newsfirstkannada.com

ಕೊಲೆ ಕೇಸಲ್ಲಿ ದರ್ಶನ್​​ಗೆ ಬಿಗ್​ ಶಾಕ್​​; A2ನಿಂದ A1 ಮಾಡಿ ಚಾರ್ಜ್​ಶೀಟ್​ ಸಲ್ಲಿಕೆಗೆ ಪೊಲೀಸ್ರ ತಯಾರಿ!

Share :

Published August 21, 2024 at 9:36pm

    ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿ 2 ತಿಂಗಳು

    ಕೊಲೆ ಕೇಸಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ಗೆ ಮತ್ತಷ್ಟು ಸಂಕಷ್ಟ..!

    ದರ್ಶನ್​ ಅವರೇ ಎ1 ಆಗಲಿದ್ದಾರೆ ಅನ್ನೋ ಸ್ಫೋಟಕ ಮಾಹಿತಿ ಲಭ್ಯ

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲು ಸೇರಿರೋ ಚಾಲೆಂಜಿಂಗ್​ ಸ್ಟಾರ್​ ದರ್ಶನ್​​ ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೇಸ್​ನಲ್ಲಿ ದರ್ಶನ್​ ಎ2 ಆಗಿದ್ದರು. ನಟಿ ಪವಿತ್ರಾ ಗೌಡ ಎ1 ಆಗಿದ್ದರು. ಆದರೀಗ, ಪೊಲೀಸರು ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಲು ಮುಂದಾಗಿದ್ದು, ದರ್ಶನ್​ ಅವರನ್ನೇ ಎ1 ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಕೊನೇ ಹಂತಕ್ಕೆ ಬಂದಿದೆ. ತನಿಖೆ ವೇಳೆ ನಟನ ವಿರುದ್ಧ ಹಲವು ಪ್ರಮುಖ ಸಾಕ್ಷಿಗಳು ಸಿಕಿದ್ದು, ಇವರೇ ಕೊಲೆ ಮಾಡಿಸಿರುವುದು ಎಂಬುದು ಬಹುತೇಕ ಖಚಿತವಾಗಿದೆ. ಎಲ್ಲ ಪ್ರಮುಖ ಸಾಕ್ಷಿಗಳು ದರ್ಶನ್​ ವಿರುದ್ಧವಾಗಿ ಇರುವುದರಿಂದ ಕೇಸ್​ನಲ್ಲಿ ಎ1 ಆಲಿದ್ದಾರೆ. A2ನಿಂದ A1 ಮಾಡಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಕೊಲೆ ಕೇಸ್​ನಲ್ಲಿ ಆರೋಪಿಗಳ ಮೊಬೈಲ್ ರಿಟ್ರೀವ್​ ಮಾಡಲಾಗಿದೆ. ಇದರಲ್ಲಿ ರೇಣುಕಾ ಸ್ವಾಮಿಯ 4 ಫೋಟೋಗಳು ಸಿಕ್ಕಿವೆ. ಸಾಯುವುದಕ್ಕೂ ಮುನ್ನ ಆತ ಕೈ ಮುಗಿದು ಬೇಡಿಕೊಳ್ಳುತ್ತಿರೋ ಫೋಟೋ ಇದಾಗಿದೆ. ಪ್ರದೋಶ್ ಮತ್ತು ಇನ್ನೋರ್ವನ ಮೊಬೈಲ್​ನಿಂದ ಈ ಫೋಟೋ ರಿಟ್ರೀವ್ ಆಗಿದ್ದು, ಹಲವು ಬಗೆಯ ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ದರ್ಶನ್​​ ಎ1 ಆದಲ್ಲಿ ಶಿಕ್ಷೆ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ನಾಳೆ ದರ್ಶನ್​​​ ರಿಲೀಸ್​​ಗಾಗಿ ಪರಪ್ಪನ ಅಗ್ರಹಾರ ಜೈಲು ಮುಂದೆ ಉರುಳು ಸೇವೆ; 101 ತೆಂಗಿನ ಕಾಯಿ ಹೊಡೆದು ಪೂಜೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಲೆ ಕೇಸಲ್ಲಿ ದರ್ಶನ್​​ಗೆ ಬಿಗ್​ ಶಾಕ್​​; A2ನಿಂದ A1 ಮಾಡಿ ಚಾರ್ಜ್​ಶೀಟ್​ ಸಲ್ಲಿಕೆಗೆ ಪೊಲೀಸ್ರ ತಯಾರಿ!

https://newsfirstlive.com/wp-content/uploads/2024/06/darshan47.jpg

    ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿ 2 ತಿಂಗಳು

    ಕೊಲೆ ಕೇಸಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ಗೆ ಮತ್ತಷ್ಟು ಸಂಕಷ್ಟ..!

    ದರ್ಶನ್​ ಅವರೇ ಎ1 ಆಗಲಿದ್ದಾರೆ ಅನ್ನೋ ಸ್ಫೋಟಕ ಮಾಹಿತಿ ಲಭ್ಯ

ಬೆಂಗಳೂರು: ಕೊಲೆ ಕೇಸ್​ನಲ್ಲಿ ಜೈಲು ಸೇರಿರೋ ಚಾಲೆಂಜಿಂಗ್​ ಸ್ಟಾರ್​ ದರ್ಶನ್​​ ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ. ರೇಣುಕಾ ಸ್ವಾಮಿ ಕೇಸ್​ನಲ್ಲಿ ದರ್ಶನ್​ ಎ2 ಆಗಿದ್ದರು. ನಟಿ ಪವಿತ್ರಾ ಗೌಡ ಎ1 ಆಗಿದ್ದರು. ಆದರೀಗ, ಪೊಲೀಸರು ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸಲು ಮುಂದಾಗಿದ್ದು, ದರ್ಶನ್​ ಅವರನ್ನೇ ಎ1 ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಕೊನೇ ಹಂತಕ್ಕೆ ಬಂದಿದೆ. ತನಿಖೆ ವೇಳೆ ನಟನ ವಿರುದ್ಧ ಹಲವು ಪ್ರಮುಖ ಸಾಕ್ಷಿಗಳು ಸಿಕಿದ್ದು, ಇವರೇ ಕೊಲೆ ಮಾಡಿಸಿರುವುದು ಎಂಬುದು ಬಹುತೇಕ ಖಚಿತವಾಗಿದೆ. ಎಲ್ಲ ಪ್ರಮುಖ ಸಾಕ್ಷಿಗಳು ದರ್ಶನ್​ ವಿರುದ್ಧವಾಗಿ ಇರುವುದರಿಂದ ಕೇಸ್​ನಲ್ಲಿ ಎ1 ಆಲಿದ್ದಾರೆ. A2ನಿಂದ A1 ಮಾಡಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ಕೊಲೆ ಕೇಸ್​ನಲ್ಲಿ ಆರೋಪಿಗಳ ಮೊಬೈಲ್ ರಿಟ್ರೀವ್​ ಮಾಡಲಾಗಿದೆ. ಇದರಲ್ಲಿ ರೇಣುಕಾ ಸ್ವಾಮಿಯ 4 ಫೋಟೋಗಳು ಸಿಕ್ಕಿವೆ. ಸಾಯುವುದಕ್ಕೂ ಮುನ್ನ ಆತ ಕೈ ಮುಗಿದು ಬೇಡಿಕೊಳ್ಳುತ್ತಿರೋ ಫೋಟೋ ಇದಾಗಿದೆ. ಪ್ರದೋಶ್ ಮತ್ತು ಇನ್ನೋರ್ವನ ಮೊಬೈಲ್​ನಿಂದ ಈ ಫೋಟೋ ರಿಟ್ರೀವ್ ಆಗಿದ್ದು, ಹಲವು ಬಗೆಯ ಸಾಕ್ಷಿಗಳನ್ನು ಕಲೆ ಹಾಕಲಾಗಿದೆ. ದರ್ಶನ್​​ ಎ1 ಆದಲ್ಲಿ ಶಿಕ್ಷೆ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ನಾಳೆ ದರ್ಶನ್​​​ ರಿಲೀಸ್​​ಗಾಗಿ ಪರಪ್ಪನ ಅಗ್ರಹಾರ ಜೈಲು ಮುಂದೆ ಉರುಳು ಸೇವೆ; 101 ತೆಂಗಿನ ಕಾಯಿ ಹೊಡೆದು ಪೂಜೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More