ಆಟವಾಡುತ್ತಿದ್ದಾಗ ಆಯತಪ್ಪಿ ಬಿದ್ದ ಕೆಳಗೆ ಮಗು
ಉಳ್ಳಾಲ ತಾಲೂಕಿನ ಮಂಜನಾಡಿಯಲ್ಲಿ ಘಟನೆ
ಪೋಷಕರು ನೀವೆಲ್ಲಾ ಓದಲೇಬೇಕಾದ ಸ್ಟೋರಿ ಇದು!
ಮಂಗಳೂರು: ಆಟವಾಡುತ್ತಿದ್ದಾಗ ಕಟ್ಟಡದಿಂದ ಕೆಳಗೆ ಬಿದ್ದು ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರೋ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ.
ಈ ಘಟನೆಯು ಆಗಸ್ಟ್ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಬಾಲಕ ತಾಯಿ ಜೊತೆ ಬ್ಯಾಂಕ್ಗೆ ಬಂದಿದ್ದ. ಈ ವೇಳೆ ತಾಯಿ ಬ್ಯಾಂಕ್ನ ಒಳಗಿರುವಾಗ ಮಗುವು ಆಟವಾಡುತ್ತಾ ಹೊರಗೆ ಬಂದಿದೆ. ಬಳಿಕ ಕಟ್ಟಡದ ಹೊರಗೆ ಹಾಕಿದ್ದ ಕಬ್ಬಿಣದ ಗ್ರಿಲ್ ಹತ್ತಲು ಬಾಲಕ ಪ್ರಯತ್ನಿಸಿದ್ದಾನೆ.
ಆಟವಾಡುತ್ತಿದ್ದಾಗ ಕಟ್ಟಡದ ಮೇಲಿನಿಂದ ಮಗುವೊಂದು ಬಿದ್ದು ಗಂಭೀರವಾಗಿ ಗಾಯಗೊಂಡಿರೋ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ಸಂಭವಿಸಿದೆ. ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.#newsfirstlive #newsfirstkannada #KannadaNews #Mangaluru #CCTV pic.twitter.com/MhOzohdlyg
— NewsFirst Kannada (@NewsFirstKan) August 27, 2023
ಗ್ರಿಲ್ ಹತ್ತುವಾಗ ಆಯತಪ್ಪಿ ಮೊದಲ ಮಹಡಿಯಿಂದ ಗ್ರೌಂಡ್ ಫ್ಲೋರ್ಗೆ ಬಿದ್ದಿದೆ. ಬಾಲಕ ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಗುವು ಬಿದ್ದ ರಭಸಕ್ಕೆ ತಲೆ ಹಾಗೂ ಕೈಗೆ ಗಂಭೀರವಾಗಿ ಗಾಯಗಳಾಗಿದ್ದು ಕೂಡಲೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಆಟವಾಡುತ್ತಿದ್ದಾಗ ಆಯತಪ್ಪಿ ಬಿದ್ದ ಕೆಳಗೆ ಮಗು
ಉಳ್ಳಾಲ ತಾಲೂಕಿನ ಮಂಜನಾಡಿಯಲ್ಲಿ ಘಟನೆ
ಪೋಷಕರು ನೀವೆಲ್ಲಾ ಓದಲೇಬೇಕಾದ ಸ್ಟೋರಿ ಇದು!
ಮಂಗಳೂರು: ಆಟವಾಡುತ್ತಿದ್ದಾಗ ಕಟ್ಟಡದಿಂದ ಕೆಳಗೆ ಬಿದ್ದು ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿರೋ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ.
ಈ ಘಟನೆಯು ಆಗಸ್ಟ್ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂರು ವರ್ಷದ ಬಾಲಕ ತಾಯಿ ಜೊತೆ ಬ್ಯಾಂಕ್ಗೆ ಬಂದಿದ್ದ. ಈ ವೇಳೆ ತಾಯಿ ಬ್ಯಾಂಕ್ನ ಒಳಗಿರುವಾಗ ಮಗುವು ಆಟವಾಡುತ್ತಾ ಹೊರಗೆ ಬಂದಿದೆ. ಬಳಿಕ ಕಟ್ಟಡದ ಹೊರಗೆ ಹಾಕಿದ್ದ ಕಬ್ಬಿಣದ ಗ್ರಿಲ್ ಹತ್ತಲು ಬಾಲಕ ಪ್ರಯತ್ನಿಸಿದ್ದಾನೆ.
ಆಟವಾಡುತ್ತಿದ್ದಾಗ ಕಟ್ಟಡದ ಮೇಲಿನಿಂದ ಮಗುವೊಂದು ಬಿದ್ದು ಗಂಭೀರವಾಗಿ ಗಾಯಗೊಂಡಿರೋ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ಸಂಭವಿಸಿದೆ. ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.#newsfirstlive #newsfirstkannada #KannadaNews #Mangaluru #CCTV pic.twitter.com/MhOzohdlyg
— NewsFirst Kannada (@NewsFirstKan) August 27, 2023
ಗ್ರಿಲ್ ಹತ್ತುವಾಗ ಆಯತಪ್ಪಿ ಮೊದಲ ಮಹಡಿಯಿಂದ ಗ್ರೌಂಡ್ ಫ್ಲೋರ್ಗೆ ಬಿದ್ದಿದೆ. ಬಾಲಕ ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಗುವು ಬಿದ್ದ ರಭಸಕ್ಕೆ ತಲೆ ಹಾಗೂ ಕೈಗೆ ಗಂಭೀರವಾಗಿ ಗಾಯಗಳಾಗಿದ್ದು ಕೂಡಲೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ