newsfirstkannada.com

ತಿರುಪತಿ ತಿಮ್ಮಪ್ಪನ ಲಡ್ಡು ಬೇಕಂದ್ರೆ ಈ​ ಕಾರ್ಡ್​ ಬೇಕೇ ಬೇಕು; TTD ಅಧಿಕಾರಿ ಹೇಳಿದ್ದೇನು?

Share :

Published August 31, 2024 at 6:07am

    ಲಡ್ಡುಗಳನ್ನ ತೆಗೆದುಕೊಳ್ಳಲು ಹೊಸ ನಿಯಮ ಜಾರಿ ಯಾಕೆ..?

    ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳು

    ತಿಮ್ಮಪ್ಪನ ಲಡ್ಡುಗಳನ್ನ ಬೇರೆ ಕಡೆ ಮಾರಾಟ ಮಾಡಲಾಗುತ್ತಿದೆ?

ಹೈದರಾಬಾದ್: ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ದಲ್ಲಿ ಇನ್ಮುಂದೆ ಲಡ್ಡುಗಳನ್ನು ಪಡೆಯಬೇಕೆಂದರೆ ಆಧಾರ್ ಕಾರ್ಡ್​ ಅನ್ನು ಕಡ್ಡಾಯ ಮಾಡಲಾಗಿದೆ. ಟೋಕನ್ ರಹಿತ ಭಕ್ತರಿಗೆ ಲಡ್ಡುಗಳ ಮಾರಾಟಕ್ಕೆ ಆಧಾರ್ ದೃಢೀಕರಣ ಪರಿಚಯಿಸಲಾಗಿದ್ದು ಇದರಿಂದ ಕಾಳಸಂತೆಯಲ್ಲಿ ಲಡ್ಡುಗಳನ್ನು ಮಾರಾಟ ಮಾಡುತ್ತಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸಬಹುದು ಎಂದು ಟಿಟಿಡಿ ತಿಳಿಸಿದೆ.

ಇದನ್ನೂ ಓದಿ: ಜೈಲಲ್ಲಿ ದರ್ಶನ್ ಭೇಟಿ ಮಾಡಿದ್ದೇಕೆ? ಪೊಲೀಸರಿಗೆ ಸಿನಿಮಾ ಡೈಲಾಗ್ ಹೊಡೆದ ಚಿಕ್ಕಣ್ಣ; ಆಮೇಲೇನಾಯ್ತು? 

ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ವೆಂಕಯ್ಯ ಚೌಧರಿ ಮಾತನಾಡಿ, ಲಡ್ಡುಗಳನ್ನು ಕೆಲವು ಮಧ್ಯವರ್ತಿಗಳು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ದೇವಾಲಯಕ್ಕೆ ದಕ್ಕೆಯಾಗುತ್ತಿದೆ. ಅಲ್ಲದೇ ದೂರದ ಊರುಗಳಿಂದ ಬರುವ ವಕ್ತರಿಗೆ ಲಡ್ಡುಗಳು ಕೊರತೆಯಾಗುತ್ತವೆ. ಸಾಮಾನ್ಯ ಭಕ್ತರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್​ ದೃಢೀಕರಣ ಪರಿಚಯಿಸಲಾಗಿದೆ. ಲಡ್ಡು ವಿತರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಇದನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 8 ಗಂಡಂದಿರ ಮುದ್ದಿನ ಹೆಂಡತಿ.. 6 ತಿಂಗಳಿಗೆ 1 ಮದುವೆಯಾಗಿ ನಾಟಕ; ಊಸರವಳ್ಳಿ ಬಣ್ಣ ಬಯಲಾಗಿದ್ದು ಹೇಗೆ?

ದರ್ಶನಕ್ಕೆ ಟಿಕೆಟ್​ ತೆಗೆದುಕೊಳ್ಳದೇ 48 ಹಾಗೂ 62ನೇ ಕೌಂಟರ್​​ನಿಂದ ಬರುವ ಭಕ್ತರಿಗೆ ಇದು ಅನ್ವಯ ಆಗಲಿದೆ. ತಮ್ಮ ಆಧಾರ್​ ದೃಢೀಕರಣ ಮಾಡಿ, ಒಬ್ಬ ಭಕ್ತರು 2 ಲಡ್ಡುಗಳನ್ನು ಪಡೆದುಕೊಳ್ಳಬಹುದು. ಹಿಂದಿನಂತೆ ಒಂದು ಲಡ್ಡು ಉಚಿತವಾಗಿ ಪಡೆದು ಹೆಚ್ಚುವರಿ ಲಡ್ಡುಗಳನ್ನು ಹಣ ಕೊಟ್ಟು ಖರೀದಿ ಮಾಡಬಹುದು. ಭಕ್ತರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಚೌಧರಿ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಿರುಪತಿ ತಿಮ್ಮಪ್ಪನ ಲಡ್ಡು ಬೇಕಂದ್ರೆ ಈ​ ಕಾರ್ಡ್​ ಬೇಕೇ ಬೇಕು; TTD ಅಧಿಕಾರಿ ಹೇಳಿದ್ದೇನು?

https://newsfirstlive.com/wp-content/uploads/2024/08/TIRUPATI-1.jpg

    ಲಡ್ಡುಗಳನ್ನ ತೆಗೆದುಕೊಳ್ಳಲು ಹೊಸ ನಿಯಮ ಜಾರಿ ಯಾಕೆ..?

    ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳು

    ತಿಮ್ಮಪ್ಪನ ಲಡ್ಡುಗಳನ್ನ ಬೇರೆ ಕಡೆ ಮಾರಾಟ ಮಾಡಲಾಗುತ್ತಿದೆ?

ಹೈದರಾಬಾದ್: ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ದಲ್ಲಿ ಇನ್ಮುಂದೆ ಲಡ್ಡುಗಳನ್ನು ಪಡೆಯಬೇಕೆಂದರೆ ಆಧಾರ್ ಕಾರ್ಡ್​ ಅನ್ನು ಕಡ್ಡಾಯ ಮಾಡಲಾಗಿದೆ. ಟೋಕನ್ ರಹಿತ ಭಕ್ತರಿಗೆ ಲಡ್ಡುಗಳ ಮಾರಾಟಕ್ಕೆ ಆಧಾರ್ ದೃಢೀಕರಣ ಪರಿಚಯಿಸಲಾಗಿದ್ದು ಇದರಿಂದ ಕಾಳಸಂತೆಯಲ್ಲಿ ಲಡ್ಡುಗಳನ್ನು ಮಾರಾಟ ಮಾಡುತ್ತಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸಬಹುದು ಎಂದು ಟಿಟಿಡಿ ತಿಳಿಸಿದೆ.

ಇದನ್ನೂ ಓದಿ: ಜೈಲಲ್ಲಿ ದರ್ಶನ್ ಭೇಟಿ ಮಾಡಿದ್ದೇಕೆ? ಪೊಲೀಸರಿಗೆ ಸಿನಿಮಾ ಡೈಲಾಗ್ ಹೊಡೆದ ಚಿಕ್ಕಣ್ಣ; ಆಮೇಲೇನಾಯ್ತು? 

ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ವೆಂಕಯ್ಯ ಚೌಧರಿ ಮಾತನಾಡಿ, ಲಡ್ಡುಗಳನ್ನು ಕೆಲವು ಮಧ್ಯವರ್ತಿಗಳು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ದೇವಾಲಯಕ್ಕೆ ದಕ್ಕೆಯಾಗುತ್ತಿದೆ. ಅಲ್ಲದೇ ದೂರದ ಊರುಗಳಿಂದ ಬರುವ ವಕ್ತರಿಗೆ ಲಡ್ಡುಗಳು ಕೊರತೆಯಾಗುತ್ತವೆ. ಸಾಮಾನ್ಯ ಭಕ್ತರ ಹಿತದೃಷ್ಟಿಯಿಂದ ಆಧಾರ್ ಕಾರ್ಡ್​ ದೃಢೀಕರಣ ಪರಿಚಯಿಸಲಾಗಿದೆ. ಲಡ್ಡು ವಿತರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಇದನ್ನು ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 8 ಗಂಡಂದಿರ ಮುದ್ದಿನ ಹೆಂಡತಿ.. 6 ತಿಂಗಳಿಗೆ 1 ಮದುವೆಯಾಗಿ ನಾಟಕ; ಊಸರವಳ್ಳಿ ಬಣ್ಣ ಬಯಲಾಗಿದ್ದು ಹೇಗೆ?

ದರ್ಶನಕ್ಕೆ ಟಿಕೆಟ್​ ತೆಗೆದುಕೊಳ್ಳದೇ 48 ಹಾಗೂ 62ನೇ ಕೌಂಟರ್​​ನಿಂದ ಬರುವ ಭಕ್ತರಿಗೆ ಇದು ಅನ್ವಯ ಆಗಲಿದೆ. ತಮ್ಮ ಆಧಾರ್​ ದೃಢೀಕರಣ ಮಾಡಿ, ಒಬ್ಬ ಭಕ್ತರು 2 ಲಡ್ಡುಗಳನ್ನು ಪಡೆದುಕೊಳ್ಳಬಹುದು. ಹಿಂದಿನಂತೆ ಒಂದು ಲಡ್ಡು ಉಚಿತವಾಗಿ ಪಡೆದು ಹೆಚ್ಚುವರಿ ಲಡ್ಡುಗಳನ್ನು ಹಣ ಕೊಟ್ಟು ಖರೀದಿ ಮಾಡಬಹುದು. ಭಕ್ತರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಚೌಧರಿ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More