ಬಸ್ ಮತ್ತು ಇನೋವಾ ಕಾರ್ ನಡುವೆ ಭೀಕರ ಅಪಘಾತ
ಸಾವಿನ ಸಂಖ್ಯೆ 10ಕ್ಕೆ ಏರಿಕೆ!
ಇನ್ನಿಬ್ಬರ ಸ್ಥಿತಿ ಚಿಂತಾಜನಕ
ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುಜಾತ, ಸಂದೀಪ್, ಮಂಜುನಾಥ್, ಪೂರ್ಣಿಮಾ, ಗಾಯತ್ರಿ, ಆದಿತ್ಯಾ, ಬಸವ, ಕೊಟ್ರೇಶ್ (45), ಪವನ್ (10), ಕಾರ್ತಿಕ್ (08) ಮೃತ ದುರ್ದೈವಿಗಳು.
ಈ ಭೀಕರ ಅಪಘಾತವು ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಸಂಭವಿಸಿದೆ. ಮೃತ 10 ಮಂದಿ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ಆಗುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಇನೋವಾ ಕಾರು ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ 10 ಜನ ಸಾವನ್ನಪ್ಪಿದ್ದಾರೆ. ಮೃತ ಎಲ್ಲರು ಬಳ್ಳಾರಿ ಜಿಲ್ಲೆ ಸಂಗನಕಲ್ಲು ಮೂಲದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನರಸೀಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಕಾರಿನಲ್ಲಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಸ್ ಮತ್ತು ಇನೋವಾ ಕಾರ್ ನಡುವೆ ಭೀಕರ ಅಪಘಾತ
ಸಾವಿನ ಸಂಖ್ಯೆ 10ಕ್ಕೆ ಏರಿಕೆ!
ಇನ್ನಿಬ್ಬರ ಸ್ಥಿತಿ ಚಿಂತಾಜನಕ
ಮೈಸೂರು: ಖಾಸಗಿ ಬಸ್ ಮತ್ತು ಇನೋವಾ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುಜಾತ, ಸಂದೀಪ್, ಮಂಜುನಾಥ್, ಪೂರ್ಣಿಮಾ, ಗಾಯತ್ರಿ, ಆದಿತ್ಯಾ, ಬಸವ, ಕೊಟ್ರೇಶ್ (45), ಪವನ್ (10), ಕಾರ್ತಿಕ್ (08) ಮೃತ ದುರ್ದೈವಿಗಳು.
ಈ ಭೀಕರ ಅಪಘಾತವು ಕೊಳ್ಳೇಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಸಂಭವಿಸಿದೆ. ಮೃತ 10 ಮಂದಿ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ಆಗುತ್ತಿದ್ದರು. ಈ ವೇಳೆ ಅತಿ ವೇಗವಾಗಿ ಬಂದ ಇನೋವಾ ಕಾರು ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ 10 ಜನ ಸಾವನ್ನಪ್ಪಿದ್ದಾರೆ. ಮೃತ ಎಲ್ಲರು ಬಳ್ಳಾರಿ ಜಿಲ್ಲೆ ಸಂಗನಕಲ್ಲು ಮೂಲದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನರಸೀಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಕಾರಿನಲ್ಲಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ