ಆ್ಯಂಬುಲೆನ್ಸ್ ಕೆಟ್ಟು ನಿಂತಿದ್ದರಿಂದ ರೋಗಿ ಪರದಾಟ
ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಭಯಂಕರ ಮಳೆ
ರಸ್ತೆಗಳೆಲ್ಲ ಜಲಾವೃತ, ವಾಹನ ಸವಾರರಿಗೆ ಬಿಗ್ ಶಾಕ್
ಬೆಂಗಳೂರು: ನಿನ್ನೆ ರಾತ್ರಿ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರಿದ್ದಿದ್ದಾನೆ. ನಗರದ ಕೆ.ಆರ್.ಮಾರ್ಕೆಟ್, ಜೆ.ಸಿ ರೋಡ್, ವಿಜಯನಗರ, ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಏರಿಯಾಗಳಲ್ಲಿ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಏನೆಲ್ಲ ಅನಾಹುತ ಆಗಿದೆ..?
ಮಳೆಯಿಂದಾಗಿ ಓಕುಳಿಪುರಂ ಅಂಡರ್ ಪಾಸ್ನಲ್ಲಿ ನೀರು ನಿಂತಿದೆ. ಪರಿಣಾಮ ಅಂಡರ್ಪಾಸ್ನಲ್ಲಿ ಆ್ಯಂಬುಲೆನ್ಸ್ ಕೆಟ್ಟು ನಿಂತಿದೆ. ಇದರಿಂದ ಹಾಸನದಿಂದ ಬಂದಿದ್ದ ರೋಗಿ ಪರದಾಡುವಂತೆ ಆಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಬೆಂಗಳೂರಲ್ಲಿ ಭಾರೀ ಮಳೆ.. ರಸ್ತೆಗಳೆಲ್ಲ ಮುಳುಗಡೆ.. ಬೆಳ್ಳಂಬೆಳಗ್ಗೆ ಅನಾಹುತದ ಆತಂಕ..
ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಂಭಾಗ ರಸ್ತೆ ಸಂಪೂರ್ಣ ನೀರಿನಲ್ಲಿ ಮುಳುಗಡೆ ಆಗಿದೆ. ರಸ್ತೆಯಲ್ಲಿ ಸುಮಾರು ಎರಡು ಅಡಿಯಷ್ಟು ನೀರು ನಿಂತಿದೆ. ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸವಾರರು ಪರದಾಟ ನಡೆಸ್ತಿದ್ದಾರೆ. ಸಿಲ್ಕ್ ಬೋರ್ಡ್ನಲ್ಲಿ ಕಾರು ಒಂದು ನೀರಲ್ಲಿ ಮುಳುಗಿದೆ.
ಇನ್ನು ಕೆ.ಆರ್.ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಸಂಪೂರ್ಣ ಜಲ ದಿಗ್ಬಂಧನ ಆಗಿದೆ. ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೇಪೇಟೆ, ಕಾಟನ್ ಪೇಟೆ ರಸ್ತೆಯಲ್ಲಿ ಸಂಪೂರ್ಣ ಜಾಲವೃತವಾಗಿದೆ. ಸುಲ್ತಾನ್ ಪೇಟೆ ಮುಖ್ಯ ರಸ್ತೆ ಸಂಪೂರ್ಣ ರಸ್ತೆ ಬಂದ್ ಆಗಿದೆ. ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ.
ಇದನ್ನೂ ಓದಿ:ಯಾರೂ ನಿರೀಕ್ಷೆ ಮಾಡಿರದ ನಿರ್ಧಾರ ತೆಗೆದುಕೊಂಡ ಸೂರ್ಯ, ಟೀಂ ಇಂಡಿಯಾದ ಸ್ಟಾರ್ಸ್ಗೆ ಬಿಗ್ ಶಾಕ್..!
ಮಧ್ಯ ರಾತ್ರಿ ಸುಮಾರು 2 ಗಂಟೆಗೆ ಶುರುವಾದ ಮಳೆ, ಎರಡ್ಮೂರು ಗಂಟೆಗಳ ಕಾಲ ಬಿಟ್ಟು ಬಿಡದೇ ಗುಡುಗು ಸಹಿತ ಮಳೆಯಾಗಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲ ಜಲಾವೃತವಾಗಿದೆ. ನೀರಿನಲ್ಲಿ ವಾಹನ ಸವಾರರು ಸಂಚರಿಸಲಾಗದೇ ಪರದಾಡುತ್ತಿದ್ದಾರೆ. ಬೆಳಗ್ಗೆ ಎದ್ದು ವಿವಿಧ ಆಫೀಸ್ಗಳಿಗೆ ಹೋಗುವ ಉದ್ಯೋಗಿಗಳು ಮಳೆಯಿಂದಾಗಿ ಕಿರಿಕಿರಿ ಅನುಭವಿಸ್ತಿದ್ದಾರೆ. ಬೆಂಗಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ, ಅಲ್ಲದೇ ಕೆಲವು ಅಪಾರ್ಟ್ಮೆಂಟ್ಗಳಲ್ಲೂ ನೀರು ನುಗ್ಗಿದೆ. ಜನರಿಗೆ ಭಾರೀ ತೊಂದರೆ ಆಗ್ತಿದೆ.
ಇದನ್ನೂ ಓದಿ:ಸುನಿತಾ ವಿಲಿಯಮ್ಸ್ ಕರೆತರಲು NASA ಹೊಸ ಪ್ಲಾನ್; ‘ಸೂಪರ್ ಮ್ಯಾನ್’ ಆಗಲಿದೆ ಎಲಾನ್ ಮಸ್ಕ್ನ SpaceX..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆ್ಯಂಬುಲೆನ್ಸ್ ಕೆಟ್ಟು ನಿಂತಿದ್ದರಿಂದ ರೋಗಿ ಪರದಾಟ
ಮಧ್ಯರಾತ್ರಿಯಿಂದ ಬೆಂಗಳೂರಲ್ಲಿ ಭಯಂಕರ ಮಳೆ
ರಸ್ತೆಗಳೆಲ್ಲ ಜಲಾವೃತ, ವಾಹನ ಸವಾರರಿಗೆ ಬಿಗ್ ಶಾಕ್
ಬೆಂಗಳೂರು: ನಿನ್ನೆ ರಾತ್ರಿ ಬೆಂಗಳೂರಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರಿದ್ದಿದ್ದಾನೆ. ನಗರದ ಕೆ.ಆರ್.ಮಾರ್ಕೆಟ್, ಜೆ.ಸಿ ರೋಡ್, ವಿಜಯನಗರ, ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಏರಿಯಾಗಳಲ್ಲಿ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಏನೆಲ್ಲ ಅನಾಹುತ ಆಗಿದೆ..?
ಮಳೆಯಿಂದಾಗಿ ಓಕುಳಿಪುರಂ ಅಂಡರ್ ಪಾಸ್ನಲ್ಲಿ ನೀರು ನಿಂತಿದೆ. ಪರಿಣಾಮ ಅಂಡರ್ಪಾಸ್ನಲ್ಲಿ ಆ್ಯಂಬುಲೆನ್ಸ್ ಕೆಟ್ಟು ನಿಂತಿದೆ. ಇದರಿಂದ ಹಾಸನದಿಂದ ಬಂದಿದ್ದ ರೋಗಿ ಪರದಾಡುವಂತೆ ಆಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಬೆಂಗಳೂರಲ್ಲಿ ಭಾರೀ ಮಳೆ.. ರಸ್ತೆಗಳೆಲ್ಲ ಮುಳುಗಡೆ.. ಬೆಳ್ಳಂಬೆಳಗ್ಗೆ ಅನಾಹುತದ ಆತಂಕ..
ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಂಭಾಗ ರಸ್ತೆ ಸಂಪೂರ್ಣ ನೀರಿನಲ್ಲಿ ಮುಳುಗಡೆ ಆಗಿದೆ. ರಸ್ತೆಯಲ್ಲಿ ಸುಮಾರು ಎರಡು ಅಡಿಯಷ್ಟು ನೀರು ನಿಂತಿದೆ. ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸವಾರರು ಪರದಾಟ ನಡೆಸ್ತಿದ್ದಾರೆ. ಸಿಲ್ಕ್ ಬೋರ್ಡ್ನಲ್ಲಿ ಕಾರು ಒಂದು ನೀರಲ್ಲಿ ಮುಳುಗಿದೆ.
ಇನ್ನು ಕೆ.ಆರ್.ಮಾರ್ಕೆಟ್ ಸುತ್ತಮುತ್ತ ರಸ್ತೆಗಳಲ್ಲಿ ಸಂಪೂರ್ಣ ಜಲ ದಿಗ್ಬಂಧನ ಆಗಿದೆ. ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೇಪೇಟೆ, ಕಾಟನ್ ಪೇಟೆ ರಸ್ತೆಯಲ್ಲಿ ಸಂಪೂರ್ಣ ಜಾಲವೃತವಾಗಿದೆ. ಸುಲ್ತಾನ್ ಪೇಟೆ ಮುಖ್ಯ ರಸ್ತೆ ಸಂಪೂರ್ಣ ರಸ್ತೆ ಬಂದ್ ಆಗಿದೆ. ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ.
ಇದನ್ನೂ ಓದಿ:ಯಾರೂ ನಿರೀಕ್ಷೆ ಮಾಡಿರದ ನಿರ್ಧಾರ ತೆಗೆದುಕೊಂಡ ಸೂರ್ಯ, ಟೀಂ ಇಂಡಿಯಾದ ಸ್ಟಾರ್ಸ್ಗೆ ಬಿಗ್ ಶಾಕ್..!
ಮಧ್ಯ ರಾತ್ರಿ ಸುಮಾರು 2 ಗಂಟೆಗೆ ಶುರುವಾದ ಮಳೆ, ಎರಡ್ಮೂರು ಗಂಟೆಗಳ ಕಾಲ ಬಿಟ್ಟು ಬಿಡದೇ ಗುಡುಗು ಸಹಿತ ಮಳೆಯಾಗಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲ ಜಲಾವೃತವಾಗಿದೆ. ನೀರಿನಲ್ಲಿ ವಾಹನ ಸವಾರರು ಸಂಚರಿಸಲಾಗದೇ ಪರದಾಡುತ್ತಿದ್ದಾರೆ. ಬೆಳಗ್ಗೆ ಎದ್ದು ವಿವಿಧ ಆಫೀಸ್ಗಳಿಗೆ ಹೋಗುವ ಉದ್ಯೋಗಿಗಳು ಮಳೆಯಿಂದಾಗಿ ಕಿರಿಕಿರಿ ಅನುಭವಿಸ್ತಿದ್ದಾರೆ. ಬೆಂಗಳೂರಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ, ಅಲ್ಲದೇ ಕೆಲವು ಅಪಾರ್ಟ್ಮೆಂಟ್ಗಳಲ್ಲೂ ನೀರು ನುಗ್ಗಿದೆ. ಜನರಿಗೆ ಭಾರೀ ತೊಂದರೆ ಆಗ್ತಿದೆ.
ಇದನ್ನೂ ಓದಿ:ಸುನಿತಾ ವಿಲಿಯಮ್ಸ್ ಕರೆತರಲು NASA ಹೊಸ ಪ್ಲಾನ್; ‘ಸೂಪರ್ ಮ್ಯಾನ್’ ಆಗಲಿದೆ ಎಲಾನ್ ಮಸ್ಕ್ನ SpaceX..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ