ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು
ಬರಡು ಜಮೀನುವೊಂದರಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ
ಅತಿಥಿ ಶಿಕ್ಷಕನನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು
ತುಮಕೂರು: ಅತಿಥಿ ಶಿಕ್ಷಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನಪಾಳ್ಯದ ಜಮೀನುವೊಂದರಲ್ಲಿ ನಡೆದಿದೆ.
ಅತಿಥಿ ಶಿಕ್ಷಕ ಮರಿಯಪ್ಪ (47) ಕೊಲೆಯಾದವರು. ಇವರು ಮೋದೂರು ಗ್ರಾಮದ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ಆದರೆ ಕುಳ್ಳನಂಜಯ್ಯನಪಾಳ್ಯದಿಂದ ಸ್ವಲ್ಪ ದೂರದಲ್ಲಿರುವ ಬೆಳೆ ಇಲ್ಲದ ಜಮೀನುವೊಂದರಲ್ಲಿ ಶಿಕ್ಷಕನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಮಚ್ಚಿನಿಂದ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಜಮೀನಿನಲ್ಲಿ ಬಿಸಾಡಿ ಹೋಗಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತದೆ. ಮೃತದೇಹ ಕಂಡು ಗ್ರಾಮಸ್ಥರು ಭಯಭೀತರಾಗಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಇನ್ನು ಅತಿಥಿ ಶಿಕ್ಷಕನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಹತ್ಯೆಯನ್ನು ಯಾರು, ಯಾವ ಉದ್ದೇಶಕ್ಕೆ ಮಾಡಿದ್ದಾರೆ ಎನ್ನುವುದು ಪೊಲೀಸರ ತನಿಖೆಯಿಂದಲೇ ತಿಳಿದು ಬರಬೇಕಿದೆ. ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು
ಬರಡು ಜಮೀನುವೊಂದರಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ
ಅತಿಥಿ ಶಿಕ್ಷಕನನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು
ತುಮಕೂರು: ಅತಿಥಿ ಶಿಕ್ಷಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ, ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಕುಣಿಗಲ್ ತಾಲೂಕಿನ ಕುಳ್ಳನಂಜಯ್ಯನಪಾಳ್ಯದ ಜಮೀನುವೊಂದರಲ್ಲಿ ನಡೆದಿದೆ.
ಅತಿಥಿ ಶಿಕ್ಷಕ ಮರಿಯಪ್ಪ (47) ಕೊಲೆಯಾದವರು. ಇವರು ಮೋದೂರು ಗ್ರಾಮದ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ಆದರೆ ಕುಳ್ಳನಂಜಯ್ಯನಪಾಳ್ಯದಿಂದ ಸ್ವಲ್ಪ ದೂರದಲ್ಲಿರುವ ಬೆಳೆ ಇಲ್ಲದ ಜಮೀನುವೊಂದರಲ್ಲಿ ಶಿಕ್ಷಕನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಮಚ್ಚಿನಿಂದ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಜಮೀನಿನಲ್ಲಿ ಬಿಸಾಡಿ ಹೋಗಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತದೆ. ಮೃತದೇಹ ಕಂಡು ಗ್ರಾಮಸ್ಥರು ಭಯಭೀತರಾಗಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಇನ್ನು ಅತಿಥಿ ಶಿಕ್ಷಕನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಹತ್ಯೆಯನ್ನು ಯಾರು, ಯಾವ ಉದ್ದೇಶಕ್ಕೆ ಮಾಡಿದ್ದಾರೆ ಎನ್ನುವುದು ಪೊಲೀಸರ ತನಿಖೆಯಿಂದಲೇ ತಿಳಿದು ಬರಬೇಕಿದೆ. ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ