newsfirstkannada.com

ಕಾಲೇಜು ಹಾಸ್ಟೆಲ್‌ನಲ್ಲಿ ದುರಂತ.. ಮೈಸೂರಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಆಗಿದ್ದೇನು?

Share :

Published August 19, 2024 at 10:03pm

    ಊಟದ ನಂತರ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರು

    ಮಗಳ ಅನಾರೋಗ್ಯ ವಿಚಾರ ಪೋಷಕರ ಗಮನಕ್ಕೆ ತರಲಿಲ್ವಾ?

    ಪೋಷಕರು ನೋಡಲು ಬರುವುದಕ್ಕೂ ಮೊದಲೇ ಪುತ್ರಿ ಸಾವು

ಮೈಸೂರು: ಕಾಲೇಜು ಹಾಸ್ಟೆಲ್​​ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ನಡೆದಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ! ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ದಿಢೀರ್​ ಶಾಕ್.. ಝೀಕಾ ವೈರಸ್ ಪತ್ತೆ ​

ಇದನ್ನೂ ಓದಿ: ಬ್ಯಾಂಕ್​ನಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್​.. ಕರ್ನಾಟಕದಲ್ಲೂ ಪೋಸ್ಟ್​ಗಳು ಖಾಲಿ ಖಾಲಿ, ಅಪ್ಲೇ ಮಾಡಿ

ಮಂಡ್ಯದ ನಾಗಮಂಗಲ ತಾಲೂಕಿನ ಜಯಪ್ರಾರ್ಥನ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಹೂಟಗಳ್ಳಿಯ ದಕ್ಷ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ದ್ವಿತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಊಟದ ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಮಾಹಿತಿ ತಿಳಿದು ಆಡಳಿತ ಮಂಡಳಿ ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದೆ. ಆದರೆ ಈ ವಿಷಯ ಆಕೆಯ ಪೋಷಕರಿಗೆ ತಿಳಿಸಿಲ್ಲ. ಇಂದು ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಸಲ ವಿಚಾರ ಪೋಷಕರಿಗೆ ತಿಳಿಸಿದ್ದಾರೆ. ಆದರೆ ಪೋಷಕರು ಬರುವುದಕ್ಕಿಂತ ಮೊದಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ವಿದ್ಯಾರ್ಥಿನಿ ಮೃತಪಟ್ಟರು ಆಡಳಿತ ಮಂಡಳಿ ವಿಷಯ ತಡವಾಗಿ ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ನಮ್ಮ ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾಲೇಜು ಹಾಸ್ಟೆಲ್‌ನಲ್ಲಿ ದುರಂತ.. ಮೈಸೂರಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಆಗಿದ್ದೇನು?

https://newsfirstlive.com/wp-content/uploads/2024/08/MYS_DEAD_1.jpg

    ಊಟದ ನಂತರ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರು

    ಮಗಳ ಅನಾರೋಗ್ಯ ವಿಚಾರ ಪೋಷಕರ ಗಮನಕ್ಕೆ ತರಲಿಲ್ವಾ?

    ಪೋಷಕರು ನೋಡಲು ಬರುವುದಕ್ಕೂ ಮೊದಲೇ ಪುತ್ರಿ ಸಾವು

ಮೈಸೂರು: ಕಾಲೇಜು ಹಾಸ್ಟೆಲ್​​ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮೈಸೂರಿನ ಹೂಟಗಳ್ಳಿಯಲ್ಲಿ ನಡೆದಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ! ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ದಿಢೀರ್​ ಶಾಕ್.. ಝೀಕಾ ವೈರಸ್ ಪತ್ತೆ ​

ಇದನ್ನೂ ಓದಿ: ಬ್ಯಾಂಕ್​ನಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್​.. ಕರ್ನಾಟಕದಲ್ಲೂ ಪೋಸ್ಟ್​ಗಳು ಖಾಲಿ ಖಾಲಿ, ಅಪ್ಲೇ ಮಾಡಿ

ಮಂಡ್ಯದ ನಾಗಮಂಗಲ ತಾಲೂಕಿನ ಜಯಪ್ರಾರ್ಥನ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಹೂಟಗಳ್ಳಿಯ ದಕ್ಷ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ದ್ವಿತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಊಟದ ನಂತರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಈ ಮಾಹಿತಿ ತಿಳಿದು ಆಡಳಿತ ಮಂಡಳಿ ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದೆ. ಆದರೆ ಈ ವಿಷಯ ಆಕೆಯ ಪೋಷಕರಿಗೆ ತಿಳಿಸಿಲ್ಲ. ಇಂದು ಮತ್ತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಈ ಸಲ ವಿಚಾರ ಪೋಷಕರಿಗೆ ತಿಳಿಸಿದ್ದಾರೆ. ಆದರೆ ಪೋಷಕರು ಬರುವುದಕ್ಕಿಂತ ಮೊದಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ವಿದ್ಯಾರ್ಥಿನಿ ಮೃತಪಟ್ಟರು ಆಡಳಿತ ಮಂಡಳಿ ವಿಷಯ ತಡವಾಗಿ ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು ನಮ್ಮ ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More