಸ್ಐ ಪರಶುರಾಮ ಅವರ ಅನುಮಾನಾಸ್ಪದ ಸಾವು ರಾಜ್ಯದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿದೆ. ಪ್ರತಿಭಟನೆ, ಆಕ್ರೋಶ ಇದೆಲ್ಲದರ ನಡುವೆಯೇ ಈಗ ಪಿಎಸ್ಐ ಪರಶುರಾಮ ಅಂತ್ಯಕ್ರಿಯೆ ಅವರ ಹುಟ್ಟೂರಾದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆದಿದೆ. ಮೃತದೇಹ ಹುಟ್ಟೂರಿಗೆ ಬಂದಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪಿಎಸ್ಐ ಅನುಮಾನಾಸ್ಪದ ಸಾವು ಖಂಡಿಸಿ ಸ್ವಗ್ರಾಮದಲ್ಲಿ ಪ್ರತಿಭಟನೆಯೂ ನಡೆಯಿತು. ಗ್ರಾಮಕ್ಕೆ ಸಚಿವ ಶಿವರಾಜ್ ತಂಗಡಗಿ ಬಂದು ಅಂತಿಮ ದರ್ಶನ ಪಡೆದರು. ಈ ವೇಳೆ ನಮಗೆ ನ್ಯಾಯ ಬೇಕು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಲಾಯಿತು.
ಇದನ್ನೂ ಓದಿ:ಯಾದಗಿರಿ PSI ಅನುಮಾನಾಸ್ಪದ ಸಾವಿಗೆ ದೊಡ್ಡ ಟ್ವಿಸ್ಟ್.. ಅಸಲಿಗೆ ಆಗಿದ್ದೇನು? ಕಂಪ್ಲೀಟ್ ಮಾಹಿತಿ ಇಲ್ಲಿದೆ
ಯಾದಗಿರಿಯಿಂದ ಸೋಮನಾಳಕ್ಕೆ ಜೀರೋ ಟ್ರಾಫಿಕ್ನಲ್ಲಿ ಮೃತದೇಹ ಪೊಲೀಸ್ ಇಲಾಖೆಯವರು ತೆಗೆದುಕೊಂಡು ಬಂದರು. ಸರ್ಕಾರಿ ಶಾಲೆಯ ಎದುರುಗಡೆ ಇರುವ ಅವರ ಜಮೀನಿನಲ್ಲಿ ಪರಶುರಾಮ್ ಅವರ ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದರು. ಈ ವೇಳೆ ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ: BREAKING: ಪಿಎಸ್ಐ ಪರಶುರಾಮ ಸಾವಿನ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್; ಕಾಂಗ್ರೆಸ್ ಶಾಸಕ ಅರೆಸ್ಟ್ ಆಗ್ತಾರಾ?
ಆಕ್ರೋಶ ಭುಗಿಲೇಳುತ್ತಿದ್ದಂತೆ CID ತನಿಖೆಗೆ ಆದೇಶ
PSI ಪರಶುರಾಮ್ ಅವರ ಅನುಮಾನಾಸ್ಪದ ಸಾವು ರಾಜ್ಯದ ಹಲವೆಡೆ ದೊಡ್ಡ ಮಟ್ಟದ ಆಕ್ರೋಶವನ್ನೇ ಬಿತ್ತಿತ್ತು. ಪರಶುರಾಮ್ ಪತ್ನಿ ಶ್ವೇತಾ ಅವರು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತನ್ನೂರ್ ಹಾಗೂ ಅವರ ಪುತ್ರನ ವಿರುದ್ಧವೇ ನೇರಾನೇರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪರಶುರಾಮ್ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದೆ. ಕೂಲಂಕುಷ ತನಿಖೆಗೆ ಸಿಐಡಿ ಡಿಜಿಪಿಗೆ ಗೃಹ ಇಲಾಖೆ ಪತ್ರ ಬರೆಯಲಾಗಿದ್ದು, ಶಾಸಕ ಚೆನ್ನಾರೆಡ್ಡಿ ಹಾಗೂ ಅವರ ಪುತ್ರನ ಮೇಲೆ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಶಾಸಕರ ಮೇಲೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ ಹೊರಬಿದ್ದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ