newsfirstkannada.com

ಬೆಳಗಾವಿ ಗಣೇಶ ಉತ್ಸವ ಮೆರವಣಿಗೆ ವೇಳೆ ಅನಾಹುತ; ಓರ್ವ ಸಾವು

Share :

Published September 18, 2024 at 1:49pm

    ಓರ್ವ ಗಂಭೀರ ಗಾಯ, ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಆಸ್ಪತ್ರೆಗೆ ಶ್ರೀರಾಮಸೇನೆ ಹಿಂದುಸ್ಥಾನ ಅಧ್ಯಕ್ಷ ರಮಾಕಾಂತ ಭೇಟಿ

    ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಆಗಿದ್ದೇನು?

ಬೆಳಗಾವಿ: ಗಣೇಶ ಉತ್ಸವ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ. ಸದಾನಂದ ಚೌಹಾಣ್ ಪಾಟೀಲ್ ಮೃತ ದುರ್ದೈವಿ.

ನಿನ್ನೆ ರಾತ್ರಿ ದುರ್ಘಟನೆ ಸಂಭವಿಸಿದೆ. ಕೂಡಲೇ ಸದಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾನಂದ ಚೌಹಾಣ್ ಪಾಟೀಲ್ ಸಾವನ್ನಪ್ಪಿದ್ದಾರೆ. ಇನ್ನು ವಿಜಯ ರಾಜಗೋಳ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಾಮಸೇನೆ ಹಿಂದುಸ್ಥಾನ ಅಧ್ಯಕ್ಷ ರಮಾಕಾಂತ ಕೊಂಡೊಸ್ಕರ್ ಭೇಟಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:HSRP ನಂಬರ್ ಪ್ಲೇಟ್; ವಾಹನ ಸವಾರರಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಳಗಾವಿ ಗಣೇಶ ಉತ್ಸವ ಮೆರವಣಿಗೆ ವೇಳೆ ಅನಾಹುತ; ಓರ್ವ ಸಾವು

https://newsfirstlive.com/wp-content/uploads/2024/09/BGM-GANESH.jpg

    ಓರ್ವ ಗಂಭೀರ ಗಾಯ, ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

    ಆಸ್ಪತ್ರೆಗೆ ಶ್ರೀರಾಮಸೇನೆ ಹಿಂದುಸ್ಥಾನ ಅಧ್ಯಕ್ಷ ರಮಾಕಾಂತ ಭೇಟಿ

    ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಆಗಿದ್ದೇನು?

ಬೆಳಗಾವಿ: ಗಣೇಶ ಉತ್ಸವ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ. ಸದಾನಂದ ಚೌಹಾಣ್ ಪಾಟೀಲ್ ಮೃತ ದುರ್ದೈವಿ.

ನಿನ್ನೆ ರಾತ್ರಿ ದುರ್ಘಟನೆ ಸಂಭವಿಸಿದೆ. ಕೂಡಲೇ ಸದಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾನಂದ ಚೌಹಾಣ್ ಪಾಟೀಲ್ ಸಾವನ್ನಪ್ಪಿದ್ದಾರೆ. ಇನ್ನು ವಿಜಯ ರಾಜಗೋಳ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಾಮಸೇನೆ ಹಿಂದುಸ್ಥಾನ ಅಧ್ಯಕ್ಷ ರಮಾಕಾಂತ ಕೊಂಡೊಸ್ಕರ್ ಭೇಟಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:HSRP ನಂಬರ್ ಪ್ಲೇಟ್; ವಾಹನ ಸವಾರರಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More