newsfirstkannada.com

ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು ಸಾವು, ವರನಿಗೆ ಗಂಭೀರ ಗಾಯ; ಇಬ್ಬರ ಮಧ್ಯೆ ಆಗಿದ್ದೇನು?

Share :

Published August 8, 2024 at 6:49am

    ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ

    ಮದುವೆಯಾದ ಕೆಲ‌ವೇ ಗಂಟೆಗಳ ನಂತರ ರೂಂಗೆ ಹೋಗಿದ್ದ ದಂಪತಿ

    ಘಟನಾ ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರ ಭೇಟಿ ಪರಿಶೀಲನೆ

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರರಿಬ್ಬರು ಪರಸ್ಪರ ಹೊಡೆದಾಡಿಕೊಂಡಿರೋ ಘಟನೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿಶ್ರೀ ಮೃತ ದುರ್ದೈವಿ.

ಇದನ್ನೂ ಓದಿ: ‘13 ವರ್ಷದ ಹಿಂದೆಯೇ ಸತ್ತ ನನ್ನ ಗಂಡನಿಂದ ಗರ್ಭಿಣಿಯಾದೆ’- ಮಹಿಳೆ ಶಾಕಿಂಗ್​ ಹೇಳಿಕೆ

ವಧು ಲಿಖಿತಶ್ರೀ ಹಾಗೂ ವರ ನವೀನ್ ಇಬ್ಬರು ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ನಿನ್ನೆ ಮದುವೆಯಾಗಿದ್ದರು. ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದ ನವೀನ್ ಹಾಗೂ ಲಿಖಿತಶ್ರೀ ಬೈನಪಲ್ಲಿಯವರಾಗಿದ್ದರು. ಈ ಇಬ್ಬರ ಮದುವೆ ಮುಗಿದ ಬಳಿಕ ಇಬ್ಬರೂ ರೂಮಿಗೆ ಹೋಗಿದ್ದಾರೆ. ಆದರೆ ಅಲ್ಲಿ ಅದೇನಾಯ್ತೋ ಗೊತ್ತಿಲ್ಲಾ, ನವ ದಂಪತಿ ಮಧ್ಯೆ ಜಗಳ ಆರಂಭವಾಗಿದೆ. ಇದೇ ಕೋಪದಲ್ಲಿದ್ದ ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆ ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಧು ಲಿಖಿತಶ್ರೀ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ಹಾಗೂ ಕೆಜಿಎಫ್ ಎಸ್‌ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು ಸಾವು, ವರನಿಗೆ ಗಂಭೀರ ಗಾಯ; ಇಬ್ಬರ ಮಧ್ಯೆ ಆಗಿದ್ದೇನು?

https://newsfirstlive.com/wp-content/uploads/2024/08/kolar.jpg

    ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ

    ಮದುವೆಯಾದ ಕೆಲ‌ವೇ ಗಂಟೆಗಳ ನಂತರ ರೂಂಗೆ ಹೋಗಿದ್ದ ದಂಪತಿ

    ಘಟನಾ ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರ ಭೇಟಿ ಪರಿಶೀಲನೆ

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರರಿಬ್ಬರು ಪರಸ್ಪರ ಹೊಡೆದಾಡಿಕೊಂಡಿರೋ ಘಟನೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿಶ್ರೀ ಮೃತ ದುರ್ದೈವಿ.

ಇದನ್ನೂ ಓದಿ: ‘13 ವರ್ಷದ ಹಿಂದೆಯೇ ಸತ್ತ ನನ್ನ ಗಂಡನಿಂದ ಗರ್ಭಿಣಿಯಾದೆ’- ಮಹಿಳೆ ಶಾಕಿಂಗ್​ ಹೇಳಿಕೆ

ವಧು ಲಿಖಿತಶ್ರೀ ಹಾಗೂ ವರ ನವೀನ್ ಇಬ್ಬರು ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ನಿನ್ನೆ ಮದುವೆಯಾಗಿದ್ದರು. ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದ ನವೀನ್ ಹಾಗೂ ಲಿಖಿತಶ್ರೀ ಬೈನಪಲ್ಲಿಯವರಾಗಿದ್ದರು. ಈ ಇಬ್ಬರ ಮದುವೆ ಮುಗಿದ ಬಳಿಕ ಇಬ್ಬರೂ ರೂಮಿಗೆ ಹೋಗಿದ್ದಾರೆ. ಆದರೆ ಅಲ್ಲಿ ಅದೇನಾಯ್ತೋ ಗೊತ್ತಿಲ್ಲಾ, ನವ ದಂಪತಿ ಮಧ್ಯೆ ಜಗಳ ಆರಂಭವಾಗಿದೆ. ಇದೇ ಕೋಪದಲ್ಲಿದ್ದ ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆ ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಧು ಲಿಖಿತಶ್ರೀ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ಹಾಗೂ ಕೆಜಿಎಫ್ ಎಸ್‌ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More