newsfirstkannada.com

ಚುನಾವಣಾ ಬಾಂಡ್ ಮೂಲಕ ಸುಲಿಗೆ ಕೇಸ್​​; ನಿರ್ಮಲಾ ಸೀತಾರಾಮನ್ ವಿರುದ್ಧ FIR

Share :

Published September 28, 2024 at 3:56pm

Update September 28, 2024 at 4:04pm

    ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣ!

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

    ಕೋರ್ಟ್​ ಆದೇಶದಂತೆ ಬೆಂಗಳೂರು ಪೊಲೀಸರಿಂದ ಎಫ್​ಐಆರ್​ ದಾಖಲು

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಕೇಸ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶದ ಮೇರೆಗೆ ಎಫ್​ಐಆರ್​ ಮಾಡಲಾಗಿದೆ. IPC 384, 120 ಬಿ, 34ನ ಅಡಿಯಲ್ಲಿ ಎಫ್​ಐಆರ್​​ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮಕ್ಕೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಎಂಬುವರು ಕೋರ್ಟ್​ಗೆ ದೂರು ನೀಡಿದ್ರು. ದೂರಿನ ವಿಚಾರಣೆ ನಡೆಸಿದ ಕೋರ್ಟ್​​ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿತ್ತು.

ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ!

ಕೋರ್ಟ್​ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಸೂಚಿಸಿತ್ತು. ಈ ಕೂಡಲೇ ಎಚ್ಚೆತ್ತ ತಿಲಕ್ ನಗರ ಪೊಲೀಸರು ನಿರ್ಮಲಾ ಸೀತಾರಾಮನ್​ ವಿರುದ್ಧ ಎಫ್​ಐಆರ್​ ಮಾಡಿದ್ದಾರೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಷ್ಟೇ ಅಲ್ಲ ಅರ್ಜಿದಾರರ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದು, ಕೇಸ್​​ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.

ಚುನಾವಣಾ ಬಾಂಡ್ ಎಂದರೇನು?

2018ರಲ್ಲಿ ರಾಜಕೀಯ ಪಕ್ಷಗಳಿಗೆ ಹರಿದು ಬರುತ್ತಿರೋ ಕಪ್ಪು ಹಣವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಚುನಾವಣಾ ಬಾಂಡ್​​ ಅನ್ನು ಜಾರಿಗೆ ತಂದಿತ್ತು. ದೇಣಿಗೆ ಪ್ರಕ್ರಿಯೆ ಪಾರದರ್ಶಕವಾಗಿ ಇರಲಿ ಎಂಬ ಕಾರಣಕ್ಕೆ ಇದು ಜಾರಿ ಮಾಡಲಾಗಿತ್ತು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಚುನಾವಣಾ ಬಾಂಡ್ ಮೂಲಕ ಸುಲಿಗೆ ಕೇಸ್​​; ನಿರ್ಮಲಾ ಸೀತಾರಾಮನ್ ವಿರುದ್ಧ FIR

https://newsfirstlive.com/wp-content/uploads/2024/07/NIRMALA_SITARAMANN_1.jpg

    ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣ!

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್

    ಕೋರ್ಟ್​ ಆದೇಶದಂತೆ ಬೆಂಗಳೂರು ಪೊಲೀಸರಿಂದ ಎಫ್​ಐಆರ್​ ದಾಖಲು

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಕೇಸ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶದ ಮೇರೆಗೆ ಎಫ್​ಐಆರ್​ ಮಾಡಲಾಗಿದೆ. IPC 384, 120 ಬಿ, 34ನ ಅಡಿಯಲ್ಲಿ ಎಫ್​ಐಆರ್​​ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮಕ್ಕೆ ಕೋರಿ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಎಂಬುವರು ಕೋರ್ಟ್​ಗೆ ದೂರು ನೀಡಿದ್ರು. ದೂರಿನ ವಿಚಾರಣೆ ನಡೆಸಿದ ಕೋರ್ಟ್​​ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿತ್ತು.

ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ!

ಕೋರ್ಟ್​ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ತಿಲಕ್ ನಗರ ಪೊಲೀಸರಿಗೆ ಸೂಚಿಸಿತ್ತು. ಈ ಕೂಡಲೇ ಎಚ್ಚೆತ್ತ ತಿಲಕ್ ನಗರ ಪೊಲೀಸರು ನಿರ್ಮಲಾ ಸೀತಾರಾಮನ್​ ವಿರುದ್ಧ ಎಫ್​ಐಆರ್​ ಮಾಡಿದ್ದಾರೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಷ್ಟೇ ಅಲ್ಲ ಅರ್ಜಿದಾರರ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದು, ಕೇಸ್​​ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.

ಚುನಾವಣಾ ಬಾಂಡ್ ಎಂದರೇನು?

2018ರಲ್ಲಿ ರಾಜಕೀಯ ಪಕ್ಷಗಳಿಗೆ ಹರಿದು ಬರುತ್ತಿರೋ ಕಪ್ಪು ಹಣವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಚುನಾವಣಾ ಬಾಂಡ್​​ ಅನ್ನು ಜಾರಿಗೆ ತಂದಿತ್ತು. ದೇಣಿಗೆ ಪ್ರಕ್ರಿಯೆ ಪಾರದರ್ಶಕವಾಗಿ ಇರಲಿ ಎಂಬ ಕಾರಣಕ್ಕೆ ಇದು ಜಾರಿ ಮಾಡಲಾಗಿತ್ತು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More