newsfirstkannada.com

RCB ಅಭಿಮಾನಿಗಳಿಗೆ ಗುಡ್​ನ್ಯೂಸ್; ಬಲಿಷ್ಠ ಟೀಂ ಇಂಡಿಯಾದಲ್ಲಿ 4 ಮಂದಿ ಆರ್​ಸಿಬಿ ಆಟಗಾರರು..!

Share :

Published September 9, 2024 at 10:24am

    ವೇಗಿ ಮುಖೇಶ್​ ಕುಮಾರ್, ಕನ್ನಡಿಗ ಪಡಿಕ್ಕಲ್​ಗೆ ಕೊಕ್​..!

    ಬೂಮ್ರಾಗೆ ಇಲ್ಲ ರೆಸ್ಟ್​.. ಸ್ಥಾನ ಉಳಿಸಿಕೊಂಡ ಯಂಗ್ ಬೌಲರ್

    ಟೆಸ್ಟ್​ಗೆ ವಿರಾಟ್ ಕೊಹ್ಲಿ, ರಿಷಬ್ ಪಂತ್ ಕಮ್​ಬ್ಯಾಕ್

ಬಾಂಗ್ಲಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದ್ರೆ, ಕೆಲ ಆಟಗಾರರಿಗೆ ಜಾಕ್​ಪಾಟ್​ ಹೊಡೆದಿದೆ. ಅಷ್ಟೇ ಅಲ್ಲ, ಕೆಲವು ಆಟಗಾರರಿಗೆ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

ಬಾಂಗ್ಲಾ ಎದುರಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕತ್ವದ 16 ಸದಸ್ಯರ ಬಲಿಷ್ಠ ತಂಡವನ್ನೇ ಸೆಲೆಕ್ಷನ್ ಕಮಿಟಿ ಪ್ರಕಟಿಸಿದೆ. ಈ ಟೆಸ್ಟ್ ಸರಣಿಯಲ್ಲಿ ನಿರೀಕ್ಷೆಯಂತೆ ಸ್ಟಾರ್ ಆಟಗಾರರು ಕಾಣಿಸಿಕೊಂಡಿದ್ರೆ, ಕೆಲ ಆಟಗಾರರಿಗೆ ತಂಡದಿಂದ ಕೊಕ್ ನೀಡಲಾಗಿದೆ.

ಮೊದಲ ಟೆಸ್ಟ್‌ಗೆ ಟೀಮ್ ಇಂಡಿಯಾ..!
16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್​ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್​ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್​​ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್​ರೌಂಡರ್​​​ ಕೋಟಾದದಲ್ಲಿ ಆರ್​.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್​ ಸ್ಪಿನ್ನರ್ ಆಗಿ ಕುಲ್​ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್​ಪ್ರೀತ್​ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್​ ದಯಾಳ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:25 ವರ್ಷದ ಆಟಗಾರ ಫಸ್ಟ್​ ಟೈಂ ಟೀಂ ಇಂಡಿಯಾಗೆ ಸೇರ್ಪಡೆ; ಅವರು ಆರ್​ಸಿಬಿ ಸ್ಟಾರ್..!

ಟೆಸ್ಟ್​ಗೆ ವಿರಾಟ್ ಕೊಹ್ಲಿ ಕಮ್​ಬ್ಯಾಕ್..!
ಸೌತ್ ಆಫ್ರಿಕಾ ಟೆಸ್ಟ್​ ಸರಣಿಯ ಬಳಿಕ ಇಂಗ್ಲೆಂಡ್​ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ, ಬರೋಬ್ಬರಿ 9 ತಿಂಗಳ ಬಳಿಕ ಟೆಸ್ಟ್​ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಟೆಸ್ಟ್​ಗೆ ವಿರಾಟ್​ ಮತ್ತೆ ಕಮ್​​ಬ್ಯಾಕ್ ಮಾಡಿದ್ದಾರೆ. ವಿರಾಟ್​ ಕೊಹ್ಲಿ ಮಾತ್ರವೇ ಅಲ್ಲ. ಅಪಘಾತದ ಬಳಿಕ ಟಿ20, ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ರಿಷಭ್ ಪಂತ್, ಈಗ ಬಾಂಗ್ಲಾ ಎದುರಿನ ಮೊದಲ ಟೆಸ್ಟ್​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆ ಮೂಲಕ ಬರೋಬ್ಬರಿ 20 ತಿಂಗಳ ಬಳಿಕ ವೈಟ್​ ಜರ್ಸಿಯಲ್ಲಿ ರಿಷಭ್ ಪಂತ್​ ಕಣಕ್ಕಿಳಿಯಲಿದ್ದಾರೆ.

ಬೂಮ್ರಾಗೆ ಇಲ್ಲ ರೆಸ್ಟ್​.. ಸ್ಥಾನ ಉಳಿಸಿಕೊಂಡ ಆಕಾಶ್
ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾದಿಂದಲೇ ದೂರ ಉಳಿದಿದ್ದ ವೇಗಿ ಜಸ್​ಪ್ರಿತ್ ಬೂಮ್ರಾ, ಬಾಂಗ್ಲಾ ಎದುರಿನ ಟೆಸ್ಟ್ ತಂಡಕ್ಕೆ ವಾಪಾಸ್ ಆಗಿದ್ದಾರೆ. ಇನ್ನು ಇಂಗ್ಲೆಂಡ್ ಸರಣಿಯಲ್ಲಿ ಸ್ಥಾನ ಪಡೆದಿದ್ದ ಆಕಾಶ್, ದುಲೀಪ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುವುದರೊಂದಿಗೆ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆದ್ರೆ, ದುಲೀಪ್​ ಟ್ರೋಫಿಯಲ್ಲಿ ಮಿಂಚದ ವೇಗಿ ಯಶ್​ ದಯಾಳ್​​, ಅಚ್ಚರಿಯಂತೆ ಟೆಸ್ಟ್​ ತಂಡದಲ್ಲಿ ಚೊಚ್ಚಲ ಕರೆ ಪಡೆದಿದ್ದಾರೆ. ವಿಶೇಷ ಅಂದರೆ ಆರ್​ಸಿಬಿ ತಂಡದ ಭಾಗವಾಗಿರುವ ನಾಲ್ಕು ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ಯಶ್ ದಯಾಳ್​ಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ:ಒಬ್ಬ ಸ್ಯಾಮ್ಸನ್​​​ಗೆ 8 ನಾಯಕರಿಂದ ಅನ್ಯಾಯ; 9 ವರ್ಷಗಳಿಂದ ಸಂಜುಗೆ ಮಹಾ ಮೋಸ..!

ವೇಗಿ ಮುಖೇಶ್​ ಕುಮಾರ್, ಕನ್ನಡಿಗ ಪಡಿಕ್ಕಲ್​ಗೆ ಕೊಕ್​..!
ಇಂಗ್ಲೆಂಡ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಮಖೇಶ್, ದುಲೀಪ್ ಟ್ರೋಫಿಯಲ್ಲಿ ಇಂಪ್ರೆಸ್ಸಿಂಗ್ ಪರ್ಫಾಮೆನ್ಸ್​ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಕಾರಣಕ್ಕೆ ಟೆಸ್ಟ್​ ತಂಡದಿಂದ ಕೊಕ್ ನೀಡಲಾಗಿದೆ. ಆದ್ರೆ, ಕನ್ನಡಿಗ ಪಡಿಕ್ಕಲ್, ಉತ್ತಮ ಪ್ರದರ್ಶನದ ಹೊರತಾಯೂ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ. ಒಟ್ನಲ್ಲಿ, ಅಳೆದು ತೂಗಿಯೇ ಮೊದಲ ಟೆಸ್ಟ್ ಪಂದ್ಯಕ್ಕೆ ತಂಡವನ್ನ ಪ್ರಕಟಿಸಿರುವ ಸೆಲೆಕ್ಷನ್ ಕಮಿಟಿ, ಚೆನ್ನೈನ ಸ್ಪಿನ್​ ಸ್ನೇಹಿಗೆ ತಕ್ಕಂತೆಯೇ ನಾಲ್ವರು ಸ್ಪಿನ್ನರ್​​​ಗಳಿಗೆ ಮಣೆ ಹಾಕಿದೆ.

ಇದನ್ನೂ ಓದಿ:ದ್ರಾವಿಡ್ ಎಂಟ್ರಿ ಬೆನ್ನಲ್ಲೇ ಸಂಗಕ್ಕಾರ್​ಗೆ ಕೋಪ; ಈ ಅವಕಾಶ ಬಳಸಿಕೊಳ್ಳಲು KKR ಕಿಲಾಡಿ ಐಡಿಯಾ..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

RCB ಅಭಿಮಾನಿಗಳಿಗೆ ಗುಡ್​ನ್ಯೂಸ್; ಬಲಿಷ್ಠ ಟೀಂ ಇಂಡಿಯಾದಲ್ಲಿ 4 ಮಂದಿ ಆರ್​ಸಿಬಿ ಆಟಗಾರರು..!

https://newsfirstlive.com/wp-content/uploads/2024/09/Virat-kohli-3.jpg

    ವೇಗಿ ಮುಖೇಶ್​ ಕುಮಾರ್, ಕನ್ನಡಿಗ ಪಡಿಕ್ಕಲ್​ಗೆ ಕೊಕ್​..!

    ಬೂಮ್ರಾಗೆ ಇಲ್ಲ ರೆಸ್ಟ್​.. ಸ್ಥಾನ ಉಳಿಸಿಕೊಂಡ ಯಂಗ್ ಬೌಲರ್

    ಟೆಸ್ಟ್​ಗೆ ವಿರಾಟ್ ಕೊಹ್ಲಿ, ರಿಷಬ್ ಪಂತ್ ಕಮ್​ಬ್ಯಾಕ್

ಬಾಂಗ್ಲಾ ಎದುರಿನ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ನಿರೀಕ್ಷೆಯಂತೆ ಕೆಲ ಆಟಗಾರರು ಸ್ಥಾನ ಪಡೆದ್ರೆ, ಕೆಲ ಆಟಗಾರರಿಗೆ ಜಾಕ್​ಪಾಟ್​ ಹೊಡೆದಿದೆ. ಅಷ್ಟೇ ಅಲ್ಲ, ಕೆಲವು ಆಟಗಾರರಿಗೆ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

ಬಾಂಗ್ಲಾ ಎದುರಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕತ್ವದ 16 ಸದಸ್ಯರ ಬಲಿಷ್ಠ ತಂಡವನ್ನೇ ಸೆಲೆಕ್ಷನ್ ಕಮಿಟಿ ಪ್ರಕಟಿಸಿದೆ. ಈ ಟೆಸ್ಟ್ ಸರಣಿಯಲ್ಲಿ ನಿರೀಕ್ಷೆಯಂತೆ ಸ್ಟಾರ್ ಆಟಗಾರರು ಕಾಣಿಸಿಕೊಂಡಿದ್ರೆ, ಕೆಲ ಆಟಗಾರರಿಗೆ ತಂಡದಿಂದ ಕೊಕ್ ನೀಡಲಾಗಿದೆ.

ಮೊದಲ ಟೆಸ್ಟ್‌ಗೆ ಟೀಮ್ ಇಂಡಿಯಾ..!
16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್​ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್​ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್​​ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್​ರೌಂಡರ್​​​ ಕೋಟಾದದಲ್ಲಿ ಆರ್​.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್​ ಸ್ಪಿನ್ನರ್ ಆಗಿ ಕುಲ್​ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್​ಪ್ರೀತ್​ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್​ ದಯಾಳ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:25 ವರ್ಷದ ಆಟಗಾರ ಫಸ್ಟ್​ ಟೈಂ ಟೀಂ ಇಂಡಿಯಾಗೆ ಸೇರ್ಪಡೆ; ಅವರು ಆರ್​ಸಿಬಿ ಸ್ಟಾರ್..!

ಟೆಸ್ಟ್​ಗೆ ವಿರಾಟ್ ಕೊಹ್ಲಿ ಕಮ್​ಬ್ಯಾಕ್..!
ಸೌತ್ ಆಫ್ರಿಕಾ ಟೆಸ್ಟ್​ ಸರಣಿಯ ಬಳಿಕ ಇಂಗ್ಲೆಂಡ್​ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ, ಬರೋಬ್ಬರಿ 9 ತಿಂಗಳ ಬಳಿಕ ಟೆಸ್ಟ್​ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಟೆಸ್ಟ್​ಗೆ ವಿರಾಟ್​ ಮತ್ತೆ ಕಮ್​​ಬ್ಯಾಕ್ ಮಾಡಿದ್ದಾರೆ. ವಿರಾಟ್​ ಕೊಹ್ಲಿ ಮಾತ್ರವೇ ಅಲ್ಲ. ಅಪಘಾತದ ಬಳಿಕ ಟಿ20, ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದ ರಿಷಭ್ ಪಂತ್, ಈಗ ಬಾಂಗ್ಲಾ ಎದುರಿನ ಮೊದಲ ಟೆಸ್ಟ್​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆ ಮೂಲಕ ಬರೋಬ್ಬರಿ 20 ತಿಂಗಳ ಬಳಿಕ ವೈಟ್​ ಜರ್ಸಿಯಲ್ಲಿ ರಿಷಭ್ ಪಂತ್​ ಕಣಕ್ಕಿಳಿಯಲಿದ್ದಾರೆ.

ಬೂಮ್ರಾಗೆ ಇಲ್ಲ ರೆಸ್ಟ್​.. ಸ್ಥಾನ ಉಳಿಸಿಕೊಂಡ ಆಕಾಶ್
ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾದಿಂದಲೇ ದೂರ ಉಳಿದಿದ್ದ ವೇಗಿ ಜಸ್​ಪ್ರಿತ್ ಬೂಮ್ರಾ, ಬಾಂಗ್ಲಾ ಎದುರಿನ ಟೆಸ್ಟ್ ತಂಡಕ್ಕೆ ವಾಪಾಸ್ ಆಗಿದ್ದಾರೆ. ಇನ್ನು ಇಂಗ್ಲೆಂಡ್ ಸರಣಿಯಲ್ಲಿ ಸ್ಥಾನ ಪಡೆದಿದ್ದ ಆಕಾಶ್, ದುಲೀಪ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುವುದರೊಂದಿಗೆ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆದ್ರೆ, ದುಲೀಪ್​ ಟ್ರೋಫಿಯಲ್ಲಿ ಮಿಂಚದ ವೇಗಿ ಯಶ್​ ದಯಾಳ್​​, ಅಚ್ಚರಿಯಂತೆ ಟೆಸ್ಟ್​ ತಂಡದಲ್ಲಿ ಚೊಚ್ಚಲ ಕರೆ ಪಡೆದಿದ್ದಾರೆ. ವಿಶೇಷ ಅಂದರೆ ಆರ್​ಸಿಬಿ ತಂಡದ ಭಾಗವಾಗಿರುವ ನಾಲ್ಕು ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಕ್ಕಿದೆ. ವಿರಾಟ್ ಕೊಹ್ಲಿ, ಮೊಹ್ಮದ್ ಸಿರಾಜ್, ಆಕಾಶ್ ದೀಪ್ ಹಾಗೂ ಯಶ್ ದಯಾಳ್​ಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ:ಒಬ್ಬ ಸ್ಯಾಮ್ಸನ್​​​ಗೆ 8 ನಾಯಕರಿಂದ ಅನ್ಯಾಯ; 9 ವರ್ಷಗಳಿಂದ ಸಂಜುಗೆ ಮಹಾ ಮೋಸ..!

ವೇಗಿ ಮುಖೇಶ್​ ಕುಮಾರ್, ಕನ್ನಡಿಗ ಪಡಿಕ್ಕಲ್​ಗೆ ಕೊಕ್​..!
ಇಂಗ್ಲೆಂಡ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಮಖೇಶ್, ದುಲೀಪ್ ಟ್ರೋಫಿಯಲ್ಲಿ ಇಂಪ್ರೆಸ್ಸಿಂಗ್ ಪರ್ಫಾಮೆನ್ಸ್​ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಕಾರಣಕ್ಕೆ ಟೆಸ್ಟ್​ ತಂಡದಿಂದ ಕೊಕ್ ನೀಡಲಾಗಿದೆ. ಆದ್ರೆ, ಕನ್ನಡಿಗ ಪಡಿಕ್ಕಲ್, ಉತ್ತಮ ಪ್ರದರ್ಶನದ ಹೊರತಾಯೂ ತಂಡದಿಂದ ಗೇಟ್​ಪಾಸ್ ನೀಡಲಾಗಿದೆ. ಒಟ್ನಲ್ಲಿ, ಅಳೆದು ತೂಗಿಯೇ ಮೊದಲ ಟೆಸ್ಟ್ ಪಂದ್ಯಕ್ಕೆ ತಂಡವನ್ನ ಪ್ರಕಟಿಸಿರುವ ಸೆಲೆಕ್ಷನ್ ಕಮಿಟಿ, ಚೆನ್ನೈನ ಸ್ಪಿನ್​ ಸ್ನೇಹಿಗೆ ತಕ್ಕಂತೆಯೇ ನಾಲ್ವರು ಸ್ಪಿನ್ನರ್​​​ಗಳಿಗೆ ಮಣೆ ಹಾಕಿದೆ.

ಇದನ್ನೂ ಓದಿ:ದ್ರಾವಿಡ್ ಎಂಟ್ರಿ ಬೆನ್ನಲ್ಲೇ ಸಂಗಕ್ಕಾರ್​ಗೆ ಕೋಪ; ಈ ಅವಕಾಶ ಬಳಸಿಕೊಳ್ಳಲು KKR ಕಿಲಾಡಿ ಐಡಿಯಾ..!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More